<p>ಬೆಂಗಳೂರು: ‘ಯಾವುದೇ ಪೂರ್ವಸಿದ್ಧತೆ ನಡೆಸದೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಾಗಿರುವುದು ರಾಜಕೀಯ ಗಿಮಿಕ್’ ಎಂದು ಕಾಂಗ್ರೆಸ್ ವಕ್ತಾರರಾದ ಡಿ.ಕೆ. ತಾರಾದೇವಿ ಟೀಕಿಸಿದರು.<br /> <br /> ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಕೃಷಿಗೆ ಪ್ರತ್ಯೇಕವಾಗಿ ಬಜೆಟ್ ಮಂಡಿಸಲು ಸಾಕಷ್ಟು ಪೂರ್ವಸಿದ್ಧತೆ ಬೇಕಾಗುತ್ತದೆ. ಆದರೆ ಯಡಿಯೂರಪ್ಪ ಅವರು ಧಿಡೀರ್ ಆಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲು ಅನುವಾಗಿದ್ದಾರೆ. ಈ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ’ ಎಂದರು.<br /> <br /> ಯಡಿಯೂರಪ್ಪ ಸರ್ಕಾರಕ್ಕೆ ಕೃಷಿ ನೀತಿ ಎಂಬುದೇ ಇಲ್ಲ ಎಂದು ಟೀಕಿಸಿದ ಅವರು, ‘ಬೇರೆ ಖಾತೆಗಳ ಹಣವನ್ನು ಕೃಷಿಗೆ ವರ್ಗಾಯಿಸಿ, ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ರಾಜ್ಯದ ಮೊದಲ ಮುಖ್ಯಮಂತ್ರಿ ತಾವೇ ಎಂಬ ಹೆಗ್ಗಳಿಕೆ ಪಡೆಯಲು ಅವರು ಹವಣಿಸುತ್ತಿದ್ದಾರೆ’ ಎಂದರು.<br /> <br /> ‘ಈ ಸರ್ಕಾರಕ್ಕೆ ರೈತಪರ ಕಾಳಜಿ ಇಲ್ಲ. ರೈತರಿಂದ ಭೂಮಿ ಕಬಳಿಸುವುದನ್ನು ಕೈಬಿಡಬೇಕು, ರೈತರಿಗಾಗಿಯೇ ಯಾವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಯಾವುದೇ ಪೂರ್ವಸಿದ್ಧತೆ ನಡೆಸದೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಾಗಿರುವುದು ರಾಜಕೀಯ ಗಿಮಿಕ್’ ಎಂದು ಕಾಂಗ್ರೆಸ್ ವಕ್ತಾರರಾದ ಡಿ.ಕೆ. ತಾರಾದೇವಿ ಟೀಕಿಸಿದರು.<br /> <br /> ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಕೃಷಿಗೆ ಪ್ರತ್ಯೇಕವಾಗಿ ಬಜೆಟ್ ಮಂಡಿಸಲು ಸಾಕಷ್ಟು ಪೂರ್ವಸಿದ್ಧತೆ ಬೇಕಾಗುತ್ತದೆ. ಆದರೆ ಯಡಿಯೂರಪ್ಪ ಅವರು ಧಿಡೀರ್ ಆಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲು ಅನುವಾಗಿದ್ದಾರೆ. ಈ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ’ ಎಂದರು.<br /> <br /> ಯಡಿಯೂರಪ್ಪ ಸರ್ಕಾರಕ್ಕೆ ಕೃಷಿ ನೀತಿ ಎಂಬುದೇ ಇಲ್ಲ ಎಂದು ಟೀಕಿಸಿದ ಅವರು, ‘ಬೇರೆ ಖಾತೆಗಳ ಹಣವನ್ನು ಕೃಷಿಗೆ ವರ್ಗಾಯಿಸಿ, ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ರಾಜ್ಯದ ಮೊದಲ ಮುಖ್ಯಮಂತ್ರಿ ತಾವೇ ಎಂಬ ಹೆಗ್ಗಳಿಕೆ ಪಡೆಯಲು ಅವರು ಹವಣಿಸುತ್ತಿದ್ದಾರೆ’ ಎಂದರು.<br /> <br /> ‘ಈ ಸರ್ಕಾರಕ್ಕೆ ರೈತಪರ ಕಾಳಜಿ ಇಲ್ಲ. ರೈತರಿಂದ ಭೂಮಿ ಕಬಳಿಸುವುದನ್ನು ಕೈಬಿಡಬೇಕು, ರೈತರಿಗಾಗಿಯೇ ಯಾವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>