<p>ರಾಯಚೂರು: ಕೃಷಿ ವಿಶ್ವವಿದ್ಯಾಲಯಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.<br /> <br /> ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಕೃಷಿ ವಿಶ್ವವಿದ್ಯಾಲಯಗಳಿಗೆ ಸೌಲಭ್ಯಗಳು ದೊರಕಿಲ್ಲ. ಕೃಷಿ ವಿವಿಯಿಂದ ಸೌಲಭ್ಯಗಳು ವಿಶ್ವವಿದ್ಯಾಲಯಕ್ಕೆ ಸೀತವಾಗಬಾರದು. ರೈತರ ಅನುಕೂಲವಾಗುವ ರೀತಿಯಲ್ಲಿ ಕೃಷಿ ವಿವಿಗಳು ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಸರ್ಕಾರದ ಉದ್ದೇಶ ಸಕಾರಗೊಳ್ಳುತ್ತದೆ ಎಂದು ತಿಳಿಸಿದರು.<br /> <br /> ಸಾವಯವ ಕೃಷಿ ಪ್ರತ್ಯೇಕವಾಗಿದೆ.ಅದನ್ನು ಅಳವಡಿಸಿಕೊಳ್ಳುವುದು ಬಿಡುವುದು ರೈತರಿಗೆ ಬಿಟ್ಟ ವಿಚಾರವಾಗಿದೆ. ಸಾವಯವ ಕೃಷಿಯನ್ನು ಮುಂದುವರಿಸಲು ಸರ್ಕಾರ ಬೆಂಬಲಿಸುತ್ತದೆ. ಆದರೆ, ಅದರ ಹೆಸರಿನಲ್ಲಿ ಪಕ್ಷ ಕಟ್ಟುವಂಥ ಸಂಘಟನೆ ಮಾಡುವುದರನ್ನು ಸರ್ಕಾರ ಆಕ್ಷೇಪಿಸುತ್ತದೆ ಎಂದು ತಿಳಿಸಿದರು.<br /> <br /> ಕೃಷಿ ಇಲಾಖೆಯ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ನಕಲಿ ಹತ್ತಿ ಬೀಜ ಮಾರಾಟಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನಕಲಿ ಬೀಜಗಳ ಮಾರಾಟ ತಡೆಗಟ್ಟು ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಂಧನೂರು ತಾಲ್ಲೂಕಿನ ಜವಳಗೇರಾ ಕೇಂದ್ರ ತೋಟಗಾರಿ ರಾಜ್ಯದ ಕೃಷಿ ವಿವಿಗೆ ಒಪ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಅಗತ್ಯಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಕೃಷಿ ವಿಶ್ವವಿದ್ಯಾಲಯಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.<br /> <br /> ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಕೃಷಿ ವಿಶ್ವವಿದ್ಯಾಲಯಗಳಿಗೆ ಸೌಲಭ್ಯಗಳು ದೊರಕಿಲ್ಲ. ಕೃಷಿ ವಿವಿಯಿಂದ ಸೌಲಭ್ಯಗಳು ವಿಶ್ವವಿದ್ಯಾಲಯಕ್ಕೆ ಸೀತವಾಗಬಾರದು. ರೈತರ ಅನುಕೂಲವಾಗುವ ರೀತಿಯಲ್ಲಿ ಕೃಷಿ ವಿವಿಗಳು ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಸರ್ಕಾರದ ಉದ್ದೇಶ ಸಕಾರಗೊಳ್ಳುತ್ತದೆ ಎಂದು ತಿಳಿಸಿದರು.<br /> <br /> ಸಾವಯವ ಕೃಷಿ ಪ್ರತ್ಯೇಕವಾಗಿದೆ.ಅದನ್ನು ಅಳವಡಿಸಿಕೊಳ್ಳುವುದು ಬಿಡುವುದು ರೈತರಿಗೆ ಬಿಟ್ಟ ವಿಚಾರವಾಗಿದೆ. ಸಾವಯವ ಕೃಷಿಯನ್ನು ಮುಂದುವರಿಸಲು ಸರ್ಕಾರ ಬೆಂಬಲಿಸುತ್ತದೆ. ಆದರೆ, ಅದರ ಹೆಸರಿನಲ್ಲಿ ಪಕ್ಷ ಕಟ್ಟುವಂಥ ಸಂಘಟನೆ ಮಾಡುವುದರನ್ನು ಸರ್ಕಾರ ಆಕ್ಷೇಪಿಸುತ್ತದೆ ಎಂದು ತಿಳಿಸಿದರು.<br /> <br /> ಕೃಷಿ ಇಲಾಖೆಯ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ನಕಲಿ ಹತ್ತಿ ಬೀಜ ಮಾರಾಟಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನಕಲಿ ಬೀಜಗಳ ಮಾರಾಟ ತಡೆಗಟ್ಟು ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಂಧನೂರು ತಾಲ್ಲೂಕಿನ ಜವಳಗೇರಾ ಕೇಂದ್ರ ತೋಟಗಾರಿ ರಾಜ್ಯದ ಕೃಷಿ ವಿವಿಗೆ ಒಪ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಅಗತ್ಯಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>