<p><strong>ನವದೆಹಲಿ (ಪಿಟಿಐ):</strong> ಉತ್ತಮ ಮುಂಗಾರು ಲಭಿಸಿರುವುದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಈ ವಲಯಕ್ಕೆ ನೀಡುವ ಸಾಲದ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಹಣಕಾಸು ಸಚಿವಾಲಯ ಬ್ಯಾಂಕುಗಳಿಗೆ ಸೂಚನೆ ನೀಡಿದೆ.<br /> <br /> ‘ಈ ಬಾರಿ ಉತ್ತಮ ಮುಂಗಾರು ಲಭಿಸಿದೆ. ಇದರಿಂದ ಕೃಷಿ ವಲಯಕ್ಕೆ ಹೆಚ್ಚುವರಿ ಸಾಲದ ಅಗತ್ಯವಿದ್ದು, ಬೇಡಿಕೆ ಪೂರೈಸುವಂತೆ ಎಲ್ಲ ಹಣಕಾಸು ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬಜೆಟ್ನಲ್ಲಿ ಕೃಷಿ ವಲಯಕ್ಕೆ ನಿಗದಿಪಡಿಸಿದ್ದ ಸಾಲದ ಪ್ರಮಾಣವನ್ನೂ ಹೆಚ್ಚಿಸಲಾಗುವುದು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಜೆ.ಡಿ ಸೀಲಂ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ದೇಶದ ಶೇ 40ರಷ್ಟು ಜನರಿಗೆ ಸಾಂಸ್ಥಿಕ ಹಣಕಾಸು ಸಂಸ್ಥೆಗಳಿಂದ ಸಾಲ ಲಭಿಸುತ್ತಿಲ್ಲ. ಅದರಲ್ಲೂ ಹಳ್ಳಿಗಾಡಿನ ರೈತರಿಗೆ ಆರ್ಥಿಕವಾಗಿ ಹಿಂದುಳಿದವರಿಗೆ ಸಕಾಲದಲ್ಲಿ ಕೃಷಿ ಸಾಲ ಲಭಿಸುತ್ತಿಲ್ಲ. ಒಟ್ಟು ಕೃಷಿ ಸಾಲದಲ್ಲಿ ಶೇ 1ರಷ್ಟನ್ನಾದರೂ ಬಡ ರೈತರಿಗೆ ಮೀಸಲಿಡಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಉತ್ತಮ ಮುಂಗಾರು ಲಭಿಸಿರುವುದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಈ ವಲಯಕ್ಕೆ ನೀಡುವ ಸಾಲದ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಹಣಕಾಸು ಸಚಿವಾಲಯ ಬ್ಯಾಂಕುಗಳಿಗೆ ಸೂಚನೆ ನೀಡಿದೆ.<br /> <br /> ‘ಈ ಬಾರಿ ಉತ್ತಮ ಮುಂಗಾರು ಲಭಿಸಿದೆ. ಇದರಿಂದ ಕೃಷಿ ವಲಯಕ್ಕೆ ಹೆಚ್ಚುವರಿ ಸಾಲದ ಅಗತ್ಯವಿದ್ದು, ಬೇಡಿಕೆ ಪೂರೈಸುವಂತೆ ಎಲ್ಲ ಹಣಕಾಸು ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬಜೆಟ್ನಲ್ಲಿ ಕೃಷಿ ವಲಯಕ್ಕೆ ನಿಗದಿಪಡಿಸಿದ್ದ ಸಾಲದ ಪ್ರಮಾಣವನ್ನೂ ಹೆಚ್ಚಿಸಲಾಗುವುದು ಎಂದು ಹಣಕಾಸು ಖಾತೆಯ ರಾಜ್ಯ ಸಚಿವ ಜೆ.ಡಿ ಸೀಲಂ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ದೇಶದ ಶೇ 40ರಷ್ಟು ಜನರಿಗೆ ಸಾಂಸ್ಥಿಕ ಹಣಕಾಸು ಸಂಸ್ಥೆಗಳಿಂದ ಸಾಲ ಲಭಿಸುತ್ತಿಲ್ಲ. ಅದರಲ್ಲೂ ಹಳ್ಳಿಗಾಡಿನ ರೈತರಿಗೆ ಆರ್ಥಿಕವಾಗಿ ಹಿಂದುಳಿದವರಿಗೆ ಸಕಾಲದಲ್ಲಿ ಕೃಷಿ ಸಾಲ ಲಭಿಸುತ್ತಿಲ್ಲ. ಒಟ್ಟು ಕೃಷಿ ಸಾಲದಲ್ಲಿ ಶೇ 1ರಷ್ಟನ್ನಾದರೂ ಬಡ ರೈತರಿಗೆ ಮೀಸಲಿಡಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>