<p>ಬಾಗಲಕೋಟೆ: ಆಲಮಟ್ಟಿ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರುಬಿಟ್ಟಿದ್ದರಿಂದ ಏಕಾಏಕಿ ಪ್ರವಾಹ ಉಂಟಾಗಿ ತಾಲ್ಲೂಕಿನ ನಾಗಸಂಪಿಗೆ ಗ್ರಾಮದ ಬಳಿ ಯುವತಿಯೊಬ್ಬಳು ಕೊಚ್ಚಿಹೋಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.<br /> <br /> ಗ್ರಾಮದ ಚಂದ್ರವ್ವ(22) ಎಂಬುವವರು ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕಾಲುಜಾರಿ ಬಿದ್ದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸ್, ಆಗ್ನಿಶಾಮಕ ದಳದ ಸಿಬ್ಬಂದಿ ಮತ್ತು ತಹಸೀಲ್ದಾರ್ ದೇಹಕ್ಕಾಗಿ ಶೋಧ ಕೈಗೊಂಡಿದ್ದಾರೆ. <br /> <br /> <strong>ಸ್ಥಳಾಂತರ</strong>: ಮುಧೋಳ ತಾಲ್ಲೂಕಿನ ಘಟಪ್ರಭಾ ನದಿ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗಿದ್ದು, ಢವಳೇಶ್ವರದ 8 ಕುಟುಂಬಗಳನ್ನು ಮತ್ತು ಮಿರ್ಜಿ ಗ್ರಾಮದ 42 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. <br /> <br /> ಮುಧೋಳ-ಯಾದವಾಡ ಸೇತುವೆ ನೀರಿನಲ್ಲಿ ಮುಳುಗಿರುವುದರಿಂದ ಬೆಳಗಾವಿ ಜಿಲ್ಲೆಗೆ ಸಂಪರ್ಕ ಕಡಿತಗೊಂಡಿದೆ.<br /> <br /> <strong>ಬೆಳಗಾವಿ ವರದಿ:</strong> ಕೃಷ್ಣಾ ನದಿ ನೀರಿನ ಹರಿವು ಸತತ ನಾಲ್ಕನೆಯ ದಿನವೂ ಹೆಚ್ಚಳವಾಗಿದ್ದು, ಜಿಲ್ಲೆಯ ಅಥಣಿ ತಾಲ್ಲೂಕಿನ ತೀರ್ಥ ಹಾಗೂ ಸಪ್ತಸಾಗರ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ.<br /> <br /> ಅಥಣಿ ತಾಲ್ಲೂಕಿನ ನಾಲ್ಕು ಗ್ರಾಮಗಳಾದ ತೀರ್ಥ, ಸಪ್ತಸಾಗರ, ಕುಸನಾಳ ಹಾಗೂ ಮುಳವಾಡ ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಬೋಟುಗಳ ಮೂಲಕ ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ.<br /> ನೀರಿನ ಪ್ರಮಾಣ ಹೆಚ್ಚಾದ ಕಾರಣ ಹೊಸದಾಗಿ ಜಿಲ್ಲೆಯ ಅಥಣಿ ತಾಲ್ಲೂಕಿನ ಐದು ಗ್ರಾಮ ಸಂಪರ್ಕಿಸುವ ರಸ್ತೆಗಳು ನೀರಿನಲ್ಲಿ ಮುಳುಗಿವೆ. ಇದರಿಂದಾಗಿ ಮುಳುಗಡೆಯಾದ ಸೇತುವೆಗಳ ಸಂಖ್ಯೆ 21ಕ್ಕೆ ಏರಿದೆ. <br /> <br /> ಚಿಕ್ಕೋಡಿ ತಾಲ್ಲೂಕಿನ ಒಂಬತ್ತು, ಅಥಣಿ ತಾಲ್ಲೂಕಿನ ಐದು, ಹುಕ್ಕೇರಿ ತಾಲ್ಲೂಕಿನ ಮೂರು, ಖಾನಾಪುರ ತಾಲ್ಲೂಕಿನ ಎರಡು, ರಾಯಬಾಗ ಹಾಗೂ ಗೋಕಾಕ ತಾಲ್ಲೂಕಿನ ಒಂದು ಸೇತುವೆಗಳು ನೀರಿನಲ್ಲಿ ಮುಳುಗಿವೆ.<br /> <br /> ನೆರೆಯ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 2.35 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾದಿಂದ 29, ದೂಧಗಂಗಾದ 4 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಯನ್ನು ಸೇರುತ್ತಿದೆ.<br /> ವಿಜಾಪುರ ವರದಿ: ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಉಜನಿ, ವೀರಭಟ್ಕರ್ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಭೀಮಾ ನದಿಯಲ್ಲಿಯೂ ಪ್ರವಾಹ ಭೀತಿ ಎದುರಾಗಿದೆ. <br /> <br /> ಕಡಿಮೆಯಾಗಿದ್ದ ಆಲಮಟ್ಟಿ ಜಲಾಶಯದ ಒಳ ಹರಿವು ಮಂಗಳವಾರ ಸಂಜೆಯ ವೇಳೆಗೆ ಏಕಾಏಕಿ ಹೆಚ್ಚಳವಾಗಿದ್ದು, ಜಲಾಶಯಕ್ಕೆ 2.97 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈ ಅವಧಿಯಲ್ಲಿ ಇದೇ ಪ್ರಥಮ ಬಾರಿಗೆ ಎಲ್ಲ 26 ಗೇಟ್ಗಳ ಮೂಲಕ ದಾಖಲೆಯ 3 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ ಆಲಮಟ್ಟಿ ಜಲಾಶಯದ ಮುಂಭಾಗದ ಬೆಳೆಗೆ ಮತ್ತೆ ನೀರು ನುಗ್ಗಿದೆ.<br /> <br /> ಭೀಮಾ ನದಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಸಮಾನಾಂತರ ಗಡಿಯಲ್ಲಿರುವ ಬ್ಯಾರೇಜ್ಗಳು ನೀರಿನಲ್ಲಿ ಮುಳುಗಿದ್ದು, ಇಂಡಿ ತಾಲ್ಲೂಕಿನ ಚಣೇಗಾಂವ, ಗುಬ್ಬೇವಾಡ, ಸಿಂದಗಿ ತಾಲ್ಲೂಕಿನ ಕುಮಸಗಿ ಗ್ರಾಮಗಳ ರಸ್ತೆಗಳಲ್ಲಿ ನೀರು ನುಗ್ಗಿದ್ದರಿಂದ ಅಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.<br /> <br /> ನದಿ ತೀರದ ಗ್ರಾಮಗಳಾದ ಸಂಖ, ಟಾಕಳಿ, ಚಣೇಗಾಂವ, ಧೂಳಖೇಡ, ಉಮರಜ, ದಸೂರ, ಗೋವಿಂದಪೂರ ಸೇರಿದಂತೆ ಹಲವು ಗ್ರಾಮಗಳ 500ಕ್ಕೂ ಹೆಚ್ಚು ಎಕರೆಯಲ್ಲಿಯ ಬೆಳೆಗಳಿಗೆ ನೀರು ನುಗ್ಗಿದೆ. ಗೋವಿನ ಜೋಳ, ಕಬ್ಬು, ಬಾಳೆ ಮತ್ತಿತರ ಬೆಳೆಗಳು ಜಲಾವೃತಗೊಂಡಿವೆ. <br /> <br /> ಮಂಗಳವಾರ ಬೆಳಿಗ್ಗೆಯ ಸಮಯದಲ್ಲಿ ಧೂಳಖೇಡ ಹತ್ತಿರ ಭೀಮಾ ನದಿಯ ಮಟ್ಟ 11 ಮೀಟರ್ ಇತ್ತು. ಅದು ಸಂಜೆಯ ವೇಳೆಗೆ 11.34 ಮೀಟರ್ ತಲುಪಿತು. ಇಲ್ಲಿ ನೀರಿನ ಮಟ್ಟ 13 ಮೀಟರ್ಗೆ ಹೆಚ್ಚಿದರೆ ನದಿ ತೀರದಲ್ಲಿ ಪ್ರವಾಹ ಉಲ್ಬಣಿಸಿ ಹೆಚ್ಚಿನ ಹಾನಿಯನ್ನುಂಟು ಮಾಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಆಲಮಟ್ಟಿ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರುಬಿಟ್ಟಿದ್ದರಿಂದ ಏಕಾಏಕಿ ಪ್ರವಾಹ ಉಂಟಾಗಿ ತಾಲ್ಲೂಕಿನ ನಾಗಸಂಪಿಗೆ ಗ್ರಾಮದ ಬಳಿ ಯುವತಿಯೊಬ್ಬಳು ಕೊಚ್ಚಿಹೋಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.<br /> <br /> ಗ್ರಾಮದ ಚಂದ್ರವ್ವ(22) ಎಂಬುವವರು ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕಾಲುಜಾರಿ ಬಿದ್ದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸ್, ಆಗ್ನಿಶಾಮಕ ದಳದ ಸಿಬ್ಬಂದಿ ಮತ್ತು ತಹಸೀಲ್ದಾರ್ ದೇಹಕ್ಕಾಗಿ ಶೋಧ ಕೈಗೊಂಡಿದ್ದಾರೆ. <br /> <br /> <strong>ಸ್ಥಳಾಂತರ</strong>: ಮುಧೋಳ ತಾಲ್ಲೂಕಿನ ಘಟಪ್ರಭಾ ನದಿ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗಿದ್ದು, ಢವಳೇಶ್ವರದ 8 ಕುಟುಂಬಗಳನ್ನು ಮತ್ತು ಮಿರ್ಜಿ ಗ್ರಾಮದ 42 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. <br /> <br /> ಮುಧೋಳ-ಯಾದವಾಡ ಸೇತುವೆ ನೀರಿನಲ್ಲಿ ಮುಳುಗಿರುವುದರಿಂದ ಬೆಳಗಾವಿ ಜಿಲ್ಲೆಗೆ ಸಂಪರ್ಕ ಕಡಿತಗೊಂಡಿದೆ.<br /> <br /> <strong>ಬೆಳಗಾವಿ ವರದಿ:</strong> ಕೃಷ್ಣಾ ನದಿ ನೀರಿನ ಹರಿವು ಸತತ ನಾಲ್ಕನೆಯ ದಿನವೂ ಹೆಚ್ಚಳವಾಗಿದ್ದು, ಜಿಲ್ಲೆಯ ಅಥಣಿ ತಾಲ್ಲೂಕಿನ ತೀರ್ಥ ಹಾಗೂ ಸಪ್ತಸಾಗರ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ.<br /> <br /> ಅಥಣಿ ತಾಲ್ಲೂಕಿನ ನಾಲ್ಕು ಗ್ರಾಮಗಳಾದ ತೀರ್ಥ, ಸಪ್ತಸಾಗರ, ಕುಸನಾಳ ಹಾಗೂ ಮುಳವಾಡ ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಬೋಟುಗಳ ಮೂಲಕ ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ.<br /> ನೀರಿನ ಪ್ರಮಾಣ ಹೆಚ್ಚಾದ ಕಾರಣ ಹೊಸದಾಗಿ ಜಿಲ್ಲೆಯ ಅಥಣಿ ತಾಲ್ಲೂಕಿನ ಐದು ಗ್ರಾಮ ಸಂಪರ್ಕಿಸುವ ರಸ್ತೆಗಳು ನೀರಿನಲ್ಲಿ ಮುಳುಗಿವೆ. ಇದರಿಂದಾಗಿ ಮುಳುಗಡೆಯಾದ ಸೇತುವೆಗಳ ಸಂಖ್ಯೆ 21ಕ್ಕೆ ಏರಿದೆ. <br /> <br /> ಚಿಕ್ಕೋಡಿ ತಾಲ್ಲೂಕಿನ ಒಂಬತ್ತು, ಅಥಣಿ ತಾಲ್ಲೂಕಿನ ಐದು, ಹುಕ್ಕೇರಿ ತಾಲ್ಲೂಕಿನ ಮೂರು, ಖಾನಾಪುರ ತಾಲ್ಲೂಕಿನ ಎರಡು, ರಾಯಬಾಗ ಹಾಗೂ ಗೋಕಾಕ ತಾಲ್ಲೂಕಿನ ಒಂದು ಸೇತುವೆಗಳು ನೀರಿನಲ್ಲಿ ಮುಳುಗಿವೆ.<br /> <br /> ನೆರೆಯ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 2.35 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಘಟಪ್ರಭಾದಿಂದ 29, ದೂಧಗಂಗಾದ 4 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಯನ್ನು ಸೇರುತ್ತಿದೆ.<br /> ವಿಜಾಪುರ ವರದಿ: ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಉಜನಿ, ವೀರಭಟ್ಕರ್ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಭೀಮಾ ನದಿಯಲ್ಲಿಯೂ ಪ್ರವಾಹ ಭೀತಿ ಎದುರಾಗಿದೆ. <br /> <br /> ಕಡಿಮೆಯಾಗಿದ್ದ ಆಲಮಟ್ಟಿ ಜಲಾಶಯದ ಒಳ ಹರಿವು ಮಂಗಳವಾರ ಸಂಜೆಯ ವೇಳೆಗೆ ಏಕಾಏಕಿ ಹೆಚ್ಚಳವಾಗಿದ್ದು, ಜಲಾಶಯಕ್ಕೆ 2.97 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈ ಅವಧಿಯಲ್ಲಿ ಇದೇ ಪ್ರಥಮ ಬಾರಿಗೆ ಎಲ್ಲ 26 ಗೇಟ್ಗಳ ಮೂಲಕ ದಾಖಲೆಯ 3 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ ಆಲಮಟ್ಟಿ ಜಲಾಶಯದ ಮುಂಭಾಗದ ಬೆಳೆಗೆ ಮತ್ತೆ ನೀರು ನುಗ್ಗಿದೆ.<br /> <br /> ಭೀಮಾ ನದಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಸಮಾನಾಂತರ ಗಡಿಯಲ್ಲಿರುವ ಬ್ಯಾರೇಜ್ಗಳು ನೀರಿನಲ್ಲಿ ಮುಳುಗಿದ್ದು, ಇಂಡಿ ತಾಲ್ಲೂಕಿನ ಚಣೇಗಾಂವ, ಗುಬ್ಬೇವಾಡ, ಸಿಂದಗಿ ತಾಲ್ಲೂಕಿನ ಕುಮಸಗಿ ಗ್ರಾಮಗಳ ರಸ್ತೆಗಳಲ್ಲಿ ನೀರು ನುಗ್ಗಿದ್ದರಿಂದ ಅಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.<br /> <br /> ನದಿ ತೀರದ ಗ್ರಾಮಗಳಾದ ಸಂಖ, ಟಾಕಳಿ, ಚಣೇಗಾಂವ, ಧೂಳಖೇಡ, ಉಮರಜ, ದಸೂರ, ಗೋವಿಂದಪೂರ ಸೇರಿದಂತೆ ಹಲವು ಗ್ರಾಮಗಳ 500ಕ್ಕೂ ಹೆಚ್ಚು ಎಕರೆಯಲ್ಲಿಯ ಬೆಳೆಗಳಿಗೆ ನೀರು ನುಗ್ಗಿದೆ. ಗೋವಿನ ಜೋಳ, ಕಬ್ಬು, ಬಾಳೆ ಮತ್ತಿತರ ಬೆಳೆಗಳು ಜಲಾವೃತಗೊಂಡಿವೆ. <br /> <br /> ಮಂಗಳವಾರ ಬೆಳಿಗ್ಗೆಯ ಸಮಯದಲ್ಲಿ ಧೂಳಖೇಡ ಹತ್ತಿರ ಭೀಮಾ ನದಿಯ ಮಟ್ಟ 11 ಮೀಟರ್ ಇತ್ತು. ಅದು ಸಂಜೆಯ ವೇಳೆಗೆ 11.34 ಮೀಟರ್ ತಲುಪಿತು. ಇಲ್ಲಿ ನೀರಿನ ಮಟ್ಟ 13 ಮೀಟರ್ಗೆ ಹೆಚ್ಚಿದರೆ ನದಿ ತೀರದಲ್ಲಿ ಪ್ರವಾಹ ಉಲ್ಬಣಿಸಿ ಹೆಚ್ಚಿನ ಹಾನಿಯನ್ನುಂಟು ಮಾಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>