<p><strong>ಬೆಂಗಳೂರು:</strong> ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಭಾನುವಾರ ಹೆಚ್ಚಿದ್ದು. ಕೃಷ್ಣಾ ನದಿ ಹರಿವಿನಲ್ಲಿ ಸುಮಾರು ಒಂದು ಮೀಟರ್ ಏರಿಕೆ ದಾಖಲಾಗಿದೆ. ಉಪ ನದಿಗಳಾದ ದೂಧಗಂಗಾ ಮತ್ತು ವೇದಗಂಗಾ ಹರಿವಿನಲ್ಲೂ ಏರಿಕೆ ಕಂಡು ಬರುತ್ತಿದೆ.<br /> ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಮಲಿಕವಾಡ- ದತ್ತವಾಡ ಕೆಳಹಂತದ ಸೇತುವೆಯೂ ಜಲಾವೃತಗೊಂಡಿದೆ. ಇದರೊಂದಿಗೆ ಈ ತಾಲ್ಲೂಕಿನಲ್ಲಿ ಮುಳುಗಡೆಯಾಗಿರುವ ಕೆಳಮಟ್ಟದ ಸೇತುವೆಗಳ ಸಂಖ್ಯೆ 7ಕ್ಕೆ ಏರಿದೆ.<br /> <br /> ಈ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ.<br /> ಕಲ್ಲೋಳ- ಯಡೂರ, ಸದಲಗಾ- ಬೋರಗಾಂವ, ಕಾರದಗಾ-ಭೋಜ, ಭೋಜವಾಡಿ- ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ -ಭೀವಶಿ ಸೇತುವೆಗಳೂ ಇನ್ನೂ ಜಲಾವೃತವಾಗಿಯೇ ಇವೆ.<br /> <br /> ನದಿಗಳ ಹರಿವಿನಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ರೈತರು ನದಿ ತೀರದಲ್ಲಿರುವ ಹೊಲಗದ್ದೆಗಳಿಂದ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.<br /> <br /> ಹೆಚ್ಚಿದ ಒಳಹರಿವು: ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.<br /> ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಿದೆ. ಬೆಳಗಾವಿ, ಹಾವೇರಿ, ಧಾರವಾಡ, ಉತ್ತರ ಕನ್ನಡದಲ್ಲಿ ಸಣ್ಣ ಮಳೆಯಾಗಿದೆ.<br /> <br /> ಉ.ಕ. ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರದಲ್ಲಿ ಮಳೆ ಮಾಯವಾಗಿದೆ. ಅರೆಬಯಲುಸೀಮೆಯ ಹಳಿಯಾಳ, ದಾಂಡೇಲಿ, ಮುಂಡಗೋಡ ಹಾಗೂ ಮಲೆನಾಡು ಪ್ರದೇಶಗಳಾದ ಯಲ್ಲಾಪುರ, ಶಿರಸಿ ಮತ್ತು ಸಿದ್ದಾಪುರದಲ್ಲಿಯೂ ಮಳೆ ಕ್ಷೀಣಿಸಿದೆ.<br /> <br /> ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿ್ಲýೆಗಳಲ್ಲೂ ಮಳೆ ಕಡಿಮೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಭಾನುವಾರ ಹೆಚ್ಚಿದ್ದು. ಕೃಷ್ಣಾ ನದಿ ಹರಿವಿನಲ್ಲಿ ಸುಮಾರು ಒಂದು ಮೀಟರ್ ಏರಿಕೆ ದಾಖಲಾಗಿದೆ. ಉಪ ನದಿಗಳಾದ ದೂಧಗಂಗಾ ಮತ್ತು ವೇದಗಂಗಾ ಹರಿವಿನಲ್ಲೂ ಏರಿಕೆ ಕಂಡು ಬರುತ್ತಿದೆ.<br /> ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಮಲಿಕವಾಡ- ದತ್ತವಾಡ ಕೆಳಹಂತದ ಸೇತುವೆಯೂ ಜಲಾವೃತಗೊಂಡಿದೆ. ಇದರೊಂದಿಗೆ ಈ ತಾಲ್ಲೂಕಿನಲ್ಲಿ ಮುಳುಗಡೆಯಾಗಿರುವ ಕೆಳಮಟ್ಟದ ಸೇತುವೆಗಳ ಸಂಖ್ಯೆ 7ಕ್ಕೆ ಏರಿದೆ.<br /> <br /> ಈ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ.<br /> ಕಲ್ಲೋಳ- ಯಡೂರ, ಸದಲಗಾ- ಬೋರಗಾಂವ, ಕಾರದಗಾ-ಭೋಜ, ಭೋಜವಾಡಿ- ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ -ಭೀವಶಿ ಸೇತುವೆಗಳೂ ಇನ್ನೂ ಜಲಾವೃತವಾಗಿಯೇ ಇವೆ.<br /> <br /> ನದಿಗಳ ಹರಿವಿನಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ರೈತರು ನದಿ ತೀರದಲ್ಲಿರುವ ಹೊಲಗದ್ದೆಗಳಿಂದ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.<br /> <br /> ಹೆಚ್ಚಿದ ಒಳಹರಿವು: ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.<br /> ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಿದೆ. ಬೆಳಗಾವಿ, ಹಾವೇರಿ, ಧಾರವಾಡ, ಉತ್ತರ ಕನ್ನಡದಲ್ಲಿ ಸಣ್ಣ ಮಳೆಯಾಗಿದೆ.<br /> <br /> ಉ.ಕ. ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರದಲ್ಲಿ ಮಳೆ ಮಾಯವಾಗಿದೆ. ಅರೆಬಯಲುಸೀಮೆಯ ಹಳಿಯಾಳ, ದಾಂಡೇಲಿ, ಮುಂಡಗೋಡ ಹಾಗೂ ಮಲೆನಾಡು ಪ್ರದೇಶಗಳಾದ ಯಲ್ಲಾಪುರ, ಶಿರಸಿ ಮತ್ತು ಸಿದ್ದಾಪುರದಲ್ಲಿಯೂ ಮಳೆ ಕ್ಷೀಣಿಸಿದೆ.<br /> <br /> ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿ್ಲýೆಗಳಲ್ಲೂ ಮಳೆ ಕಡಿಮೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>