<p><strong>ಚಿತ್ರದುರ್ಗ: </strong>ಕೃಷ್ಣಾ ನ್ಯಾಯಾಧೀಕರಣ ನೀಡಿರುವ ತೀರ್ಪಿನಿಂದಾಗಿ ಬಯಲು ಸೀಮೆಯ ಐದು ಜಿಲ್ಲೆಗಳಿಗೆ ಅನ್ಯಾಯವಾಗಿದ್ದು, ಈ ತೀರ್ಪನ್ನು ನಾನು ವಿರೋಧಿಸುತ್ತೇನೆ ಎಂದು ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಶಿವಮೂರ್ತಿ ನಾಯ್ಕ ಹೇಳಿದರು.<br /> <br /> ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡುವಾಗ ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಬಳ್ಳಾರಿ ಜಿಲ್ಲೆಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಈ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ದೂರಿದರು.<br /> <br /> ಈ ಐದು ಪ್ರದೇಶಗಳಲ್ಲಿ ಸಿಹಿ ನೀರು, ಶುದ್ಧ ನೀರು ದೊರೆಯುವುದು ಮರೀಚಿಕೆಯಾಗಿದೆ. ಉಪ್ಪು ಮಿಶ್ರಿತ ಗಡಸು ನೀರು, ಫ್ಲೋರೈಡ್, ಕ್ಲೋರೈಡ್, ಲೆಡ್ ಪಾದರಸದಂತಹ ವಿಷ ಪೂರಿತ ನೀರು ಲಭ್ಯವಾಗುತ್ತಿದೆ.ಈ ನೀರನ್ನೇ ಜನರು ಕುಡಿದು ಸಾಂಕ್ರಾಮಿಕ ರೋಗಗಳಿಂದ ನರಳುತ್ತಿದ್ದಾರೆ ಎಂದರು.<br /> <br /> ಡಾ.ನಂಜುಂಡಪ್ಪ ವರದಿ ಅನ್ವಯ ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಕಡು ಬಡವರು, ಬಿಪಿಎಲ್ ಕುಟುಂಬಗಳು ವಾಸಿಸುತ್ತಿವೆ. ಇದನ್ನು ಪರಿಗಣಿಸದ ಕೃಷ್ಣಾ ನ್ಯಾಯಾಧೀಕರಣ ಈ ಜಿಲ್ಲೆಗಳಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲೆಯಲ್ಲಿ ಸಾವಿರ ಅಡಿ ಕೊರೆದರೂ ನೀರು ಲಭ್ಯವಾಗುತ್ತಿಲ್ಲ. ಕೃಷ್ಣಾ ನ್ಯಾಯಾಧೀಕರಣ ನೀಡಿರುವ ತೀರ್ಪು ಪುನರ್ ಪರಿಶೀಲನೆಯಾಗಬೇಕು. ಈ ಭಾಗಕ್ಕೆ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು.<br /> <br /> ಈ ಸಂಬಂಧ ಸಚಿವರೊಂದಿಗೆ ಇಲ್ಲಿನ ಶಾಸಕರೆಲ್ಲ ಒಟ್ಟಾಗಿ ಸೇರಿ ಚರ್ಚಸುತ್ತೇವೆ. ಈಗಾಗಲೇ ಅಧಿವೇಶನದ ವೇಳೆ ಈ ಭಾಗದ ಶಾಸಕರು ಮಾತುಕತೆ ನಡೆಸಿದ್ದು, ಒಗ್ಗೂಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ ಎಂದರು.<br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎ.ಸೇತೂರಾಂ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ ಕುಮಾರ್, ಮುಖಂಡ ಬಿ.ಟಿ.ಜಗದೀಶ್ ಇತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.<br /> <br /> <strong>ಆಡಳಿತ ಪಕ್ಷದಿಂದಲೇ ವಿರೋಧ</strong><br /> ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತೀರ್ಪು ಹೊರ ಬಿದ್ದ ತಕ್ಷಣವೇ ಕೃಷ್ಣಾ ನ್ಯಾಯಾಧೀಕರಣ ನೀಡಿರುವ ತೀರ್ಪು ರಾಜ್ಯದ ಮಟ್ಟಿಗೆ ಐತಿಹಾಸಿಕ ತೀರ್ಪು ಎನ್ನುವುದಾಗಿ ಹೇಳಿಕೆ ನೀಡಿದ ಬೆನ್ನ ಹಿಂದೆಯೇ ಆಡಳಿತ ಪಕ್ಷದ ಶಾಸಕ ಶಿವಮೂರ್ತಿ ನಾಯ್ಕ ವಿರೋಧ ವ್ಯಕ್ತ ಪಡಿಸುತ್ತಿರುವುದು ಅಚ್ಚರಿ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕೃಷ್ಣಾ ನ್ಯಾಯಾಧೀಕರಣ ನೀಡಿರುವ ತೀರ್ಪಿನಿಂದಾಗಿ ಬಯಲು ಸೀಮೆಯ ಐದು ಜಿಲ್ಲೆಗಳಿಗೆ ಅನ್ಯಾಯವಾಗಿದ್ದು, ಈ ತೀರ್ಪನ್ನು ನಾನು ವಿರೋಧಿಸುತ್ತೇನೆ ಎಂದು ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಶಿವಮೂರ್ತಿ ನಾಯ್ಕ ಹೇಳಿದರು.<br /> <br /> ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡುವಾಗ ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಬಳ್ಳಾರಿ ಜಿಲ್ಲೆಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಈ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ದೂರಿದರು.<br /> <br /> ಈ ಐದು ಪ್ರದೇಶಗಳಲ್ಲಿ ಸಿಹಿ ನೀರು, ಶುದ್ಧ ನೀರು ದೊರೆಯುವುದು ಮರೀಚಿಕೆಯಾಗಿದೆ. ಉಪ್ಪು ಮಿಶ್ರಿತ ಗಡಸು ನೀರು, ಫ್ಲೋರೈಡ್, ಕ್ಲೋರೈಡ್, ಲೆಡ್ ಪಾದರಸದಂತಹ ವಿಷ ಪೂರಿತ ನೀರು ಲಭ್ಯವಾಗುತ್ತಿದೆ.ಈ ನೀರನ್ನೇ ಜನರು ಕುಡಿದು ಸಾಂಕ್ರಾಮಿಕ ರೋಗಗಳಿಂದ ನರಳುತ್ತಿದ್ದಾರೆ ಎಂದರು.<br /> <br /> ಡಾ.ನಂಜುಂಡಪ್ಪ ವರದಿ ಅನ್ವಯ ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಕಡು ಬಡವರು, ಬಿಪಿಎಲ್ ಕುಟುಂಬಗಳು ವಾಸಿಸುತ್ತಿವೆ. ಇದನ್ನು ಪರಿಗಣಿಸದ ಕೃಷ್ಣಾ ನ್ಯಾಯಾಧೀಕರಣ ಈ ಜಿಲ್ಲೆಗಳಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲೆಯಲ್ಲಿ ಸಾವಿರ ಅಡಿ ಕೊರೆದರೂ ನೀರು ಲಭ್ಯವಾಗುತ್ತಿಲ್ಲ. ಕೃಷ್ಣಾ ನ್ಯಾಯಾಧೀಕರಣ ನೀಡಿರುವ ತೀರ್ಪು ಪುನರ್ ಪರಿಶೀಲನೆಯಾಗಬೇಕು. ಈ ಭಾಗಕ್ಕೆ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು.<br /> <br /> ಈ ಸಂಬಂಧ ಸಚಿವರೊಂದಿಗೆ ಇಲ್ಲಿನ ಶಾಸಕರೆಲ್ಲ ಒಟ್ಟಾಗಿ ಸೇರಿ ಚರ್ಚಸುತ್ತೇವೆ. ಈಗಾಗಲೇ ಅಧಿವೇಶನದ ವೇಳೆ ಈ ಭಾಗದ ಶಾಸಕರು ಮಾತುಕತೆ ನಡೆಸಿದ್ದು, ಒಗ್ಗೂಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ ಎಂದರು.<br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎ.ಸೇತೂರಾಂ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ ಕುಮಾರ್, ಮುಖಂಡ ಬಿ.ಟಿ.ಜಗದೀಶ್ ಇತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.<br /> <br /> <strong>ಆಡಳಿತ ಪಕ್ಷದಿಂದಲೇ ವಿರೋಧ</strong><br /> ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತೀರ್ಪು ಹೊರ ಬಿದ್ದ ತಕ್ಷಣವೇ ಕೃಷ್ಣಾ ನ್ಯಾಯಾಧೀಕರಣ ನೀಡಿರುವ ತೀರ್ಪು ರಾಜ್ಯದ ಮಟ್ಟಿಗೆ ಐತಿಹಾಸಿಕ ತೀರ್ಪು ಎನ್ನುವುದಾಗಿ ಹೇಳಿಕೆ ನೀಡಿದ ಬೆನ್ನ ಹಿಂದೆಯೇ ಆಡಳಿತ ಪಕ್ಷದ ಶಾಸಕ ಶಿವಮೂರ್ತಿ ನಾಯ್ಕ ವಿರೋಧ ವ್ಯಕ್ತ ಪಡಿಸುತ್ತಿರುವುದು ಅಚ್ಚರಿ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>