<p><strong>ತುಮಕೂರು:</strong> ರಾಜಕೀಯ ನೈಪುಣ್ಯತೆ ಹೊಂದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರ ಮಾರ್ಗದರ್ಶನದಲ್ಲಿಯೇ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮಂಗಳವಾರ ಇಲ್ಲಿ ತಿಳಿಸಿದರು.<br /> <br /> ನಗರದ ಸಿದ್ಧಾರ್ಥ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿ, ಎಸ್.ಎಂ.ಕೃಷ್ಣ, ಮರಳಿ ರಾಜ್ಯ ರಾಜಕಾರಣದತ್ತ ಮುಖ ಮಾಡಿರುವುದು, ರಾಜ್ಯ ಕಾಂಗ್ರೆಸ್ಗೆ ಹೊಸ ಚೈತನ್ಯ ತುಂಬಿದಂತಾಗಿದೆ ಎಂದು ಬಣ್ಣಿಸಿದರು. <br /> <br /> 1999ರ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದ ಎಸ್.ಎಂ.ಕೃಷ್ಣ ಅವರ ಕಾರ್ಯಶೈಲಿಯನ್ನೇ ರಾಜ್ಯದ ಜನತೆ ಬಯಸುತ್ತಿದ್ದಾರೆ. ಕೃಷ್ಣ ಅವರನ್ನು ಬಳಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸದಾಸಿದ್ಧವಾಗಿದೆ ಎಂದರು.<br /> <br /> ಅಧ್ಯಕ್ಷ ಸ್ಥಾನ ಬದಲಾವಣೆಗಳ ಮುನ್ಸೂಚನೆ ಕುರಿತು ಕೇಳಿದ್ದಕ್ಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಪರಮೇಶ್ವರ್ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರಾಜಕೀಯ ನೈಪುಣ್ಯತೆ ಹೊಂದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರ ಮಾರ್ಗದರ್ಶನದಲ್ಲಿಯೇ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮಂಗಳವಾರ ಇಲ್ಲಿ ತಿಳಿಸಿದರು.<br /> <br /> ನಗರದ ಸಿದ್ಧಾರ್ಥ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿ, ಎಸ್.ಎಂ.ಕೃಷ್ಣ, ಮರಳಿ ರಾಜ್ಯ ರಾಜಕಾರಣದತ್ತ ಮುಖ ಮಾಡಿರುವುದು, ರಾಜ್ಯ ಕಾಂಗ್ರೆಸ್ಗೆ ಹೊಸ ಚೈತನ್ಯ ತುಂಬಿದಂತಾಗಿದೆ ಎಂದು ಬಣ್ಣಿಸಿದರು. <br /> <br /> 1999ರ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದ ಎಸ್.ಎಂ.ಕೃಷ್ಣ ಅವರ ಕಾರ್ಯಶೈಲಿಯನ್ನೇ ರಾಜ್ಯದ ಜನತೆ ಬಯಸುತ್ತಿದ್ದಾರೆ. ಕೃಷ್ಣ ಅವರನ್ನು ಬಳಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸದಾಸಿದ್ಧವಾಗಿದೆ ಎಂದರು.<br /> <br /> ಅಧ್ಯಕ್ಷ ಸ್ಥಾನ ಬದಲಾವಣೆಗಳ ಮುನ್ಸೂಚನೆ ಕುರಿತು ಕೇಳಿದ್ದಕ್ಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಪರಮೇಶ್ವರ್ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>