<p><strong>ಕೆಂಗೇರಿ: </strong>ಇಲ್ಲಿನ ಕೆರೆ ಅಭಿವೃದ್ಧಿ ಕಾರ್ಯ ಅರ್ಧಕ್ಕೆ ನಿಂತಿದೆ. ಕೆರೆ ತುಂಬಾ ಕಸ- ಕಡ್ಡಿ, ಜೊಂಡು ತುಂಬಿಕೊಂಡಿದ್ದು, ನೀರು ಕಲುಷಿತಗೊಂಡಿದೆ.</p>.<p>ಕಲುಷಿತ ನೀರಿನಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸೊಳ್ಳೆ, ನೊಣ, ಹಂದಿ, ನಾಯಿಗಳ, ಹಾವಳಿಯಿಂದ ಕೆರೆಯ ಬಳಿ ಬರಲು ಜನರು ಹೆದರುತ್ತಿದ್ದಾರೆ.</p>.<p>ಕೆರೆಯ ಸುತ್ತಲೂ ಇರುವ ಪಾದಚಾರಿ ಮಾರ್ಗ ಹಾಳಾಗಿದೆ. ಸಿಮೆಂಟ್ ಬ್ಲಾಕ್ಗಳು ಮೇಲೆದ್ದು ಅವ್ಯವಸ್ಥೆ ಉಂಟಾಗಿದೆ.</p>.<p>ಅರಣ್ಯ ಇಲಾಖೆಯು ಐದಾರು ವರ್ಷಗಳ ಹಿಂದೆಯೇ ಆರಂಭಿಸಿದ ಅಭಿವೃದ್ಧಿ ಕಾಮಗಾರಿ ಅಪೂರ್ಣವಾಗಿ ಉಳಿದಿದೆ. ಯೋಜನೆ ಪ್ರಕಾರ ದೋಣಿ ವಿಹಾರ ಆರಂಭಿಸಿದ್ದಿದ್ದರೆ ಆದಾಯವೂ ಬರುತ್ತಿತ್ತು. ನಾಗರಿಕರಿಗೂ ಸಂತೋಷದಿಂದ ಕಾಲ ಕಳೆಯಲು ಒಳ್ಳೆಯ ತಾಣವೂ ಸಿಗುತ್ತಿತ್ತು.</p>.<p>32.16 ಎಕರೆ ವಿಸ್ತೀರ್ಣ ಹೊಂದಿರುವ ಕೆರೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿದರೆ ಸುತ್ತ ಮುತ್ತಲಿನ ನಿವಾಸಿಗಳು ಮತ್ತು ಪ್ರವಾಸಿಗರ ಪಾಲಿಗೆ ಕೆರೆಯು ಆಕರ್ಷಕ ಪ್ರವಾಸಿ ತಾಣವಾಗಿ ಹೊರಹೊಮ್ಮಲಿದೆ.</p>.<p>ಇನ್ನಾದರೂ ಇಲಾಖೆಯ ಅಧಿಕಾರಿಗಳು ಕೆರೆಯನ್ನು ಅಭಿವೃದ್ದಿ ಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ಸಾರ್ವಜನಿಕರು, ಸಂಘ, ಸಂಸ್ಥೆಗಳು ಸೇರಿ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ: </strong>ಇಲ್ಲಿನ ಕೆರೆ ಅಭಿವೃದ್ಧಿ ಕಾರ್ಯ ಅರ್ಧಕ್ಕೆ ನಿಂತಿದೆ. ಕೆರೆ ತುಂಬಾ ಕಸ- ಕಡ್ಡಿ, ಜೊಂಡು ತುಂಬಿಕೊಂಡಿದ್ದು, ನೀರು ಕಲುಷಿತಗೊಂಡಿದೆ.</p>.<p>ಕಲುಷಿತ ನೀರಿನಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಸೊಳ್ಳೆ, ನೊಣ, ಹಂದಿ, ನಾಯಿಗಳ, ಹಾವಳಿಯಿಂದ ಕೆರೆಯ ಬಳಿ ಬರಲು ಜನರು ಹೆದರುತ್ತಿದ್ದಾರೆ.</p>.<p>ಕೆರೆಯ ಸುತ್ತಲೂ ಇರುವ ಪಾದಚಾರಿ ಮಾರ್ಗ ಹಾಳಾಗಿದೆ. ಸಿಮೆಂಟ್ ಬ್ಲಾಕ್ಗಳು ಮೇಲೆದ್ದು ಅವ್ಯವಸ್ಥೆ ಉಂಟಾಗಿದೆ.</p>.<p>ಅರಣ್ಯ ಇಲಾಖೆಯು ಐದಾರು ವರ್ಷಗಳ ಹಿಂದೆಯೇ ಆರಂಭಿಸಿದ ಅಭಿವೃದ್ಧಿ ಕಾಮಗಾರಿ ಅಪೂರ್ಣವಾಗಿ ಉಳಿದಿದೆ. ಯೋಜನೆ ಪ್ರಕಾರ ದೋಣಿ ವಿಹಾರ ಆರಂಭಿಸಿದ್ದಿದ್ದರೆ ಆದಾಯವೂ ಬರುತ್ತಿತ್ತು. ನಾಗರಿಕರಿಗೂ ಸಂತೋಷದಿಂದ ಕಾಲ ಕಳೆಯಲು ಒಳ್ಳೆಯ ತಾಣವೂ ಸಿಗುತ್ತಿತ್ತು.</p>.<p>32.16 ಎಕರೆ ವಿಸ್ತೀರ್ಣ ಹೊಂದಿರುವ ಕೆರೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿದರೆ ಸುತ್ತ ಮುತ್ತಲಿನ ನಿವಾಸಿಗಳು ಮತ್ತು ಪ್ರವಾಸಿಗರ ಪಾಲಿಗೆ ಕೆರೆಯು ಆಕರ್ಷಕ ಪ್ರವಾಸಿ ತಾಣವಾಗಿ ಹೊರಹೊಮ್ಮಲಿದೆ.</p>.<p>ಇನ್ನಾದರೂ ಇಲಾಖೆಯ ಅಧಿಕಾರಿಗಳು ಕೆರೆಯನ್ನು ಅಭಿವೃದ್ದಿ ಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ಸಾರ್ವಜನಿಕರು, ಸಂಘ, ಸಂಸ್ಥೆಗಳು ಸೇರಿ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>