<p><strong>ಬೆಂಗಳೂರು: </strong>ಕೆಂಪಾಂಬುದಿ ಕೆರೆಗೆ ಹರಿಯುತ್ತಿರುವ ಕೊಳಚೆ ನೀರನ್ನು ತಡೆದು, ಬೇರೆ ಮಾರ್ಗದ ಮೂಲಕ ಚರಂಡಿಗೆ ಸಂಪರ್ಕ ಕಲ್ಪಿಸಬೇಕು ಎಂದು ಮೇಯರ್ ಬಿ.ಎಸ್. ಸತ್ಯನಾರಾಯಣ, ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಚಿಕ್ಕಪೇಟೆ ಕ್ಷೇತ್ರದ ಶಾಸಕ ಆರ್.ವಿ. ದೇವರಾಜ್ ಮತ್ತು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಅವರೊಂದಿಗೆ ಮಂಗಳವಾರ ಕೆರೆ ಪರಿಶೀಲಿಸಿದ ಅವರು, ಈ ಸೂಚನೆ ನೀಡಿದರು.<br /> <br /> ಕೆರೆಯ ಅಭಿವೃದ್ಧಿಗೆ ಒಂದು ತಿಂಗಳ ಒಳಗಾಗಿ ಯೋಜನೆಯನ್ನು ಸಿದ್ಧಪಡಿಸಿ, ಅಭಿವೃದ್ಧಿಗೆ ಚಾಲನೆ ನೀಡಬೇಕು. ಅಗತ್ಯವಾದ ಹಣಕಾಸಿನ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು. <br /> <br /> ಕೆರೆಯಲ್ಲಿರುವ ಹೂಳನ್ನು ಸಂಪೂರ್ಣವಾಗಿ ತೆಗೆದು, ಸ್ವಚ್ಛಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು. <br /> ಕೆರೆಯ ಆವರಣದಲ್ಲಿರುವ ಬಂಡಿಕಾಳಮ್ಮ ದೇವಸ್ಥಾನದ ಸುತ್ತಮುತ್ತ ಸುಮಾರು ೫ರಿಂದ ೬ ಎಕರೆ ಪ್ರದೇಶ ಅತಿಕ್ರಮಣಗೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದಿನ ಭಾನುವಾರ ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ದೇವರಾಜ್ ತಿಳಿಸಿದರು. ಕಾರ್ಯಾಚರಣೆಯಲ್ಲಿ ಭಾಗವಹಿಸುವುದಾಗಿ ಮೇಯರ್ ಭರವಸೆ ನೀಡಿದರು.<br /> <br /> ಕೆಂಪಾಂಬುದಿ ಕೆರೆ ಪ್ರದೇಶದ ರಸ್ತೆಗಳಲ್ಲಿ ಕಟ್ಟಡದ ಭಗ್ನಾವಶೇಷಗಳನ್ನು ಸುರಿಯಲಾಗಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಆಯುಕ್ತರು ತಕ್ಷಣ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕು ಮತ್ತು ಅದನ್ನು ಸುರಿದವರಿಗೆ ದಂಡ ವಿಧಿಸಬೇಕು ಎಂದು ತಿಳಿಸಿದರು.<br /> <br /> ಬಸವನಗುಡಿಯಲ್ಲಿ ಇರುವ ಪಾಲಿಕೆಯ ಮಾರುಕಟ್ಟೆಗೆ ತಂಡ ಭೇಟಿ ನೀಡಿತು. ಪಾರ್ಕಿಂಗ್ ಸೌಲಭ್ಯವೂ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಮೇಯರ್ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಂಪಾಂಬುದಿ ಕೆರೆಗೆ ಹರಿಯುತ್ತಿರುವ ಕೊಳಚೆ ನೀರನ್ನು ತಡೆದು, ಬೇರೆ ಮಾರ್ಗದ ಮೂಲಕ ಚರಂಡಿಗೆ ಸಂಪರ್ಕ ಕಲ್ಪಿಸಬೇಕು ಎಂದು ಮೇಯರ್ ಬಿ.ಎಸ್. ಸತ್ಯನಾರಾಯಣ, ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಚಿಕ್ಕಪೇಟೆ ಕ್ಷೇತ್ರದ ಶಾಸಕ ಆರ್.ವಿ. ದೇವರಾಜ್ ಮತ್ತು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಅವರೊಂದಿಗೆ ಮಂಗಳವಾರ ಕೆರೆ ಪರಿಶೀಲಿಸಿದ ಅವರು, ಈ ಸೂಚನೆ ನೀಡಿದರು.<br /> <br /> ಕೆರೆಯ ಅಭಿವೃದ್ಧಿಗೆ ಒಂದು ತಿಂಗಳ ಒಳಗಾಗಿ ಯೋಜನೆಯನ್ನು ಸಿದ್ಧಪಡಿಸಿ, ಅಭಿವೃದ್ಧಿಗೆ ಚಾಲನೆ ನೀಡಬೇಕು. ಅಗತ್ಯವಾದ ಹಣಕಾಸಿನ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು. <br /> <br /> ಕೆರೆಯಲ್ಲಿರುವ ಹೂಳನ್ನು ಸಂಪೂರ್ಣವಾಗಿ ತೆಗೆದು, ಸ್ವಚ್ಛಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು. <br /> ಕೆರೆಯ ಆವರಣದಲ್ಲಿರುವ ಬಂಡಿಕಾಳಮ್ಮ ದೇವಸ್ಥಾನದ ಸುತ್ತಮುತ್ತ ಸುಮಾರು ೫ರಿಂದ ೬ ಎಕರೆ ಪ್ರದೇಶ ಅತಿಕ್ರಮಣಗೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದಿನ ಭಾನುವಾರ ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ದೇವರಾಜ್ ತಿಳಿಸಿದರು. ಕಾರ್ಯಾಚರಣೆಯಲ್ಲಿ ಭಾಗವಹಿಸುವುದಾಗಿ ಮೇಯರ್ ಭರವಸೆ ನೀಡಿದರು.<br /> <br /> ಕೆಂಪಾಂಬುದಿ ಕೆರೆ ಪ್ರದೇಶದ ರಸ್ತೆಗಳಲ್ಲಿ ಕಟ್ಟಡದ ಭಗ್ನಾವಶೇಷಗಳನ್ನು ಸುರಿಯಲಾಗಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಆಯುಕ್ತರು ತಕ್ಷಣ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಬೇಕು ಮತ್ತು ಅದನ್ನು ಸುರಿದವರಿಗೆ ದಂಡ ವಿಧಿಸಬೇಕು ಎಂದು ತಿಳಿಸಿದರು.<br /> <br /> ಬಸವನಗುಡಿಯಲ್ಲಿ ಇರುವ ಪಾಲಿಕೆಯ ಮಾರುಕಟ್ಟೆಗೆ ತಂಡ ಭೇಟಿ ನೀಡಿತು. ಪಾರ್ಕಿಂಗ್ ಸೌಲಭ್ಯವೂ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಮೇಯರ್ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>