<p><strong>ಕೃಷ್ಣರಾಜಪುರ:</strong> ಈ ವ್ಯಾಪ್ತಿಯ ಬಹುತೇಕ ಬಡಾವಣೆಗಳಲ್ಲಿ ಬೆಂಗಳೂರು ಜಲಮಂಡಳಿ ಸಿಬ್ಬಂದಿ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿಗೆ ತುರ್ತು ಕೊಳವೆ ಅಳವಡಿಸಲು ಅವೈಜ್ಞಾನಿಕ ರೀತಿಯಲ್ಲಿ ರಸ್ತೆಯನ್ನು ಮಧ್ಯಭಾಗದಲ್ಲಿ ಮನಸೋ ಇಚ್ಛೆ ಅಗೆಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.<br /> <br /> ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ವಿಸ್ತರಣೆ ಜತೆಗೆ ಡಾಂಬರೀಕರಣ ಕಾಮಗಾರಿ ಬಹುತೇಕ ಕಡೆ ಈಗಾಗಲೇ ಪೂರ್ಣಗೊಂಡಿದೆ. ವಾಹನಗಳ ಸುಗಮ ಸಂಚಾರಕ್ಕೂ ಯೋಗ್ಯವಾಗಿದೆ. ಆದರೆ, ಜಲಮಂಡಳಿಯು ರಸ್ತೆ ಅಗೆದಿರುವುದರಿಂದ ಅವ್ಯವಸ್ಥೆ ಉಂಟಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.<br /> <br /> `ಜಲಮಂಡಳಿ ಅಗೆದ ಭಾಗಗಳನ್ನು ಸರಿಯಾಗಿ ಮುಚ್ಚುವುದಿಲ್ಲ. ಮಳೆ ಬಂದಾಗ ನೀರು ನಿಂತು ಗುಂಡಿಗಳಾಗುತ್ತವೆ. ಇಡೀ ಬಡಾವಣೆಯ ರಸ್ತೆಗಳು ಹದಗೆಡುತ್ತಿವೆ~ ಎಂದು ಸ್ಥಳೀಯ ನಿವಾಸಿ ಕೃಷ್ಣಯ್ಯ ಬೇಸರ ವ್ಯಕ್ತಪಡಿಸಿದರು.<br /> <br /> `ರಸ್ತೆ ದುರಸ್ತಿಗೆ ಮೊದಲು ಕೊಳವೆ ಅಳವಡಿಸುವಂತೆ ಬಿಬಿಎಂಪಿ ಸದಸ್ಯರಿಗೆ ಮನವಿ ಮಾಡಿದ್ದೂ ಆಗಿದೆ. ಆದರೆ, ದುರಸ್ತಿಗೊಳಗಾದ ರಸ್ತೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಮುಂದುವರಿಯುತ್ತಲೇ ಇದೆ. ಈ ಅವ್ಯವಸ್ಥೆ ಸಾರ್ವಜನಿಕರನ್ನು ಸಂಕಷ್ಟಕ್ಕೀಡು ಮಾಡಿದೆ~ ಎಂದು ಸಾಮಾಜಿಕ ಕಾರ್ಯಕರ್ತ ಮುರಳಿ ಅಳಲು ತೋಡಿಕೊಂಡರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ:</strong> ಈ ವ್ಯಾಪ್ತಿಯ ಬಹುತೇಕ ಬಡಾವಣೆಗಳಲ್ಲಿ ಬೆಂಗಳೂರು ಜಲಮಂಡಳಿ ಸಿಬ್ಬಂದಿ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿಗೆ ತುರ್ತು ಕೊಳವೆ ಅಳವಡಿಸಲು ಅವೈಜ್ಞಾನಿಕ ರೀತಿಯಲ್ಲಿ ರಸ್ತೆಯನ್ನು ಮಧ್ಯಭಾಗದಲ್ಲಿ ಮನಸೋ ಇಚ್ಛೆ ಅಗೆಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.<br /> <br /> ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ವಿಸ್ತರಣೆ ಜತೆಗೆ ಡಾಂಬರೀಕರಣ ಕಾಮಗಾರಿ ಬಹುತೇಕ ಕಡೆ ಈಗಾಗಲೇ ಪೂರ್ಣಗೊಂಡಿದೆ. ವಾಹನಗಳ ಸುಗಮ ಸಂಚಾರಕ್ಕೂ ಯೋಗ್ಯವಾಗಿದೆ. ಆದರೆ, ಜಲಮಂಡಳಿಯು ರಸ್ತೆ ಅಗೆದಿರುವುದರಿಂದ ಅವ್ಯವಸ್ಥೆ ಉಂಟಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.<br /> <br /> `ಜಲಮಂಡಳಿ ಅಗೆದ ಭಾಗಗಳನ್ನು ಸರಿಯಾಗಿ ಮುಚ್ಚುವುದಿಲ್ಲ. ಮಳೆ ಬಂದಾಗ ನೀರು ನಿಂತು ಗುಂಡಿಗಳಾಗುತ್ತವೆ. ಇಡೀ ಬಡಾವಣೆಯ ರಸ್ತೆಗಳು ಹದಗೆಡುತ್ತಿವೆ~ ಎಂದು ಸ್ಥಳೀಯ ನಿವಾಸಿ ಕೃಷ್ಣಯ್ಯ ಬೇಸರ ವ್ಯಕ್ತಪಡಿಸಿದರು.<br /> <br /> `ರಸ್ತೆ ದುರಸ್ತಿಗೆ ಮೊದಲು ಕೊಳವೆ ಅಳವಡಿಸುವಂತೆ ಬಿಬಿಎಂಪಿ ಸದಸ್ಯರಿಗೆ ಮನವಿ ಮಾಡಿದ್ದೂ ಆಗಿದೆ. ಆದರೆ, ದುರಸ್ತಿಗೊಳಗಾದ ರಸ್ತೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಮುಂದುವರಿಯುತ್ತಲೇ ಇದೆ. ಈ ಅವ್ಯವಸ್ಥೆ ಸಾರ್ವಜನಿಕರನ್ನು ಸಂಕಷ್ಟಕ್ಕೀಡು ಮಾಡಿದೆ~ ಎಂದು ಸಾಮಾಜಿಕ ಕಾರ್ಯಕರ್ತ ಮುರಳಿ ಅಳಲು ತೋಡಿಕೊಂಡರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>