<p><strong>ಬೆಂಗಳೂರು</strong>: ‘ಹೆರಿಗೆಗೆ ದಾಖಲಾದ ನನ್ನ ಪತ್ನಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡದೆ, ಆಕೆಯ ಸಾವಿಗೆ ಕಾರಣರಾದ ವೈದ್ಯರಿಗೆ ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ಕೇವಲ ಎಚ್ಚರಿಕೆ ನೀಡಿದೆ’ ಎಂದು ಮೃತಳ ಪತಿ ಮಿಲ್ಕ್ ಕಾಲೋನಿ ನಿವಾಸಿ ವಿ. ಸಂತೋಷ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2011 ಆಗಸ್ಟ್ 14ರಂದು ಪತ್ನಿ ಕವಿತಾ ಅವರನ್ನು ಹೆರಿಗೆಗಾಗಿ ಮಲ್ಲೇಶ್ವರದ ಲಕ್ಷ್ಮೀ ಮೆಟರ್ನಿಟಿ ಹೋಮ್ಗೆ ದಾಖಲಿಸಿದ್ದೆ. ಆದರೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕವಿತಾ ಮಗುವಿಗೆ ಜನ್ಮ ನೀಡಿದ ನಂತರ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದರು’ ಎಂದರು.<br /> <br /> ‘ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯೆ ಲೀಲಾ ರಾವ್, ವೈದ್ಯೆ ವೀಣಾ ಶಿವಕುಮಾರ್, ವೈದ್ಯೆ ನಿಶ್ಚಿತಾ ಹಾಗೂ ಅರವಳಿಕೆ ತಜ್ಞ ವೈದ್ಯ ಸುರೇಂದ್ರ ಅವರ ವಿರುದ್ಧ ಕೆಎಂಸಿಗೆ ದೂರು ನೀಡಿದ್ದೆ’ ಎಂದರು.<br /> <br /> ‘ವಿಚಾರಣೆ ಸಮಯದಲ್ಲಿ ವೈದ್ಯೆ ವೀಣಾ ಅವರು ತಮ್ಮ ನೋಂದಣಿಯನ್ನು ನವೀಕರಿಸದೇ ಇರುವ ವಿಷಯ ತಿಳಿದು ಬಂತು. ಈ ಹಿನ್ನೆಲೆಯಲ್ಲಿ ಅವರನ್ನು ಎರಡು ವರ್ಷ ಅಮಾನತುಗೊಳಿಸಿದ ಮಂಡಳಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ವೈದ್ಯರಿಗೆ ಕೇವಲ ಎಚ್ಚರಿಕೆ ನೀಡಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೆರಿಗೆಗೆ ದಾಖಲಾದ ನನ್ನ ಪತ್ನಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡದೆ, ಆಕೆಯ ಸಾವಿಗೆ ಕಾರಣರಾದ ವೈದ್ಯರಿಗೆ ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ಕೇವಲ ಎಚ್ಚರಿಕೆ ನೀಡಿದೆ’ ಎಂದು ಮೃತಳ ಪತಿ ಮಿಲ್ಕ್ ಕಾಲೋನಿ ನಿವಾಸಿ ವಿ. ಸಂತೋಷ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2011 ಆಗಸ್ಟ್ 14ರಂದು ಪತ್ನಿ ಕವಿತಾ ಅವರನ್ನು ಹೆರಿಗೆಗಾಗಿ ಮಲ್ಲೇಶ್ವರದ ಲಕ್ಷ್ಮೀ ಮೆಟರ್ನಿಟಿ ಹೋಮ್ಗೆ ದಾಖಲಿಸಿದ್ದೆ. ಆದರೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕವಿತಾ ಮಗುವಿಗೆ ಜನ್ಮ ನೀಡಿದ ನಂತರ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದರು’ ಎಂದರು.<br /> <br /> ‘ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯೆ ಲೀಲಾ ರಾವ್, ವೈದ್ಯೆ ವೀಣಾ ಶಿವಕುಮಾರ್, ವೈದ್ಯೆ ನಿಶ್ಚಿತಾ ಹಾಗೂ ಅರವಳಿಕೆ ತಜ್ಞ ವೈದ್ಯ ಸುರೇಂದ್ರ ಅವರ ವಿರುದ್ಧ ಕೆಎಂಸಿಗೆ ದೂರು ನೀಡಿದ್ದೆ’ ಎಂದರು.<br /> <br /> ‘ವಿಚಾರಣೆ ಸಮಯದಲ್ಲಿ ವೈದ್ಯೆ ವೀಣಾ ಅವರು ತಮ್ಮ ನೋಂದಣಿಯನ್ನು ನವೀಕರಿಸದೇ ಇರುವ ವಿಷಯ ತಿಳಿದು ಬಂತು. ಈ ಹಿನ್ನೆಲೆಯಲ್ಲಿ ಅವರನ್ನು ಎರಡು ವರ್ಷ ಅಮಾನತುಗೊಳಿಸಿದ ಮಂಡಳಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ವೈದ್ಯರಿಗೆ ಕೇವಲ ಎಚ್ಚರಿಕೆ ನೀಡಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>