<p><strong>ಬೆಂಗಳೂರು</strong>: ಕರ್ನಾಟಕ ಆಡಳಿತ ನ್ಯಾಯಮಂಡಳಿಯ (ಕೆ.ಎ.ಟಿ) ಪೀಠವನ್ನು ಬೆಂಗಳೂರಿನ ಇಂದಿರಾ ನಗರದಿಂದ ಕೆಂಪೇಗೌಡ ರಸ್ತೆಯಲ್ಲಿರುವ `ಕಂದಾಯ ಭವನ'ದ ಕಟ್ಟಡಕ್ಕೆ ಸೆಪ್ಟೆಂಬರ್ ವೇಳೆಗೆ ಸ್ಥಳಾಂತರ ಮಾಡಬೇಕು ಎಂದು ಹೈಕೋರ್ಟ್ ಸರ್ಕಾರ ಮತ್ತು ಕೆಎಟಿ ರಿಜಿಸ್ಟ್ರಾರ್ಗೆ ಶುಕ್ರವಾರ ನಿರ್ದೇಶನ ನೀಡಿದೆ.<br /> <br /> ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ವಿವರಣೆ ನೀಡಿದ ಸರ್ಕಾರದ ಪರ ವಕೀಲರು, `ಕಂದಾಯ ಭವನದಲ್ಲಿ ಕೆಎಟಿ ಪೀಠ ಸ್ಥಾಪನೆಗೆ ಅಗತ್ಯ ಕೆಲಸ ನಡೆಯುತ್ತಿದೆ. ಶೇಕಡ 70ರಷ್ಟು ಪೂರ್ಣಗೊಂಡಿದೆ. ಎರಡು ತಿಂಗಳ ಕಾಲಾವಕಾಶ ನೀಡಿ, ಕೆಲಸ ಪೂರ್ಣಗೊಳ್ಳುತ್ತದೆ' ಎಂದರು.<br /> <br /> ಕೆಲಸ ಪೂರ್ಣಗೊಂಡ ಒಂದೂವರೆ ತಿಂಗಳಲ್ಲಿ, ಅಲ್ಲಿಗೆ ಪೀಠವನ್ನು ಸ್ಥಳಾಂತರ ಮಾಡಲಾಗುವುದು ಎಂದು ಕೆಎಟಿ ಪರ ವಕೀಲರು ತಿಳಿಸಿದರು. ಇದನ್ನು ದಾಖಲು ಮಾಡಿಕೊಂಡ ನ್ಯಾಯಪೀಠ, `ಪೀಠ ಸ್ಥಳಾಂತರಕ್ಕೆ ಅಗತ್ಯವಿರುವ ಕೆಲಸಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಸಿಬೇಕು. ಅದಾದ ಒಂದು ತಿಂಗಳಲ್ಲಿ ಪೀಠವನ್ನು ಅಲ್ಲಿಗೆ ಸ್ಥಳಾಂತರ ಮಾಡಬೇಕು' ಎಂಬ ನಿರ್ದೇಶನ ನೀಡಿ, ಅರ್ಜಿ ಇತ್ಯರ್ಥಪಡಿಸಿತು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಆಡಳಿತ ನ್ಯಾಯಮಂಡಳಿಯ (ಕೆ.ಎ.ಟಿ) ಪೀಠವನ್ನು ಬೆಂಗಳೂರಿನ ಇಂದಿರಾ ನಗರದಿಂದ ಕೆಂಪೇಗೌಡ ರಸ್ತೆಯಲ್ಲಿರುವ `ಕಂದಾಯ ಭವನ'ದ ಕಟ್ಟಡಕ್ಕೆ ಸೆಪ್ಟೆಂಬರ್ ವೇಳೆಗೆ ಸ್ಥಳಾಂತರ ಮಾಡಬೇಕು ಎಂದು ಹೈಕೋರ್ಟ್ ಸರ್ಕಾರ ಮತ್ತು ಕೆಎಟಿ ರಿಜಿಸ್ಟ್ರಾರ್ಗೆ ಶುಕ್ರವಾರ ನಿರ್ದೇಶನ ನೀಡಿದೆ.<br /> <br /> ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ವಿವರಣೆ ನೀಡಿದ ಸರ್ಕಾರದ ಪರ ವಕೀಲರು, `ಕಂದಾಯ ಭವನದಲ್ಲಿ ಕೆಎಟಿ ಪೀಠ ಸ್ಥಾಪನೆಗೆ ಅಗತ್ಯ ಕೆಲಸ ನಡೆಯುತ್ತಿದೆ. ಶೇಕಡ 70ರಷ್ಟು ಪೂರ್ಣಗೊಂಡಿದೆ. ಎರಡು ತಿಂಗಳ ಕಾಲಾವಕಾಶ ನೀಡಿ, ಕೆಲಸ ಪೂರ್ಣಗೊಳ್ಳುತ್ತದೆ' ಎಂದರು.<br /> <br /> ಕೆಲಸ ಪೂರ್ಣಗೊಂಡ ಒಂದೂವರೆ ತಿಂಗಳಲ್ಲಿ, ಅಲ್ಲಿಗೆ ಪೀಠವನ್ನು ಸ್ಥಳಾಂತರ ಮಾಡಲಾಗುವುದು ಎಂದು ಕೆಎಟಿ ಪರ ವಕೀಲರು ತಿಳಿಸಿದರು. ಇದನ್ನು ದಾಖಲು ಮಾಡಿಕೊಂಡ ನ್ಯಾಯಪೀಠ, `ಪೀಠ ಸ್ಥಳಾಂತರಕ್ಕೆ ಅಗತ್ಯವಿರುವ ಕೆಲಸಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಸಿಬೇಕು. ಅದಾದ ಒಂದು ತಿಂಗಳಲ್ಲಿ ಪೀಠವನ್ನು ಅಲ್ಲಿಗೆ ಸ್ಥಳಾಂತರ ಮಾಡಬೇಕು' ಎಂಬ ನಿರ್ದೇಶನ ನೀಡಿ, ಅರ್ಜಿ ಇತ್ಯರ್ಥಪಡಿಸಿತು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>