<p>ಬೆಂಗಳೂರು: `ನಾರಾಯಣ ಗುರುಗಳ ಆದರ್ಶದಂತೆ ಬದುಕಿದ `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಪತ್ರಿಕಾ ಸಮೂಹದ ಸಂಸ್ಥಾಪಕರಾದ ಕೆ.ಎನ್. ಗುರುಸ್ವಾಮಿ ಅವರು ಹಿಂದುಳಿದ ಈಡಿಗ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ~ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಜೆ.ಪಿ.ನಾರಾಯಣಸ್ವಾಮಿ ಹೇಳಿದರು.<br /> <br /> ಇತ್ತೀಚೆಗೆ ಸಂಘವು ಹಮ್ಮಿಕೊಂಡಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, `ಗುರುಸ್ವಾಮಿ ಹಾಗೂ ಕೆ.ವೆಂಕಟಸ್ವಾಮಿ ಅವರ ಮುಂದಾಲೋಚನೆಯ ಪ್ರತಿಫಲವಾಗಿ ಸುಧಾ ಸಹಕಾರಿ ಬ್ಯಾಂಕ್ ಸ್ಥಾಪನೆಯಾಯಿತು. ಸೋಲೂರಿನ ಆರ್ಯ ಈಡಿಗ ಮಠಕ್ಕೆ ಉತ್ತೇಜನ ದೊರೆಯಿತು~ ಎಂದು ಹೇಳಿದರು.<br /> <br /> ಸಹಕಾರ ಸಂಘದ ಜಂಟಿ ನಿಬಂಧಕ ಬಿ.ಎ.ಮಹೇಶ್ವರಪ್ಪ, `ಗುರುಸ್ವಾಮಿ ಹಾಗೂ ವೆಂಕಟಸ್ವಾಮಿ ಅವರು ಈಡಿಗ ಸಮುದಾಯದ ಪಿತಾಮಹರಾಗಿ ಬೆಳೆದಿದ್ದಾರೆ. ಜನಾಂಗವನ್ನು ಶೈಕ್ಷಣಿಕವಾಗಿ ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಶ್ರಮಿಸಿದ್ದಾರೆ~ ಎಂದು ತಿಳಿಸಿದರು.<br /> <br /> ಬೆಂಗಳೂರು ಈಡಿಗ ವಿದ್ಯಾರ್ಥಿ ನಿಲಯದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಆರ್. ಕೃಷ್ಣಪ್ಪ, `ಗುರುಸ್ವಾಮಿ ಮತ್ತು ಕೆ.ವೆಂಕಟಸ್ವಾಮಿ ಅವರ ಜ್ಞಾಪಕಾರ್ಥವಾಗಿ ನಗರದ ರಸ್ತೆ ಅಥವಾ ವೃತ್ತಕ್ಕೆ ಅವರ ಹೆಸರಿಡಬೇಕು~ ಎಂದು ಮನವಿ ನೀಡಿದರು.<br /> <br /> ಪತ್ರಕರ್ತ ವಿ.ವೆಂಕಟೇಶ್ ಮಾತನಾಡಿದರು. ಸಮಾರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜೆ.ಕಾಳೇಗೌಡ, ಖಜಾಂಚಿ ಕೆ.ಜಿ.ಹನುಮಂತರಾಜು, ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಟಿ.ವಿಜಯ ನರಸಿಂಹಯ್ಯ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ನಾರಾಯಣ ಗುರುಗಳ ಆದರ್ಶದಂತೆ ಬದುಕಿದ `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಪತ್ರಿಕಾ ಸಮೂಹದ ಸಂಸ್ಥಾಪಕರಾದ ಕೆ.ಎನ್. ಗುರುಸ್ವಾಮಿ ಅವರು ಹಿಂದುಳಿದ ಈಡಿಗ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ~ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಜೆ.ಪಿ.ನಾರಾಯಣಸ್ವಾಮಿ ಹೇಳಿದರು.<br /> <br /> ಇತ್ತೀಚೆಗೆ ಸಂಘವು ಹಮ್ಮಿಕೊಂಡಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, `ಗುರುಸ್ವಾಮಿ ಹಾಗೂ ಕೆ.ವೆಂಕಟಸ್ವಾಮಿ ಅವರ ಮುಂದಾಲೋಚನೆಯ ಪ್ರತಿಫಲವಾಗಿ ಸುಧಾ ಸಹಕಾರಿ ಬ್ಯಾಂಕ್ ಸ್ಥಾಪನೆಯಾಯಿತು. ಸೋಲೂರಿನ ಆರ್ಯ ಈಡಿಗ ಮಠಕ್ಕೆ ಉತ್ತೇಜನ ದೊರೆಯಿತು~ ಎಂದು ಹೇಳಿದರು.<br /> <br /> ಸಹಕಾರ ಸಂಘದ ಜಂಟಿ ನಿಬಂಧಕ ಬಿ.ಎ.ಮಹೇಶ್ವರಪ್ಪ, `ಗುರುಸ್ವಾಮಿ ಹಾಗೂ ವೆಂಕಟಸ್ವಾಮಿ ಅವರು ಈಡಿಗ ಸಮುದಾಯದ ಪಿತಾಮಹರಾಗಿ ಬೆಳೆದಿದ್ದಾರೆ. ಜನಾಂಗವನ್ನು ಶೈಕ್ಷಣಿಕವಾಗಿ ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಶ್ರಮಿಸಿದ್ದಾರೆ~ ಎಂದು ತಿಳಿಸಿದರು.<br /> <br /> ಬೆಂಗಳೂರು ಈಡಿಗ ವಿದ್ಯಾರ್ಥಿ ನಿಲಯದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಆರ್. ಕೃಷ್ಣಪ್ಪ, `ಗುರುಸ್ವಾಮಿ ಮತ್ತು ಕೆ.ವೆಂಕಟಸ್ವಾಮಿ ಅವರ ಜ್ಞಾಪಕಾರ್ಥವಾಗಿ ನಗರದ ರಸ್ತೆ ಅಥವಾ ವೃತ್ತಕ್ಕೆ ಅವರ ಹೆಸರಿಡಬೇಕು~ ಎಂದು ಮನವಿ ನೀಡಿದರು.<br /> <br /> ಪತ್ರಕರ್ತ ವಿ.ವೆಂಕಟೇಶ್ ಮಾತನಾಡಿದರು. ಸಮಾರಂಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜೆ.ಕಾಳೇಗೌಡ, ಖಜಾಂಚಿ ಕೆ.ಜಿ.ಹನುಮಂತರಾಜು, ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಟಿ.ವಿಜಯ ನರಸಿಂಹಯ್ಯ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>