<p><strong>ಬೆಂಗಳೂರು:</strong> ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೂ 65.05 ಕೋಟಿ ಲಾಭ ಗಳಿಸುವ ಮೂಲಕ ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಪೈಕಿ ಮುಂಚೂಣಿ ಸ್ಥಾನ ಪಡೆದುಕೊಂಡಿದೆ.<br /> <br /> ಈ ಸಾಧನೆಗಾಗಿ ನಿಗಮವು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ನೀಡುವ `ಎಎಸ್ಆರ್ಟಿಯು~ ಪ್ರಶಸ್ತಿಗೆ ಪಾತ್ರವಾಗಿದೆ. ನವದೆಹಲಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಇಲಾಖೆಯ ಕಾರ್ಯದರ್ಶಿ ಎ.ಕೆ. ಉಪಾಧ್ಯಾಯ ಅವರು ಪ್ರಶಸ್ತಿಯನ್ನು ನಿಗಮದ ಭದ್ರತೆ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಬಿ.ಕೆ. ಸಿಂಗ್ ಅವರಿಗೆ ಪ್ರದಾನ ಮಾಡಿದರು. ಪ್ರಶಸ್ತಿಯು ರೂ1ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿದೆ.<br /> <br /> 2001ನೇ ಸಾಲಿನವರೆಗೆ ಒಟ್ಟು ರೂ328.45 ಕೋಟಿಗಳಷ್ಟು ನಷ್ಟ ಅನುಭವಿಸಿದ್ದ ಕೆಎಸ್ಆರ್ಟಿಸಿ ಈಗ ತನ್ನೆಲ್ಲ ನಷ್ಟವನ್ನು ಅಳಿಸಿಹಾಕಿ ನಿವ್ವಳ ರೂ43.15 ಕೋಟಿಗಳಷ್ಟು ಲಾಭದಲ್ಲಿದೆ ಎಂದು ಪ್ರಕಟಣೆ ತಿಳಿಸಿದೆ.<br /> <br /> `ಎಎಸ್ಆರ್ಟಿಯು~ ದೇಶದ ವಿವಿಧ ರಾಜ್ಯಗಳ ಒಟ್ಟು 53 ರಸ್ತೆ ಸಾರಿಗೆ ಸಂಸ್ಥೆಗಳ ಪ್ರಾತಿನಿಧ್ಯ ಹೊಂದಿರುವ ಒಕ್ಕೂಟವಾಗಿದ್ದು, ವಿವಿಧ ಸಾರಿಗೆ ಸಂಸ್ಥೆಗಳ ಕಾರ್ಯಕ್ಷಮತೆ ಪರಿಶೀಲಿಸಿ ಪ್ರಶಸ್ತಿ ನೀಡುತ್ತದೆ. <br /> ಕಳೆದ ಮೂರು ವರ್ಷಗಳಲ್ಲಿ ನಿಗಮ ಪಡೆದುಕೊಂಡಿರುವ 35ನೇ ಪ್ರಶಸ್ತಿ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೂ 65.05 ಕೋಟಿ ಲಾಭ ಗಳಿಸುವ ಮೂಲಕ ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಪೈಕಿ ಮುಂಚೂಣಿ ಸ್ಥಾನ ಪಡೆದುಕೊಂಡಿದೆ.<br /> <br /> ಈ ಸಾಧನೆಗಾಗಿ ನಿಗಮವು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ನೀಡುವ `ಎಎಸ್ಆರ್ಟಿಯು~ ಪ್ರಶಸ್ತಿಗೆ ಪಾತ್ರವಾಗಿದೆ. ನವದೆಹಲಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಇಲಾಖೆಯ ಕಾರ್ಯದರ್ಶಿ ಎ.ಕೆ. ಉಪಾಧ್ಯಾಯ ಅವರು ಪ್ರಶಸ್ತಿಯನ್ನು ನಿಗಮದ ಭದ್ರತೆ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಬಿ.ಕೆ. ಸಿಂಗ್ ಅವರಿಗೆ ಪ್ರದಾನ ಮಾಡಿದರು. ಪ್ರಶಸ್ತಿಯು ರೂ1ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿದೆ.<br /> <br /> 2001ನೇ ಸಾಲಿನವರೆಗೆ ಒಟ್ಟು ರೂ328.45 ಕೋಟಿಗಳಷ್ಟು ನಷ್ಟ ಅನುಭವಿಸಿದ್ದ ಕೆಎಸ್ಆರ್ಟಿಸಿ ಈಗ ತನ್ನೆಲ್ಲ ನಷ್ಟವನ್ನು ಅಳಿಸಿಹಾಕಿ ನಿವ್ವಳ ರೂ43.15 ಕೋಟಿಗಳಷ್ಟು ಲಾಭದಲ್ಲಿದೆ ಎಂದು ಪ್ರಕಟಣೆ ತಿಳಿಸಿದೆ.<br /> <br /> `ಎಎಸ್ಆರ್ಟಿಯು~ ದೇಶದ ವಿವಿಧ ರಾಜ್ಯಗಳ ಒಟ್ಟು 53 ರಸ್ತೆ ಸಾರಿಗೆ ಸಂಸ್ಥೆಗಳ ಪ್ರಾತಿನಿಧ್ಯ ಹೊಂದಿರುವ ಒಕ್ಕೂಟವಾಗಿದ್ದು, ವಿವಿಧ ಸಾರಿಗೆ ಸಂಸ್ಥೆಗಳ ಕಾರ್ಯಕ್ಷಮತೆ ಪರಿಶೀಲಿಸಿ ಪ್ರಶಸ್ತಿ ನೀಡುತ್ತದೆ. <br /> ಕಳೆದ ಮೂರು ವರ್ಷಗಳಲ್ಲಿ ನಿಗಮ ಪಡೆದುಕೊಂಡಿರುವ 35ನೇ ಪ್ರಶಸ್ತಿ ಇದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>