<p>ದಾವಣಗೆರೆ: ಹಿರಿಯ ಸಮಾಜವಾದಿ, ಮಾಜಿ ಶಾಸಕ ಕುರ್ಕಿ ಗೌಡ್ರ ಮಹೇಶ್ವರಪ್ಪ (84) ಸೋಮವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.<br /> <br /> ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಎಂಟು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಮಹೇಶ್ವರಪ್ಪ ಅವರಿಗೆ ಪತ್ನಿ, ಪುತ್ರಿ ಇದ್ದಾರೆ. <br /> <br /> ಸಮಾಜವಾದಿ ರಾಮಮನೋಹರ ಲೋಹಿಯಾ ಅವರ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದ ಮಹೇಶ್ವರಪ್ಪ ಅವರು, ಶಾಂತವೇರಿ ಗೋಪಾಲಗೌಡರ ಗರಡಿಯಲ್ಲಿ ಪಳಗಿದವರು. ಮಾಜಿ ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್. ಪಟೇಲ್ ಮತ್ತು ಎಸ್. ಬಂಗಾರಪ್ಪ ಅವರ ಆಪ್ತ ಒಡನಾಡಿಯಾಗಿದ್ದ ಮಹೇಶ್ವರಪ್ಪ ಸಂಡೂರು ಭೂ ಹೋರಾಟದಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. <br /> <br /> ಶಾಂತವೇರಿ, ಜೆ.ಎಚ್. ಪಟೇಲ್, ಎಸ್. ವೆಂಕಟರಾಮ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಅಸ್ತಿತ್ವ ತಂದಿದ್ದರು. 1965ರಿಂದ 70ರ ತನಕ ಸೋಷಲಿಸ್ಟ್ ಪಕ್ಷದ ಅಧ್ಯಕ್ಷರಾಗಿದ್ದರು. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರದಿಂದ 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ನಂತರ ರಾಜ್ಯಸಭಾ ಸದಸ್ಯರಾಗಿಯೂ (1986-92) ಆಯ್ಕೆಯಾಗಿದ್ದರು. <br /> <br /> ಅಂತ್ಯಕ್ರಿಯೆ: ಮಹೇಶ್ವರಪ್ಪ ಅವರ ಅಂತ್ಯಕ್ರಿಯೆ ಸ್ವಗ್ರಾಮ ಕುರ್ಕಿಯಲ್ಲಿ ಸೋಮವಾರ ಸಂಜೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಹಿರಿಯ ಸಮಾಜವಾದಿ, ಮಾಜಿ ಶಾಸಕ ಕುರ್ಕಿ ಗೌಡ್ರ ಮಹೇಶ್ವರಪ್ಪ (84) ಸೋಮವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.<br /> <br /> ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಎಂಟು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಮಹೇಶ್ವರಪ್ಪ ಅವರಿಗೆ ಪತ್ನಿ, ಪುತ್ರಿ ಇದ್ದಾರೆ. <br /> <br /> ಸಮಾಜವಾದಿ ರಾಮಮನೋಹರ ಲೋಹಿಯಾ ಅವರ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದ ಮಹೇಶ್ವರಪ್ಪ ಅವರು, ಶಾಂತವೇರಿ ಗೋಪಾಲಗೌಡರ ಗರಡಿಯಲ್ಲಿ ಪಳಗಿದವರು. ಮಾಜಿ ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್. ಪಟೇಲ್ ಮತ್ತು ಎಸ್. ಬಂಗಾರಪ್ಪ ಅವರ ಆಪ್ತ ಒಡನಾಡಿಯಾಗಿದ್ದ ಮಹೇಶ್ವರಪ್ಪ ಸಂಡೂರು ಭೂ ಹೋರಾಟದಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. <br /> <br /> ಶಾಂತವೇರಿ, ಜೆ.ಎಚ್. ಪಟೇಲ್, ಎಸ್. ವೆಂಕಟರಾಮ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಅಸ್ತಿತ್ವ ತಂದಿದ್ದರು. 1965ರಿಂದ 70ರ ತನಕ ಸೋಷಲಿಸ್ಟ್ ಪಕ್ಷದ ಅಧ್ಯಕ್ಷರಾಗಿದ್ದರು. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರದಿಂದ 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ನಂತರ ರಾಜ್ಯಸಭಾ ಸದಸ್ಯರಾಗಿಯೂ (1986-92) ಆಯ್ಕೆಯಾಗಿದ್ದರು. <br /> <br /> ಅಂತ್ಯಕ್ರಿಯೆ: ಮಹೇಶ್ವರಪ್ಪ ಅವರ ಅಂತ್ಯಕ್ರಿಯೆ ಸ್ವಗ್ರಾಮ ಕುರ್ಕಿಯಲ್ಲಿ ಸೋಮವಾರ ಸಂಜೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>