<p>ನಗರದ ಜೆ.ಸಿ.ರಸ್ತೆಯ ಕೆನರಾ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಇತ್ತೀಚೆಗೆ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.<br /> <br /> ಅತಿಥಿಯಾಗಿ ಆಗಮಿಸಿದ್ದ ಲೇಖಕಿ ಸುಧಾಮೂರ್ತಿ ಮಾತನಾಡಿ ಮಹಿಳೆಯರ ವರ್ಚಸ್ಸು ಮತ್ತು ಆಂತರಿಕ ಬಲ ಹೆಚ್ಚಾಗಬೇಕಿದೆ. ಸಮಾಜ ಹಾಗೂ ಕುಟುಂಬದಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.<br /> <br /> ದಕ್ಷಿಣ ವಲಯ ಡಿಸಿಪಿ ಸೋನಿಯಾ ನಾರಂಗ್ ಮಾತನಾಡಿ ಇಂದು ಪರಿಚಿತರಿಂದಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ದೌರ್ಜನ್ಯ ಕೊನೆಯಾಗಬೇಕು. ಮಹಿಳೆ ತನ್ನನ್ನು ತಾನು ರಕ್ಷಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.<br /> <br /> ಆಸ್ಟಿರೋಪೋಸಿಸ್ ಸಂಸ್ಥೆಯ ಸಂಸ್ಥಾಪಕ ಟ್ರಸ್ಟಿ ಮೈತ್ರಿ ಶಂಕರ್ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಮುಂದಾಗಬೇಕು. ಆರ್ಥಿಕವಾಗಿ ದೈಹಿಕವಾಗಿಯೂ ಮಹಿಳೆಯರು ಸಬಲರಾಗಬೇಕಿದೆ ಎಂದು ಹೇಳಿದರು. <br /> <br /> ಕಾರ್ಯನಿರ್ವಾಹಕ ನಿರ್ದೇಶಕ ಆಚಾರ್ಯ ಎಸ್. ಭಾರ್ಗವ್ ಪ್ರಸ್ತಾವಿಕ ಮಾತನಾಡಿದರು. ಜನರಲ್ ಮ್ಯಾನೇಜರ್ ಕೆ.ಎಸ್.ಪ್ರಭಾಕರ್ ರಾವ್ ಸ್ವಾಗತಿಸಿದರು. ಎಸ್.ಎಸ್.ಭಟ್ ವಂದಿಸಿದರು.ಇದೇ ಸಂದರ್ಭದಲ್ಲಿ ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಸನ್ಮಾನಿಸಲಾಯಿತು. <br /> <br /> ಸ್ವಸಹಾಯ ಗುಂಪುಗಳಿಗೆ ಒಂದು ಕೋಟಿ ರೂಪಾಯಿ ಮೊತ್ತದ ಸಾಲ ವಿತರಣೆ ಮಾಡಲಾಯಿತು. ಗ್ರಾಮೀಣ ಮಹಿಳೆಯ ಸಬಲೀಕರಣ- ಹಸಿವು ಮತ್ತು ಬಡತನದ ನಿರ್ಮೂಲನೆ~ ಎಂಬ ಉದ್ದೇಶಕ್ಕಾಗಿ ನೆರೆದವರೆಲ್ಲ ಕೈಗೂಡಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಗರದ ಜೆ.ಸಿ.ರಸ್ತೆಯ ಕೆನರಾ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಇತ್ತೀಚೆಗೆ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.<br /> <br /> ಅತಿಥಿಯಾಗಿ ಆಗಮಿಸಿದ್ದ ಲೇಖಕಿ ಸುಧಾಮೂರ್ತಿ ಮಾತನಾಡಿ ಮಹಿಳೆಯರ ವರ್ಚಸ್ಸು ಮತ್ತು ಆಂತರಿಕ ಬಲ ಹೆಚ್ಚಾಗಬೇಕಿದೆ. ಸಮಾಜ ಹಾಗೂ ಕುಟುಂಬದಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.<br /> <br /> ದಕ್ಷಿಣ ವಲಯ ಡಿಸಿಪಿ ಸೋನಿಯಾ ನಾರಂಗ್ ಮಾತನಾಡಿ ಇಂದು ಪರಿಚಿತರಿಂದಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ದೌರ್ಜನ್ಯ ಕೊನೆಯಾಗಬೇಕು. ಮಹಿಳೆ ತನ್ನನ್ನು ತಾನು ರಕ್ಷಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.<br /> <br /> ಆಸ್ಟಿರೋಪೋಸಿಸ್ ಸಂಸ್ಥೆಯ ಸಂಸ್ಥಾಪಕ ಟ್ರಸ್ಟಿ ಮೈತ್ರಿ ಶಂಕರ್ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಮುಂದಾಗಬೇಕು. ಆರ್ಥಿಕವಾಗಿ ದೈಹಿಕವಾಗಿಯೂ ಮಹಿಳೆಯರು ಸಬಲರಾಗಬೇಕಿದೆ ಎಂದು ಹೇಳಿದರು. <br /> <br /> ಕಾರ್ಯನಿರ್ವಾಹಕ ನಿರ್ದೇಶಕ ಆಚಾರ್ಯ ಎಸ್. ಭಾರ್ಗವ್ ಪ್ರಸ್ತಾವಿಕ ಮಾತನಾಡಿದರು. ಜನರಲ್ ಮ್ಯಾನೇಜರ್ ಕೆ.ಎಸ್.ಪ್ರಭಾಕರ್ ರಾವ್ ಸ್ವಾಗತಿಸಿದರು. ಎಸ್.ಎಸ್.ಭಟ್ ವಂದಿಸಿದರು.ಇದೇ ಸಂದರ್ಭದಲ್ಲಿ ಯಶಸ್ವಿ ಮಹಿಳಾ ಉದ್ಯಮಿಗಳಿಗೆ ಸನ್ಮಾನಿಸಲಾಯಿತು. <br /> <br /> ಸ್ವಸಹಾಯ ಗುಂಪುಗಳಿಗೆ ಒಂದು ಕೋಟಿ ರೂಪಾಯಿ ಮೊತ್ತದ ಸಾಲ ವಿತರಣೆ ಮಾಡಲಾಯಿತು. ಗ್ರಾಮೀಣ ಮಹಿಳೆಯ ಸಬಲೀಕರಣ- ಹಸಿವು ಮತ್ತು ಬಡತನದ ನಿರ್ಮೂಲನೆ~ ಎಂಬ ಉದ್ದೇಶಕ್ಕಾಗಿ ನೆರೆದವರೆಲ್ಲ ಕೈಗೂಡಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>