<p>ಬೆಂಗಳೂರು: ‘2011 ರಲ್ಲಿ ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆದ ಅಕ್ರಮ ಕುರಿತು ಸಿಐಡಿ ಅಧಿಕಾರಿಗಳು ಮೂರು ತಿಂಗಳ ಹಿಂದೆಯೇ ಸಲ್ಲಿಸಿರುವ ವರದಿಯನ್ನು ಸರ್ಕಾರ ಈ ಕೂಡಲೇ ಬಹಿರಂಗಪಡಿಸಬೇಕು’ ಎಂದು ಲೋಕಸತ್ತಾ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ರವಿ ಕೃಷ್ಣಾರೆಡ್ಡಿ ಆಗ್ರಹಿಸಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ವರದಿಯನ್ನು ತಕ್ಷಣವೇ ಬಹಿರಂಗಪಡಿಸಬೆಕು. ಇಲ್ಲವಾದರೆ, ಲೋಕಸತ್ತಾ ಪಕ್ಷವು ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಲಿದೆ’ ಎಂದು ಎಚ್ಚರಿಕೆ ನೀಡಿದರು.<br /> <br /> ‘ಮುಂದಿನ ನೇಮಕಾತಿಗಳ ಬಗ್ಗೆ ದೀರ್ಘಕಾಲ ಪರಿಣಾಮ ಬೀರುವಂತಹ ಕ್ರಮಗಳನ್ನು ಕೈಗೊಳ್ಳುವ ಬದಲು ಸರ್ಕಾರ ದಿವ್ಯ ಮೌನವಹಿಸಿದೆ. ಅಕ್ರಮ ಎಸಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ಅನ್ಯಾಯಕ್ಕೆ ಒಳಗಾಗಿರುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಅವರು ಒತ್ತಾಯಿಸಿದರು.<br /> ‘ಸರ್ಕಾರವು ಈ ಕೂಡಲೇ ಸಿಐಡಿ ವರದಿಯ ಆಧಾರದ ಮೇಲೆ, ತನ್ನ ಹಿಂದಿನ ನೇಮಕಾತಿ ಆದೇಶವನ್ನು ಹಿಂದಕ್ಕೆ ಪಡೆದು, 2011 ರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈ ಬಿಡಬೇಕು. ಭ್ರಷ್ಟರ ಮೇಲೆ ಅತಿ ಶೀಘ್ರದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘2011 ರಲ್ಲಿ ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆದ ಅಕ್ರಮ ಕುರಿತು ಸಿಐಡಿ ಅಧಿಕಾರಿಗಳು ಮೂರು ತಿಂಗಳ ಹಿಂದೆಯೇ ಸಲ್ಲಿಸಿರುವ ವರದಿಯನ್ನು ಸರ್ಕಾರ ಈ ಕೂಡಲೇ ಬಹಿರಂಗಪಡಿಸಬೇಕು’ ಎಂದು ಲೋಕಸತ್ತಾ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ರವಿ ಕೃಷ್ಣಾರೆಡ್ಡಿ ಆಗ್ರಹಿಸಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ವರದಿಯನ್ನು ತಕ್ಷಣವೇ ಬಹಿರಂಗಪಡಿಸಬೆಕು. ಇಲ್ಲವಾದರೆ, ಲೋಕಸತ್ತಾ ಪಕ್ಷವು ವರದಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಲಿದೆ’ ಎಂದು ಎಚ್ಚರಿಕೆ ನೀಡಿದರು.<br /> <br /> ‘ಮುಂದಿನ ನೇಮಕಾತಿಗಳ ಬಗ್ಗೆ ದೀರ್ಘಕಾಲ ಪರಿಣಾಮ ಬೀರುವಂತಹ ಕ್ರಮಗಳನ್ನು ಕೈಗೊಳ್ಳುವ ಬದಲು ಸರ್ಕಾರ ದಿವ್ಯ ಮೌನವಹಿಸಿದೆ. ಅಕ್ರಮ ಎಸಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ಅನ್ಯಾಯಕ್ಕೆ ಒಳಗಾಗಿರುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಅವರು ಒತ್ತಾಯಿಸಿದರು.<br /> ‘ಸರ್ಕಾರವು ಈ ಕೂಡಲೇ ಸಿಐಡಿ ವರದಿಯ ಆಧಾರದ ಮೇಲೆ, ತನ್ನ ಹಿಂದಿನ ನೇಮಕಾತಿ ಆದೇಶವನ್ನು ಹಿಂದಕ್ಕೆ ಪಡೆದು, 2011 ರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈ ಬಿಡಬೇಕು. ಭ್ರಷ್ಟರ ಮೇಲೆ ಅತಿ ಶೀಘ್ರದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>