ಕೆಪಿಸಿಸಿ ಎಸ್ಸಿ ಘಟಕದ ತೀರ್ಮಾನ:ಎಲ್ಲ ಕ್ಷೇತ್ರಗಳಲ್ಲೂ ಎಸ್ಸಿ ಉಪಸಮಿತಿ
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣಾ ಸಿದ್ಧತೆಯ ಭಾಗವಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪರಿಶಿಷ್ಟ ಜಾತಿ ಘಟಕದ ಉಪ ಸಮಿತಿಗಳನ್ನು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎನ್.ಮಂಜುನಾಥ್ ತಿಳಿಸಿದರು.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಪರಿಶಿಷ್ಟ ಜಾತಿಯ ಮತದಾರರನ್ನು ಕಾಂಗ್ರೆಸ್ನತ್ತ ಸೆಳೆಯಲು ಈ ಸಮಿತಿಗಳನ್ನು ನೇಮಕ ಮಾಡಲಾಗುವುದು. ಪಕ್ಷದಲ್ಲಿ ಸಕ್ರಿಯವಾಗಿರುವ ಪರಿಶಿಷ್ಟ ಜಾತಿಯ ಹಿರಿಯ ಮುಖಂಡರ ನೇತೃತ್ವದಲ್ಲಿ ಈ ಸಮಿತಿಗಳನ್ನು ನೇಮಿಸಲಾಗುವುದು. ಇವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲಾಗುವುದು~ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ ನಡೆದಿಲ್ಲ. ಏಳು ಸಾವಿರ ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಉಳಿದಿವೆ. ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ 18 ಸಾವಿರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು.
ಈ ಸರ್ಕಾರದ ಅವಧಿಯಲ್ಲಿ ದಲಿತರ ಮೇಲೆ ದೌರ್ಜನ್ಯವೂ ಹೆಚ್ಚುತ್ತಿದೆ. ಇವನ್ನೆಲ್ಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.