<p>ಬೆಂಗಳೂರು: ಕಾರ್ಯಕರ್ತರಿಗೆ ಪಕ್ಷದ ತತ್ವ-ಸಿದ್ಧಾಂತಗಳ ಕುರಿತು ಪಾಠ ಹೇಳುವ `ಚಿಂತನ ಮಂಥನ~ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ ಕೆಪಿಸಿಸಿ, ಕ್ರೈಸ್ತ ಸಮುದಾಯಕ್ಕೆ ಸೇರಿದ ಪಕ್ಷದ ಮುಖಂಡರ ಸಭೆಯನ್ನು ಶನಿವಾರ ನಡೆಸಿತು.<br /> <br /> ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಪಕ್ಷದ ಇಲ್ಲಿನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್, ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ, ಮಾಜಿ ಸಚಿವ ಟಿ. ಜಾನ್ ಇತರರು ಭಾಗವಹಿಸಿದ್ದರು.<br /> <br /> ಸಭೆಯಲ್ಲಿ ಮಾತನಾಡಿದ ಪರಮೇಶ್ವರ್, `ರಾಜ್ಯದಲ್ಲಿ ಚರ್ಚ್ಗಳ ಮೇಲೆ ನಡೆದ ದಾಳಿಯ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಬಿ. ಸೋಮಶೇಖರ್ ನೇತೃತ್ವದ ಆಯೋಗ ತನ್ನ ವರದಿ ಸಲ್ಲಿಸಿ 10 ತಿಂಗಳು ಕಳೆದಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.<br /> <br /> ಚರ್ಚ್ಗಳ ಮೇಲಿನ ದಾಳಿ ಪ್ರಕರಣಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ದಾಖಲು ಮಾಡಿದ್ದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಲಾಗಿತ್ತು. ಅದು ಕೂಡ ಜಾರಿಯಾಗಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವು ಮುಖಂಡರು ಅತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಾರ್ಯಕರ್ತರಿಗೆ ಪಕ್ಷದ ತತ್ವ-ಸಿದ್ಧಾಂತಗಳ ಕುರಿತು ಪಾಠ ಹೇಳುವ `ಚಿಂತನ ಮಂಥನ~ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ ಕೆಪಿಸಿಸಿ, ಕ್ರೈಸ್ತ ಸಮುದಾಯಕ್ಕೆ ಸೇರಿದ ಪಕ್ಷದ ಮುಖಂಡರ ಸಭೆಯನ್ನು ಶನಿವಾರ ನಡೆಸಿತು.<br /> <br /> ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಪಕ್ಷದ ಇಲ್ಲಿನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್, ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ, ಮಾಜಿ ಸಚಿವ ಟಿ. ಜಾನ್ ಇತರರು ಭಾಗವಹಿಸಿದ್ದರು.<br /> <br /> ಸಭೆಯಲ್ಲಿ ಮಾತನಾಡಿದ ಪರಮೇಶ್ವರ್, `ರಾಜ್ಯದಲ್ಲಿ ಚರ್ಚ್ಗಳ ಮೇಲೆ ನಡೆದ ದಾಳಿಯ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಬಿ. ಸೋಮಶೇಖರ್ ನೇತೃತ್ವದ ಆಯೋಗ ತನ್ನ ವರದಿ ಸಲ್ಲಿಸಿ 10 ತಿಂಗಳು ಕಳೆದಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.<br /> <br /> ಚರ್ಚ್ಗಳ ಮೇಲಿನ ದಾಳಿ ಪ್ರಕರಣಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ದಾಖಲು ಮಾಡಿದ್ದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಲಾಗಿತ್ತು. ಅದು ಕೂಡ ಜಾರಿಯಾಗಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವು ಮುಖಂಡರು ಅತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>