<p>ಚಿಕ್ಕಮಗಳೂರು: ಪಶ್ಚಿಮ ಘಟ್ಟ ಸಾಲಿನ ಚಂದ್ರದ್ರೋಣ ಪರ್ವತ ಶ್ರೇಣಿಯ ನಿಸರ್ಗದ ಮಡಿಲಿನಲ್ಲಿರುವ ಕೆಮ್ಮಣ್ಣುಗುಂಡಿಯಲ್ಲಿ ಕಬ್ಬಿಣ ಅದಿರು ಗಣಿಗಾರಿಕೆಯನ್ನು ಶಾಶ್ವತವಾಗಿ ನಡೆಸದಂತೆ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.<br /> <br /> ಭದ್ರಾ ಹುಲಿ ಸಂರಕ್ಷಿತ ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಸೂಕ್ಷ್ಮ ಪರಿಸರ ಪ್ರದೇಶ ಎನಿಸಿರುವ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸದಂತೆ ಶಾಶ್ವತ ನಿರ್ಬಂಧ ವಿಧಿಸಿ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ್ ಆದೇಶ ನೀಡಿದರು.<br /> <br /> ಕೆಮ್ಮಣ್ಣುಗುಂಡಿಯಲ್ಲಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಂಪನಿ 1923ರಿಂದ 1983ರವರೆಗೆ ಆರು ದಶಕಗಳ ಕಾಲ ನಿರಂತರವಾಗಿ ಕಬ್ಬಿಣ ಅದಿರು ಗಣಿಗಾರಿಕೆ ನಡೆಸಿತ್ತು. ಗಣಿಗಾರಿಕೆ ನಿಯಮಾವಳಿಯಂತೆ ಮೂರು ಅವಧಿಯ ಪರವಾನಗಿ ಮುಗಿದ ಹಿನ್ನೆಲೆಯಲ್ಲಿ 1983ರಿಂದ ಈ ಪ್ರದೇಶದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. <br /> <br /> ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಬ್ಬಿಣ ಅದಿರಿಗೆ ಬೇಡಿಕೆ ಸೃಷ್ಟಿಯಾದಾಗ 1995ರಲ್ಲಿ ಮತ್ತೆ ಈ ಪ್ರದೇಶದಲ್ಲಿ ವಿಎಸ್ಐಎಲ್ ಸಂಸ್ಥೆ ಹೆಸರಿನಲ್ಲಿ ಮೂರು ಖಾಸಗಿ ಕಂಪೆನಿಗಳು ಉಪ ಗುತ್ತಿಗೆ ಪಡೆದು ಪುನಃ ಗಣಿಗಾರಿಕೆ ಆರಂಭಿಸಿದ್ದವು. ಇದನ್ನು ಪ್ರಶ್ನಿಸಿ ಸ್ಥಳೀಯ ಪರಿಸರ ಸಂಘಟನೆ ವೈಲ್ಡ್ ಕ್ಯಾಟ್- ಸಿ ಮತ್ತು ಐವರು ಪರಿಸರವಾದಿಗಳು 2008ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. <br /> <br /> ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಮತ್ತು ಗಣಿಗಾರಿಕೆ ಕಾನೂನು ಉಲ್ಲಂಘಿಸಿ ಗಣಿಗಾರಿಕೆ ಮಾಡುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. <br /> <br /> ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಂಪೆನಿಯಿಂದ ಉಪ ಗುತ್ತಿಗೆ ಪಡೆದ ಕಂಪೆನಿಗಳು ಈ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತ್ತಿಲ್ಲ. ಬದಲಾಗಿ `ವೇಸ್ಟ್ ಮಟೀರಿಯಲ್~ ಸಾಗಿಸಲಾಗುತ್ತಿದೆ. ಇದಕ್ಕೆ ಪ್ರಧಾನ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ವಾದಿಸಿದ್ದರು. <br /> <br /> ಈ ವಾದ ಮಾನ್ಯ ಮಾಡದ ನ್ಯಾಯಾಲಯ, ಪರಿಸರ ಸಂಘಟನೆ ಮತ್ತು ಪರಿಸರವಾದಿಗಳ ವಾದವನ್ನು ಮಾನ್ಯ ಮಾಡಿದೆ. ವೈಲ್ಡ್ ಕ್ಯಾಟ್ -ಸಿ ಸಂಘಟನೆ ಪರವಾಗಿ ವಕೀಲರಾದ ಎಸ್.ದಿನಕರ ರಾವ್ ಮತ್ತು ಟಿ.ಎಸ್.ಉತ್ತಯ್ಯ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಪಶ್ಚಿಮ ಘಟ್ಟ ಸಾಲಿನ ಚಂದ್ರದ್ರೋಣ ಪರ್ವತ ಶ್ರೇಣಿಯ ನಿಸರ್ಗದ ಮಡಿಲಿನಲ್ಲಿರುವ ಕೆಮ್ಮಣ್ಣುಗುಂಡಿಯಲ್ಲಿ ಕಬ್ಬಿಣ ಅದಿರು ಗಣಿಗಾರಿಕೆಯನ್ನು ಶಾಶ್ವತವಾಗಿ ನಡೆಸದಂತೆ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.<br /> <br /> ಭದ್ರಾ ಹುಲಿ ಸಂರಕ್ಷಿತ ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಸೂಕ್ಷ್ಮ ಪರಿಸರ ಪ್ರದೇಶ ಎನಿಸಿರುವ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸದಂತೆ ಶಾಶ್ವತ ನಿರ್ಬಂಧ ವಿಧಿಸಿ ಜಿಲ್ಲಾ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ನಾಯಕ್ ಆದೇಶ ನೀಡಿದರು.<br /> <br /> ಕೆಮ್ಮಣ್ಣುಗುಂಡಿಯಲ್ಲಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಂಪನಿ 1923ರಿಂದ 1983ರವರೆಗೆ ಆರು ದಶಕಗಳ ಕಾಲ ನಿರಂತರವಾಗಿ ಕಬ್ಬಿಣ ಅದಿರು ಗಣಿಗಾರಿಕೆ ನಡೆಸಿತ್ತು. ಗಣಿಗಾರಿಕೆ ನಿಯಮಾವಳಿಯಂತೆ ಮೂರು ಅವಧಿಯ ಪರವಾನಗಿ ಮುಗಿದ ಹಿನ್ನೆಲೆಯಲ್ಲಿ 1983ರಿಂದ ಈ ಪ್ರದೇಶದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. <br /> <br /> ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಬ್ಬಿಣ ಅದಿರಿಗೆ ಬೇಡಿಕೆ ಸೃಷ್ಟಿಯಾದಾಗ 1995ರಲ್ಲಿ ಮತ್ತೆ ಈ ಪ್ರದೇಶದಲ್ಲಿ ವಿಎಸ್ಐಎಲ್ ಸಂಸ್ಥೆ ಹೆಸರಿನಲ್ಲಿ ಮೂರು ಖಾಸಗಿ ಕಂಪೆನಿಗಳು ಉಪ ಗುತ್ತಿಗೆ ಪಡೆದು ಪುನಃ ಗಣಿಗಾರಿಕೆ ಆರಂಭಿಸಿದ್ದವು. ಇದನ್ನು ಪ್ರಶ್ನಿಸಿ ಸ್ಥಳೀಯ ಪರಿಸರ ಸಂಘಟನೆ ವೈಲ್ಡ್ ಕ್ಯಾಟ್- ಸಿ ಮತ್ತು ಐವರು ಪರಿಸರವಾದಿಗಳು 2008ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. <br /> <br /> ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಮತ್ತು ಗಣಿಗಾರಿಕೆ ಕಾನೂನು ಉಲ್ಲಂಘಿಸಿ ಗಣಿಗಾರಿಕೆ ಮಾಡುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು. <br /> <br /> ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಅದಿರು ಕಂಪೆನಿಯಿಂದ ಉಪ ಗುತ್ತಿಗೆ ಪಡೆದ ಕಂಪೆನಿಗಳು ಈ ಪ್ರದೇಶದಲ್ಲಿ ಗಣಿಗಾರಿಕೆ ಮಾಡುತ್ತಿಲ್ಲ. ಬದಲಾಗಿ `ವೇಸ್ಟ್ ಮಟೀರಿಯಲ್~ ಸಾಗಿಸಲಾಗುತ್ತಿದೆ. ಇದಕ್ಕೆ ಪ್ರಧಾನ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ವಾದಿಸಿದ್ದರು. <br /> <br /> ಈ ವಾದ ಮಾನ್ಯ ಮಾಡದ ನ್ಯಾಯಾಲಯ, ಪರಿಸರ ಸಂಘಟನೆ ಮತ್ತು ಪರಿಸರವಾದಿಗಳ ವಾದವನ್ನು ಮಾನ್ಯ ಮಾಡಿದೆ. ವೈಲ್ಡ್ ಕ್ಯಾಟ್ -ಸಿ ಸಂಘಟನೆ ಪರವಾಗಿ ವಕೀಲರಾದ ಎಸ್.ದಿನಕರ ರಾವ್ ಮತ್ತು ಟಿ.ಎಸ್.ಉತ್ತಯ್ಯ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>