<p><strong>ಮಂಡ್ಯ:</strong> ಹೇಮಾವತಿ ಎಡದಂಡೆ ನಾಲೆಯಿಂದ ಕೆರೆ–ಕಟ್ಟೆಗಳಿಗೆ ನೀರು ತುಂಬಿಸಿಕೊಡುವಂತೆ ಹಾಗೂ ಬೇವುಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ತಾಲ್ಲೂಕಿನ ಬೇವುಕಲ್ಲು ಗ್ರಾಮ ಅಧ್ಯಕ್ಷ ವಿಶ್ವೇಶ್ವರಯ್ಯ ಆಗ್ರಹಿಸಿದರು.<br /> <br /> ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ 11 ಹಳ್ಳಿಗಳು ಸಂಪೂರ್ಣ ಬರಪೀಡಿತ ಪ್ರದೇಶಗಳಾಗಿವೆ. ಮಳೆಯಿಲ್ಲದೆ ಕೆರೆ-ಕಟ್ಟೆಗಳು ಒಣಗಿವೆ. ಕುಡಿಯುವ ನೀರಿಗೆ ಆಸರೆಯಾಗಿದ್ದ ಕೊಳವೆಬಾವಿಗಳು ಬರಿದಾಗಿದೆ. ದನ-ಕರುಗಳಿಗೆ ಕುಡಿಯಲು ನೀರಿಲ್ಲದೆ ಜನರು ಗುಳೆ ಹೋಗುವ ಸ್ಥಿತಿ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಹೇಮಾವತಿ ಎಡದಂಡೆ ನಾಲೆ ಸಂಪರ್ಕ ವ್ಯವಸ್ಥೆ ಇದ್ದರೂ ನಾಲೆಯ ಕೊನೆಯ ಭಾಗವಾಗಿರುವುದರಿಂದ ಇಲ್ಲಿಗೆ ನೀರು ತಲುಪುತ್ತಿಲ್ಲ. ಈ ಭಾಗದ ಜನರು ಹಲವು ವರ್ಷಗಳಿಂದ ಈ ಬಗೆಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ಗ್ರಾಮ ವಾಸ್ತವ್ಯಕ್ಕೆ ಇಲ್ಲಿಗೆ ಬಂದಿದ್ದ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಈ ಬಗೆಗೆ ಮನವಿ ಮಾಡಿಕೊಳ್ಳಲಾಗಿತ್ತು. ಆ ಬಳಿಕ ಸರ್ವೇ ಕಾರ್ಯ ನಡೆಯಿತೇ ವಿನಾ ನೀರು ತಲುಪಲಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.<br /> <br /> ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಸೇರಿದಂತೆ ಅನೇಕರ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ತಿಂಗಳಲ್ಲಿ ಕುಡಿಯುವ ನೀರಿಗಾಗಿ ತೋಡಿಸಿದ 20 ಕೊಳವೆಬಾವಿ ವಿಫಲವಾಗಿದೆ ಎಂದು ಹೇಳಿದರು.<br /> <br /> ಸಮಸ್ಯೆ ಇನ್ನಷ್ಟುಉಲ್ಬಣಿಸುವ ಮೊದಲು ಹೇಮಾವತಿ ಎಡದಂಡೆ ನಾಲೆಯಿಂದ ನೀರು ಹರಿಯುವಂತೆ ಕ್ರಮ ಕೈಗೊಂಡು ಕೆರೆ-ಕಟ್ಟೆಗಳನ್ನು ತುಂಬಿಸಬೇಕು. ಇಲ್ಲದಿದ್ದರೆ, ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಗಳ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.<br /> <br /> ಉಪಾಧ್ಯಕ್ಷೆ ವಿಜಯವಾಣಿ, ನರಸಿಂಹಯ್ಯ, ಭೈರಪ್ಪ, ಶಿವಪ್ರಸಾದ್್, ಬಸವೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಹೇಮಾವತಿ ಎಡದಂಡೆ ನಾಲೆಯಿಂದ ಕೆರೆ–ಕಟ್ಟೆಗಳಿಗೆ ನೀರು ತುಂಬಿಸಿಕೊಡುವಂತೆ ಹಾಗೂ ಬೇವುಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ತಾಲ್ಲೂಕಿನ ಬೇವುಕಲ್ಲು ಗ್ರಾಮ ಅಧ್ಯಕ್ಷ ವಿಶ್ವೇಶ್ವರಯ್ಯ ಆಗ್ರಹಿಸಿದರು.<br /> <br /> ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ 11 ಹಳ್ಳಿಗಳು ಸಂಪೂರ್ಣ ಬರಪೀಡಿತ ಪ್ರದೇಶಗಳಾಗಿವೆ. ಮಳೆಯಿಲ್ಲದೆ ಕೆರೆ-ಕಟ್ಟೆಗಳು ಒಣಗಿವೆ. ಕುಡಿಯುವ ನೀರಿಗೆ ಆಸರೆಯಾಗಿದ್ದ ಕೊಳವೆಬಾವಿಗಳು ಬರಿದಾಗಿದೆ. ದನ-ಕರುಗಳಿಗೆ ಕುಡಿಯಲು ನೀರಿಲ್ಲದೆ ಜನರು ಗುಳೆ ಹೋಗುವ ಸ್ಥಿತಿ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಹೇಮಾವತಿ ಎಡದಂಡೆ ನಾಲೆ ಸಂಪರ್ಕ ವ್ಯವಸ್ಥೆ ಇದ್ದರೂ ನಾಲೆಯ ಕೊನೆಯ ಭಾಗವಾಗಿರುವುದರಿಂದ ಇಲ್ಲಿಗೆ ನೀರು ತಲುಪುತ್ತಿಲ್ಲ. ಈ ಭಾಗದ ಜನರು ಹಲವು ವರ್ಷಗಳಿಂದ ಈ ಬಗೆಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.<br /> <br /> ಗ್ರಾಮ ವಾಸ್ತವ್ಯಕ್ಕೆ ಇಲ್ಲಿಗೆ ಬಂದಿದ್ದ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಈ ಬಗೆಗೆ ಮನವಿ ಮಾಡಿಕೊಳ್ಳಲಾಗಿತ್ತು. ಆ ಬಳಿಕ ಸರ್ವೇ ಕಾರ್ಯ ನಡೆಯಿತೇ ವಿನಾ ನೀರು ತಲುಪಲಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.<br /> <br /> ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಸೇರಿದಂತೆ ಅನೇಕರ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ತಿಂಗಳಲ್ಲಿ ಕುಡಿಯುವ ನೀರಿಗಾಗಿ ತೋಡಿಸಿದ 20 ಕೊಳವೆಬಾವಿ ವಿಫಲವಾಗಿದೆ ಎಂದು ಹೇಳಿದರು.<br /> <br /> ಸಮಸ್ಯೆ ಇನ್ನಷ್ಟುಉಲ್ಬಣಿಸುವ ಮೊದಲು ಹೇಮಾವತಿ ಎಡದಂಡೆ ನಾಲೆಯಿಂದ ನೀರು ಹರಿಯುವಂತೆ ಕ್ರಮ ಕೈಗೊಂಡು ಕೆರೆ-ಕಟ್ಟೆಗಳನ್ನು ತುಂಬಿಸಬೇಕು. ಇಲ್ಲದಿದ್ದರೆ, ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಗಳ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.<br /> <br /> ಉಪಾಧ್ಯಕ್ಷೆ ವಿಜಯವಾಣಿ, ನರಸಿಂಹಯ್ಯ, ಭೈರಪ್ಪ, ಶಿವಪ್ರಸಾದ್್, ಬಸವೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>