<p>ಮಾಲೂರು: ತಾಲ್ಲೂಕಿನ ಚಾಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕೆರೆ ಒತ್ತುವರಿ ತೆರವಿಗೆ ತಹಶೀಲ್ದಾರ್ ಡಾ.ಬಿ.ಸುಧಾ ಪಾಯ್ಸ್ ಚಾಲನೆ ನೀಡಿ ದರು.<br /> <br /> ನಂತರ ಮಾತನಾಡಿ, ತಾಲ್ಲೂಕಿನ ಕೆರೆಯಂಗಳ ಮತ್ತು ರಾಜಕಾಲುವೆ ಒತ್ತುವರಿ ಮಾಡಿಕೊಂಡ ರೈತರು ತಾವಾಗಿಯೇ ತೆರವುಗೊಳಿಸದಿದ್ದಲ್ಲಿ ಸರ್ವೇ ನಡೆಸಿ, ಮುಲಾಜಿಲ್ಲದೆ ತೆರವು ಮಾಡಲಾಗುವುದು ಎಂದರು.<br /> <br /> ತಾಲ್ಲೂಕಿನಲ್ಲಿ 340 ಕೆರೆಗಳಿವೆ. ಕೆಲವು ಕೆರೆಗಳ ಅಂಗಳವನ್ನು ಒತ್ತುವರಿ ಮಾಡಿಕೊಂಡು, ರಾಜಕಾಲುವೆಗಳನ್ನು ಮುಚ್ಚಿರುವುದರಿಂದ ಹರಿಯುವ ನೀರು ಸ್ಥಗಿತಗೊಂಡಿದೆ. ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಹಂತ ಹಂತವಾಗಿ ಕೆರೆಗಳ ಅಂಗಳ ಮತ್ತು ರಾಜ ಕಾಲುವೆ ತೆರವುಗೊಳಿಸಲಾಗುವುದು ಎಂದರು.<br /> <br /> ತಾಲ್ಲೂಕಿನ ಚಾಕನಹಳ್ಳಿ ಗ್ರಾಮದ ಸಮೀಪವಿರುವ ಕೆರೆ ಅಂಗಳ ಒಟ್ಟು 19 ಎಕರೆ 16 ಗುಂಟೆ ವಿಸ್ತೀರ್ಣವಿದ್ದು, ಒಂದು ಎಕರೆಗೂ ಹೆಚ್ಚು ಒತ್ತುವರಿಯಾಗಿದೆ. ಸರ್ವೇ ನಡೆಸಿ, ಒತ್ತುವರಿ ತೆರವು ಮಾಡಿ ಜೆಸಿಬಿ ಯಂತ್ರದಿಂದ ಕಾಲುವೆ ತೆಗೆಸುವ ಮೂಲಕ ಗಡಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.<br /> <br /> ಕಂದಾಯಾಧಿಕಾರಿ ಬೀರಪ್ಪ, ಗ್ರಾಮ ಲೆಕ್ಕಿಗರಾದ ಶಂಕರ್, ರವಿ ಬಂಡ್ಯಾಪುರ್, ಭೂಮಾಪಕ ಲಕ್ಷ್ಮಣ್, ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು: ತಾಲ್ಲೂಕಿನ ಚಾಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕೆರೆ ಒತ್ತುವರಿ ತೆರವಿಗೆ ತಹಶೀಲ್ದಾರ್ ಡಾ.ಬಿ.ಸುಧಾ ಪಾಯ್ಸ್ ಚಾಲನೆ ನೀಡಿ ದರು.<br /> <br /> ನಂತರ ಮಾತನಾಡಿ, ತಾಲ್ಲೂಕಿನ ಕೆರೆಯಂಗಳ ಮತ್ತು ರಾಜಕಾಲುವೆ ಒತ್ತುವರಿ ಮಾಡಿಕೊಂಡ ರೈತರು ತಾವಾಗಿಯೇ ತೆರವುಗೊಳಿಸದಿದ್ದಲ್ಲಿ ಸರ್ವೇ ನಡೆಸಿ, ಮುಲಾಜಿಲ್ಲದೆ ತೆರವು ಮಾಡಲಾಗುವುದು ಎಂದರು.<br /> <br /> ತಾಲ್ಲೂಕಿನಲ್ಲಿ 340 ಕೆರೆಗಳಿವೆ. ಕೆಲವು ಕೆರೆಗಳ ಅಂಗಳವನ್ನು ಒತ್ತುವರಿ ಮಾಡಿಕೊಂಡು, ರಾಜಕಾಲುವೆಗಳನ್ನು ಮುಚ್ಚಿರುವುದರಿಂದ ಹರಿಯುವ ನೀರು ಸ್ಥಗಿತಗೊಂಡಿದೆ. ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಹಂತ ಹಂತವಾಗಿ ಕೆರೆಗಳ ಅಂಗಳ ಮತ್ತು ರಾಜ ಕಾಲುವೆ ತೆರವುಗೊಳಿಸಲಾಗುವುದು ಎಂದರು.<br /> <br /> ತಾಲ್ಲೂಕಿನ ಚಾಕನಹಳ್ಳಿ ಗ್ರಾಮದ ಸಮೀಪವಿರುವ ಕೆರೆ ಅಂಗಳ ಒಟ್ಟು 19 ಎಕರೆ 16 ಗುಂಟೆ ವಿಸ್ತೀರ್ಣವಿದ್ದು, ಒಂದು ಎಕರೆಗೂ ಹೆಚ್ಚು ಒತ್ತುವರಿಯಾಗಿದೆ. ಸರ್ವೇ ನಡೆಸಿ, ಒತ್ತುವರಿ ತೆರವು ಮಾಡಿ ಜೆಸಿಬಿ ಯಂತ್ರದಿಂದ ಕಾಲುವೆ ತೆಗೆಸುವ ಮೂಲಕ ಗಡಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.<br /> <br /> ಕಂದಾಯಾಧಿಕಾರಿ ಬೀರಪ್ಪ, ಗ್ರಾಮ ಲೆಕ್ಕಿಗರಾದ ಶಂಕರ್, ರವಿ ಬಂಡ್ಯಾಪುರ್, ಭೂಮಾಪಕ ಲಕ್ಷ್ಮಣ್, ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>