<p><strong>ಬೆಂಗಳೂರು : </strong>ರಾಜ್ಯದ ಕೆರೆಗಳ ಕ್ರಮಬದ್ಧ ಅಭಿವೃದ್ಧಿಗಾಗಿ `ಕೆರೆ ಅಭಿವೃದ್ಧಿ ಪ್ರಾಧಿಕಾರ' ಮತ್ತು ಅಂತರ್ಜಲ ನಿಯಂತ್ರಣ ಹಾಗೂ ಅಭಿವೃದ್ದಿಗಾಗಿ ನೂತನ ಅಂತರ್ಜಲ ನಿರ್ದೇಶನಾಲಯದ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಪ್ರಕಟಿಸಿದರು.<br /> <br /> ಸಣ್ಣ ನೀರಾವರಿ ಇಲಾಖೆಯಲ್ಲಿ ಸುಮಾರು 3,579 ಕೆರೆಗಳು ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಸುಮಾರು 26 ಸಾವಿರ ಕೆರೆಗಳಿದ್ದು, ಇವು ಕೆರೆ ಅಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ.<br /> <br /> ಅಂತರ್ಜಲ ನಿಯಂತ್ರಣ ಹಾಗೂ ಅಭಿವೃದ್ದಿಗೆ ವಿಶೇಷ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿರುವ ಅಂತರ್ಜಲ ವಿಭಾಗವನ್ನು ಪ್ರತ್ಯೇಕಿಸಿ ನೂತನ ಅಂತರ್ಜಲ ನಿರ್ದೇಶನಾಲಯ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.<br /> <br /> ಗಂಧದ ಮರದ ನೆಡುತೋಪುಗಳ ಹೆಚ್ಚಳ ಸಂರಕ್ಷಣೆ ಹಾಗೂ ಗಂಧದ ಮರ ಬೆಳೆಯುವ ನೈಸರ್ಗಿಕ ಪ್ರದೇಶಗಳ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ `ಸಿರಿ ಚಂದನವನ' ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು : </strong>ರಾಜ್ಯದ ಕೆರೆಗಳ ಕ್ರಮಬದ್ಧ ಅಭಿವೃದ್ಧಿಗಾಗಿ `ಕೆರೆ ಅಭಿವೃದ್ಧಿ ಪ್ರಾಧಿಕಾರ' ಮತ್ತು ಅಂತರ್ಜಲ ನಿಯಂತ್ರಣ ಹಾಗೂ ಅಭಿವೃದ್ದಿಗಾಗಿ ನೂತನ ಅಂತರ್ಜಲ ನಿರ್ದೇಶನಾಲಯದ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಪ್ರಕಟಿಸಿದರು.<br /> <br /> ಸಣ್ಣ ನೀರಾವರಿ ಇಲಾಖೆಯಲ್ಲಿ ಸುಮಾರು 3,579 ಕೆರೆಗಳು ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಸುಮಾರು 26 ಸಾವಿರ ಕೆರೆಗಳಿದ್ದು, ಇವು ಕೆರೆ ಅಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಗೆ ಬರಲಿವೆ.<br /> <br /> ಅಂತರ್ಜಲ ನಿಯಂತ್ರಣ ಹಾಗೂ ಅಭಿವೃದ್ದಿಗೆ ವಿಶೇಷ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿರುವ ಅಂತರ್ಜಲ ವಿಭಾಗವನ್ನು ಪ್ರತ್ಯೇಕಿಸಿ ನೂತನ ಅಂತರ್ಜಲ ನಿರ್ದೇಶನಾಲಯ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.<br /> <br /> ಗಂಧದ ಮರದ ನೆಡುತೋಪುಗಳ ಹೆಚ್ಚಳ ಸಂರಕ್ಷಣೆ ಹಾಗೂ ಗಂಧದ ಮರ ಬೆಳೆಯುವ ನೈಸರ್ಗಿಕ ಪ್ರದೇಶಗಳ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ `ಸಿರಿ ಚಂದನವನ' ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>