<p><strong>ಸಂತೇಮರಹ</strong>ಳ್ಳಿ: `ರೈತರಿಗ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 56 ಕೋಟಿ ರೂ ಮಂಜೂರು ಮಾಡಿದೆ~ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು. <br /> <br /> ಹೋಬಳಿಯ ಹೊಂಗನೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಹಿರೇಕೆರೆ ಅಭಿವೃದ್ಧಿಗೆ ಹಮ್ಮಿಕೊಂಡಿರುವ 2.20 ಕೋಟಿ ಮೊತ್ತದ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.<br /> <br /> ಸರ್ಕಾರ ರಾಜ್ಯದ ಉದ್ದಗಲಕ್ಕೂ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆಗಳಿಗೂ ಅನುದಾನ ಮಂಜೂರಾಗಿದೆ. ಅಚ್ಚುಕಟ್ಟುದಾರರು ಉತ್ತಮ ಫಸಲು ತೆಗೆಯಬೇಕೆಂಬುದು ಸರ್ಕಾರದ ಉ್ದ್ದದೇಶ ಎಂದರು. <br /> <br /> ಕೆರೆಗೆ ಸರಾಗವಾಗಿ ನೀರು ಹರಿದು ಬರುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಕಾಮಗಾರಿ ಕೈಗೊಳ್ಳಬೇಕು. ಹೆಚ್ಚು ನೀರು ಸಂಗ್ರಹವಾಗಲು ಹೂಳು ತೆಗೆಸಬೇಕು. ಒತ್ತುವರಿ ತೆರವುಗೊಳಿಸಿ ಪ್ರತಿಯೊಬ್ಬ ಅಚ್ಚುಕಟ್ಟುದಾರರಿಗೂ ಕೆರೆ ಸಂರಕ್ಷಣೆ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.<br /> <br /> ಕಳೆದ ಒಂದು ವರ್ಷದ ಹಿಂದೆ ಈ ಕೆರೆಯ ಅಭಿವೃದ್ಧಿಗೆ ನೀರಾವರಿ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಬೇಕಾಗಿತ್ತು. ರಾಜಕೀಯ ಏರಿಳಿತಗಳಿಂದ ಕಾಮ ಗಾರಿ ನೆನೆಗುದಿಗೆ ಬಿದ್ದಿತು. ಇದರ ಪರಿಣಾಮ ರೈತರು ಫಸಲು ತೆಗೆಯಲಾಗಲಿಲ್ಲ ಎಂದರು.<br /> <br /> ಜಿ.ಪಂ. ಸದಸ್ಯೆ ಲಕ್ಷ್ಮೀ, ತಾ.ಪಂ. ಅಧ್ಯಕ್ಷೆ ಪದ್ಮಾ ಚಂದ್ರು, ಗ್ರಾ.ಪಂ. ಅಧ್ಯಕ್ಷೆ ಜೀನತ್ಬೀ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸಲು, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಮು, ಪಿ. ನಂಜಯ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹ</strong>ಳ್ಳಿ: `ರೈತರಿಗ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 56 ಕೋಟಿ ರೂ ಮಂಜೂರು ಮಾಡಿದೆ~ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು. <br /> <br /> ಹೋಬಳಿಯ ಹೊಂಗನೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಹಿರೇಕೆರೆ ಅಭಿವೃದ್ಧಿಗೆ ಹಮ್ಮಿಕೊಂಡಿರುವ 2.20 ಕೋಟಿ ಮೊತ್ತದ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.<br /> <br /> ಸರ್ಕಾರ ರಾಜ್ಯದ ಉದ್ದಗಲಕ್ಕೂ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆಗಳಿಗೂ ಅನುದಾನ ಮಂಜೂರಾಗಿದೆ. ಅಚ್ಚುಕಟ್ಟುದಾರರು ಉತ್ತಮ ಫಸಲು ತೆಗೆಯಬೇಕೆಂಬುದು ಸರ್ಕಾರದ ಉ್ದ್ದದೇಶ ಎಂದರು. <br /> <br /> ಕೆರೆಗೆ ಸರಾಗವಾಗಿ ನೀರು ಹರಿದು ಬರುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಕಾಮಗಾರಿ ಕೈಗೊಳ್ಳಬೇಕು. ಹೆಚ್ಚು ನೀರು ಸಂಗ್ರಹವಾಗಲು ಹೂಳು ತೆಗೆಸಬೇಕು. ಒತ್ತುವರಿ ತೆರವುಗೊಳಿಸಿ ಪ್ರತಿಯೊಬ್ಬ ಅಚ್ಚುಕಟ್ಟುದಾರರಿಗೂ ಕೆರೆ ಸಂರಕ್ಷಣೆ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.<br /> <br /> ಕಳೆದ ಒಂದು ವರ್ಷದ ಹಿಂದೆ ಈ ಕೆರೆಯ ಅಭಿವೃದ್ಧಿಗೆ ನೀರಾವರಿ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಬೇಕಾಗಿತ್ತು. ರಾಜಕೀಯ ಏರಿಳಿತಗಳಿಂದ ಕಾಮ ಗಾರಿ ನೆನೆಗುದಿಗೆ ಬಿದ್ದಿತು. ಇದರ ಪರಿಣಾಮ ರೈತರು ಫಸಲು ತೆಗೆಯಲಾಗಲಿಲ್ಲ ಎಂದರು.<br /> <br /> ಜಿ.ಪಂ. ಸದಸ್ಯೆ ಲಕ್ಷ್ಮೀ, ತಾ.ಪಂ. ಅಧ್ಯಕ್ಷೆ ಪದ್ಮಾ ಚಂದ್ರು, ಗ್ರಾ.ಪಂ. ಅಧ್ಯಕ್ಷೆ ಜೀನತ್ಬೀ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸಲು, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಮು, ಪಿ. ನಂಜಯ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>