<p><strong>ಹಾವೇರಿ:</strong> `ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಶೀಘ್ರವೇ ಕೆರೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಗಂಭೀರ ಚಿಂತನೆ ನಡೆಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.<br /> <br /> ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಭಾನುವಾರ ಮಾಳಿಂಗರಾಯ ವಿದ್ಯಾರ್ಥಿನಿಲಯದ ಉದ್ಘಾಟನೆ ಹಾಗೂ ದಾಸೋಹ ಭವನದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.<br /> `ಕೆರೆಗಳ ಸಂರಕ್ಷಣೆ ಹಾಗೂ ಅದಕ್ಕಾಗಿ ಪ್ರಾಧಿಕಾರ ರಚಿಸುವುದು ಪಕ್ಷದ ಪ್ರಣಾಳಿಕೆಯಲ್ಲಿದೆ. ಅದನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರಲಾಗುವುದು' ಎಂದರು.<br /> <br /> `ಕೆರೆಗಳ ಸಂಪೂರ್ಣ ಹಾಳಾಗಿ ನೀರು ನಿಲ್ಲದ ಸ್ಥಿತಿ ಒಂದೆಡೆಯಾದರೆ, ಕೆಲವಡೆ ಅವುಗಳನ್ನು ಒತ್ತುವರಿ ಮಾಡಿಕೊಂಡು ಅವುಗಳ ಅಸ್ತಿತ್ವವೇ ಇಲ್ಲದಂತೆ ಮಾಡಲಾಗಿದೆ. ಇವೆಲ್ಲವುಗಳಿಗೆ ಪರಿಹಾರ ರೂಪವಾಗಿ ಪ್ರಾಧಿಕಾರ ರಚನೆ ಮಾಡಲಾಗುವುದು' ಎಂದರು.<br /> <br /> `ಕೆರೆಗಳಿಗೆ ನೀರು ಹರಿದು ಬರುವ ಪ್ರದೇಶವನ್ನು ಸುವ್ಯವಸ್ಥಿತವಾಗಿ ನಿರ್ಮಿಸುವುದು, ಕೆರೆಯಲ್ಲಿ ತುಂಬಿರುವ ಹೂಳು ತೆಗೆಯುವುದು, ಕೆರೆಗಳಿಗೆ ನೀರು ತುಂಬಿಸುವ, ಅಲ್ಲಿಂದ ಬೇರೆಡೆ ನೀರು ಸಾಗಿಸುವ ಕಾಲುವೆಗಳ ದುರಸ್ತಿ ಹಾಗೂ ಅವುಗಳ ಒತ್ತುವರಿಯನ್ನು ತೆರವುಗೊಳಿಸುವುದು ಸೇರಿದಂತೆ ಕೆರೆಗಳ ಸಂಪೂರ್ಣ ನಿರ್ವಹಣೆಯನ್ನು ಈ ಪ್ರಾಧಿಕಾರದ ಮೂಲಕವೇ ಮಾಡಲಾಗುತ್ತದೆ' ಎಂದು ಹೇಳಿದರು.<br /> <br /> ಮರು ಪರಿಶೀಲನೆ: `ಹಿಂದಿನ ಸರ್ಕಾರ ಬೀಜ, ಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ನಡೆಸಿ ಇಬ್ಬರು ರೈತರನ್ನು ಬಲಿ ತೆಗೆದುಕೊಂಡಿತ್ತು. ಈ ಪ್ರಕರಣದ ಕುರಿತು ತನಿಖೆಗೆ ರಚಿಸಲಾದ ನ್ಯಾ. ಜಗನ್ನಾಥಶೆಟ್ಟಿ ಆಯೋಗವು ಯಾವ ರೀತಿಯ ವರದಿ ನೀಡಿದೆ ಎಂಬುದು ಎಲ್ಲರಿಗೂ ಗೊತ್ತು. ಈ ತನಿಖಾ ವರದಿಯನ್ನು ಮರುಪರಿಶೀಲನೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ' ಎಂದು ಅವರು ತಿಳಿಸಿದರು.<br /> <br /> <strong>ತೆರಿಗೆ ವ್ಯಾಪ್ತಿಗೆ ಇನ್ನಷ್ಟು ವಸ್ತುಗಳು</strong><br /> `ತೆರಿಗೆ ಸೋರಿಕೆ ತಡೆಯುವುದರ ಜತೆಗೆ ಕೆಲ ವಸ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.<br /> <br /> ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ರಾಜ್ಯದ ಆರ್ಥಿಕ ಶಿಸ್ತನ್ನು ಸಂಪೂರ್ಣ ಹಾಳು ಮಾಡಿದೆ. ರಾಜ್ಯದಲ್ಲಿ ಆರ್ಥಿಕ ಶಿಸ್ತು ಮರುಸ್ಥಾಪನೆ ಮಾಡುವ ಉದ್ದೇಶದಿಂದ ಇಂತಹ ಕೆಲವು ಕಠಿಣ ಕ್ರಮ ಅನಿವಾರ್ಯವಾಗಲಿವೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> `ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಶೀಘ್ರವೇ ಕೆರೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಗಂಭೀರ ಚಿಂತನೆ ನಡೆಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.<br /> <br /> ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಭಾನುವಾರ ಮಾಳಿಂಗರಾಯ ವಿದ್ಯಾರ್ಥಿನಿಲಯದ ಉದ್ಘಾಟನೆ ಹಾಗೂ ದಾಸೋಹ ಭವನದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.<br /> `ಕೆರೆಗಳ ಸಂರಕ್ಷಣೆ ಹಾಗೂ ಅದಕ್ಕಾಗಿ ಪ್ರಾಧಿಕಾರ ರಚಿಸುವುದು ಪಕ್ಷದ ಪ್ರಣಾಳಿಕೆಯಲ್ಲಿದೆ. ಅದನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರಲಾಗುವುದು' ಎಂದರು.<br /> <br /> `ಕೆರೆಗಳ ಸಂಪೂರ್ಣ ಹಾಳಾಗಿ ನೀರು ನಿಲ್ಲದ ಸ್ಥಿತಿ ಒಂದೆಡೆಯಾದರೆ, ಕೆಲವಡೆ ಅವುಗಳನ್ನು ಒತ್ತುವರಿ ಮಾಡಿಕೊಂಡು ಅವುಗಳ ಅಸ್ತಿತ್ವವೇ ಇಲ್ಲದಂತೆ ಮಾಡಲಾಗಿದೆ. ಇವೆಲ್ಲವುಗಳಿಗೆ ಪರಿಹಾರ ರೂಪವಾಗಿ ಪ್ರಾಧಿಕಾರ ರಚನೆ ಮಾಡಲಾಗುವುದು' ಎಂದರು.<br /> <br /> `ಕೆರೆಗಳಿಗೆ ನೀರು ಹರಿದು ಬರುವ ಪ್ರದೇಶವನ್ನು ಸುವ್ಯವಸ್ಥಿತವಾಗಿ ನಿರ್ಮಿಸುವುದು, ಕೆರೆಯಲ್ಲಿ ತುಂಬಿರುವ ಹೂಳು ತೆಗೆಯುವುದು, ಕೆರೆಗಳಿಗೆ ನೀರು ತುಂಬಿಸುವ, ಅಲ್ಲಿಂದ ಬೇರೆಡೆ ನೀರು ಸಾಗಿಸುವ ಕಾಲುವೆಗಳ ದುರಸ್ತಿ ಹಾಗೂ ಅವುಗಳ ಒತ್ತುವರಿಯನ್ನು ತೆರವುಗೊಳಿಸುವುದು ಸೇರಿದಂತೆ ಕೆರೆಗಳ ಸಂಪೂರ್ಣ ನಿರ್ವಹಣೆಯನ್ನು ಈ ಪ್ರಾಧಿಕಾರದ ಮೂಲಕವೇ ಮಾಡಲಾಗುತ್ತದೆ' ಎಂದು ಹೇಳಿದರು.<br /> <br /> ಮರು ಪರಿಶೀಲನೆ: `ಹಿಂದಿನ ಸರ್ಕಾರ ಬೀಜ, ಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ನಡೆಸಿ ಇಬ್ಬರು ರೈತರನ್ನು ಬಲಿ ತೆಗೆದುಕೊಂಡಿತ್ತು. ಈ ಪ್ರಕರಣದ ಕುರಿತು ತನಿಖೆಗೆ ರಚಿಸಲಾದ ನ್ಯಾ. ಜಗನ್ನಾಥಶೆಟ್ಟಿ ಆಯೋಗವು ಯಾವ ರೀತಿಯ ವರದಿ ನೀಡಿದೆ ಎಂಬುದು ಎಲ್ಲರಿಗೂ ಗೊತ್ತು. ಈ ತನಿಖಾ ವರದಿಯನ್ನು ಮರುಪರಿಶೀಲನೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ' ಎಂದು ಅವರು ತಿಳಿಸಿದರು.<br /> <br /> <strong>ತೆರಿಗೆ ವ್ಯಾಪ್ತಿಗೆ ಇನ್ನಷ್ಟು ವಸ್ತುಗಳು</strong><br /> `ತೆರಿಗೆ ಸೋರಿಕೆ ತಡೆಯುವುದರ ಜತೆಗೆ ಕೆಲ ವಸ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.<br /> <br /> ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ರಾಜ್ಯದ ಆರ್ಥಿಕ ಶಿಸ್ತನ್ನು ಸಂಪೂರ್ಣ ಹಾಳು ಮಾಡಿದೆ. ರಾಜ್ಯದಲ್ಲಿ ಆರ್ಥಿಕ ಶಿಸ್ತು ಮರುಸ್ಥಾಪನೆ ಮಾಡುವ ಉದ್ದೇಶದಿಂದ ಇಂತಹ ಕೆಲವು ಕಠಿಣ ಕ್ರಮ ಅನಿವಾರ್ಯವಾಗಲಿವೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>