<p><strong>ಸೇಡಂ: </strong>ತಾಲ್ಲೂಕಿನ ಹುಳಗೋಳ ಗ್ರಾಮದ ಕೆರೆಗೆ ಈಚೆಗೆ ನಿರ್ಮಿಸಿದ ತಡೆಗೋಡೆ ಶುಕ್ರವಾರ ಬೆಳಗಿನ ಜಾವ ಒಡೆದು ಸುಮಾರು 63 ಎಕರೆ ವ್ಯಾಪ್ತಿಯಲ್ಲಿ ಬೆಳೆ ನಾಶಗೊಂಡಿದೆ. ಗ್ರಾಮದ ತಗ್ಗು ಪ್ರದೇಶದ ಮನೆಗಳಿಗೂ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.<br /> <br /> ಗ್ರಾಮದ ಎತ್ತರ ಪ್ರದೇಶದದಿಂದ ನೀರು ಹರಿದು ಈ ಕೆರೆಗೆ ಬರುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಈಚೆಗೆ 360 ಮೀಟರ್ ಸುತ್ತಳತೆಯ ಕೆರೆಗೆ ಒಂದು ಭಾಗದಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಸುಮಾರು ಎರಡು ಸಾವಿರ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶ ಇತ್ತು.<br /> <br /> ಕಂದಾಯ ಮತ್ತು ಕೃಷಿ ಇಲಾಖೆ ಜಂಟಿ ಸಮೀಕ್ಷೆಯಂತೆ ಹಳ್ಳಗಳ ಬದಿಗುಂಟ ಇರುವ 63 ಎಕರೆ 24 ಗುಂಟೆ ಜಮೀನಿಗೆ ಕೆರೆ ನೀರು ನುಗ್ಗಿ ತೊಗರಿ, ಸಜ್ಜೆ ಮತ್ತು ಹೆಸರು ಬೆಳೆಗಳು ನಾಶವಾಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ. ಲಿಂಗಮಾಂತು `ಪ್ರಜಾವಾಣಿ~ ಗೆ ತಿಳಿಸಿದರು.<br /> <br /> ಕೆರೆ ನೀರು ಹುಳಗೋಳ, ನಾಮವಾರ ಮತ್ತು ಕಾಚವಾರ ಗ್ರಾಮಗಳವರೆಗೂ ಹರಿದು ಅಕ್ಕಪಕ್ಕದ ಜಮೀನುಗಳ ಬೆಳೆಗಳನ್ನು ಹಾಳು ಮಾಡಿದೆ. <br /> <br /> ಬೆಳಿಗ್ಗೆ ಸುದ್ದಿ ತಿಳಿದಾಕ್ಷಣ ಸಹಾಯಕ ಆಯುಕ್ತ ಡಿ.ಕೆ. ರವಿ, ತಹಶೀಲ್ದಾರ ನರಸಿಂಗರಾವ, ನೀರಾವರಿ ಇಲಾಖೆಯ ಎಂಜಿನಿಯರ್ಗಳು, ಅಗ್ನಿ ಶಾಮಕ ದಳ, ಪೊಲೀಸ್ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಶಾಸಕ ಡಾ. ಶರಣಪ್ರಕಾಶ ಪಾಟೀಲ ಉಡಗಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ: </strong>ತಾಲ್ಲೂಕಿನ ಹುಳಗೋಳ ಗ್ರಾಮದ ಕೆರೆಗೆ ಈಚೆಗೆ ನಿರ್ಮಿಸಿದ ತಡೆಗೋಡೆ ಶುಕ್ರವಾರ ಬೆಳಗಿನ ಜಾವ ಒಡೆದು ಸುಮಾರು 63 ಎಕರೆ ವ್ಯಾಪ್ತಿಯಲ್ಲಿ ಬೆಳೆ ನಾಶಗೊಂಡಿದೆ. ಗ್ರಾಮದ ತಗ್ಗು ಪ್ರದೇಶದ ಮನೆಗಳಿಗೂ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.<br /> <br /> ಗ್ರಾಮದ ಎತ್ತರ ಪ್ರದೇಶದದಿಂದ ನೀರು ಹರಿದು ಈ ಕೆರೆಗೆ ಬರುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಈಚೆಗೆ 360 ಮೀಟರ್ ಸುತ್ತಳತೆಯ ಕೆರೆಗೆ ಒಂದು ಭಾಗದಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಸುಮಾರು ಎರಡು ಸಾವಿರ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶ ಇತ್ತು.<br /> <br /> ಕಂದಾಯ ಮತ್ತು ಕೃಷಿ ಇಲಾಖೆ ಜಂಟಿ ಸಮೀಕ್ಷೆಯಂತೆ ಹಳ್ಳಗಳ ಬದಿಗುಂಟ ಇರುವ 63 ಎಕರೆ 24 ಗುಂಟೆ ಜಮೀನಿಗೆ ಕೆರೆ ನೀರು ನುಗ್ಗಿ ತೊಗರಿ, ಸಜ್ಜೆ ಮತ್ತು ಹೆಸರು ಬೆಳೆಗಳು ನಾಶವಾಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಿ. ಲಿಂಗಮಾಂತು `ಪ್ರಜಾವಾಣಿ~ ಗೆ ತಿಳಿಸಿದರು.<br /> <br /> ಕೆರೆ ನೀರು ಹುಳಗೋಳ, ನಾಮವಾರ ಮತ್ತು ಕಾಚವಾರ ಗ್ರಾಮಗಳವರೆಗೂ ಹರಿದು ಅಕ್ಕಪಕ್ಕದ ಜಮೀನುಗಳ ಬೆಳೆಗಳನ್ನು ಹಾಳು ಮಾಡಿದೆ. <br /> <br /> ಬೆಳಿಗ್ಗೆ ಸುದ್ದಿ ತಿಳಿದಾಕ್ಷಣ ಸಹಾಯಕ ಆಯುಕ್ತ ಡಿ.ಕೆ. ರವಿ, ತಹಶೀಲ್ದಾರ ನರಸಿಂಗರಾವ, ನೀರಾವರಿ ಇಲಾಖೆಯ ಎಂಜಿನಿಯರ್ಗಳು, ಅಗ್ನಿ ಶಾಮಕ ದಳ, ಪೊಲೀಸ್ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಶಾಸಕ ಡಾ. ಶರಣಪ್ರಕಾಶ ಪಾಟೀಲ ಉಡಗಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>