<p>ಕೆಂಗೇರಿ: `ನಗರ ಬೆಳೆದಂತೆಲ್ಲಾ ನೀರಿನ ತೊಂದರೆ ಉಂಟಾಗುತ್ತದೆ ಎಂದು ಕೆಂಪೇಗೌಡರು ಕೆರೆಗಳನ್ನು ನಿರ್ಮಿಸಿದ್ದರು. ಇಂದು ಕೆರೆಗಳನ್ನು ನಾಶ ಮಾಡಿ ಕಲುಷಿತ ವಾತಾವರಣ ಸೃಷ್ಟಿಸಿ ಪ್ರಕೃತಿಯ ವಿರುದ್ಧವಾಗಿ ನಡೆದುಕೊಳ್ಳುವುದು ಅಪಾಯದ ಮುನ್ಸೂಚನೆ~ ಎಂದು ಪಟ್ಟನಾಯಕನಹಳ್ಳಿ ಸ್ಫಟಿಕ ಪುರಿ ಮಹಾಸಂಸ್ಥಾನ ಮಠದ ನಂಜಾವದೂತ ಮಹಾಸ್ವಾಮಿ ಹೇಳಿದರು.<br /> <br /> ಹೊರ ವರ್ತುಲ ರಸ್ತೆಯ ಪಾಪರೆಡ್ಡಿಪಾಳ್ಯದ ಆಟದ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಜ್ಞಾನ ಭಾರತಿ ವಾರ್ಡ್ ಮಟ್ಟದ ನಾಡಪ್ರಭು ಕೆಂಪೇಗೌಡರ 501 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> `ಕೆಂಪೇಗೌಡ ನಿರ್ಮಿಸಿದ ಕೆರೆಗಳು ನಗರದಲ್ಲಿ ಉಳಿದಿದ್ದರೆ ನೀರಿಗಾಗಿ ಇಷ್ಟೊಂದು ಹಾಹಾಕಾರ ಪಡುವ ಅಗತ್ಯವಿರಲಿಲ್ಲ. ಮುಂದಾಲೋಚನೆ ಇಲ್ಲದೇ ಹಣದ ಆಸೆಗೆ ಬಲಿಯಾಗಿ ನಗರದ ಪರಿಸರವನ್ನು ನಾಶ ಮಾಡಿ ಲಕ್ಷಾಂತರ ಜನಗಳ ಬದುಕು ಸಂಕಷ್ಟಕ್ಕೆ ಸಿಲುಕುತ್ತಿದೆ~ ಎಂದರು.<br /> <br /> ಶಾಸಕ ಎಂ.ಶ್ರೀನಿವಾಸ್, ಉಪ ಮೇಯರ್ ಎಲ್.ಶ್ರೀನಿವಾಸ್, ರಾಜರಾಜೇಶ್ವರಿ ನಗರ ಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಪಾಲಿಕೆ ಸದಸ್ಯ ಗೋವಿಂದರಾಜು ಹಾಜರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಗೇರಿ: `ನಗರ ಬೆಳೆದಂತೆಲ್ಲಾ ನೀರಿನ ತೊಂದರೆ ಉಂಟಾಗುತ್ತದೆ ಎಂದು ಕೆಂಪೇಗೌಡರು ಕೆರೆಗಳನ್ನು ನಿರ್ಮಿಸಿದ್ದರು. ಇಂದು ಕೆರೆಗಳನ್ನು ನಾಶ ಮಾಡಿ ಕಲುಷಿತ ವಾತಾವರಣ ಸೃಷ್ಟಿಸಿ ಪ್ರಕೃತಿಯ ವಿರುದ್ಧವಾಗಿ ನಡೆದುಕೊಳ್ಳುವುದು ಅಪಾಯದ ಮುನ್ಸೂಚನೆ~ ಎಂದು ಪಟ್ಟನಾಯಕನಹಳ್ಳಿ ಸ್ಫಟಿಕ ಪುರಿ ಮಹಾಸಂಸ್ಥಾನ ಮಠದ ನಂಜಾವದೂತ ಮಹಾಸ್ವಾಮಿ ಹೇಳಿದರು.<br /> <br /> ಹೊರ ವರ್ತುಲ ರಸ್ತೆಯ ಪಾಪರೆಡ್ಡಿಪಾಳ್ಯದ ಆಟದ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಜ್ಞಾನ ಭಾರತಿ ವಾರ್ಡ್ ಮಟ್ಟದ ನಾಡಪ್ರಭು ಕೆಂಪೇಗೌಡರ 501 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> `ಕೆಂಪೇಗೌಡ ನಿರ್ಮಿಸಿದ ಕೆರೆಗಳು ನಗರದಲ್ಲಿ ಉಳಿದಿದ್ದರೆ ನೀರಿಗಾಗಿ ಇಷ್ಟೊಂದು ಹಾಹಾಕಾರ ಪಡುವ ಅಗತ್ಯವಿರಲಿಲ್ಲ. ಮುಂದಾಲೋಚನೆ ಇಲ್ಲದೇ ಹಣದ ಆಸೆಗೆ ಬಲಿಯಾಗಿ ನಗರದ ಪರಿಸರವನ್ನು ನಾಶ ಮಾಡಿ ಲಕ್ಷಾಂತರ ಜನಗಳ ಬದುಕು ಸಂಕಷ್ಟಕ್ಕೆ ಸಿಲುಕುತ್ತಿದೆ~ ಎಂದರು.<br /> <br /> ಶಾಸಕ ಎಂ.ಶ್ರೀನಿವಾಸ್, ಉಪ ಮೇಯರ್ ಎಲ್.ಶ್ರೀನಿವಾಸ್, ರಾಜರಾಜೇಶ್ವರಿ ನಗರ ಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಪಾಲಿಕೆ ಸದಸ್ಯ ಗೋವಿಂದರಾಜು ಹಾಜರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>