<p><strong>ಬಳ್ಳಾರಿ:</strong> ‘ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಡಕಾಯಿತರಿಗಿಂತ ಕಡೆಯಾಗಿದ್ದಾರೆ. ಅವರನ್ನು ಕುಲಪತಿಗಳು ಎಂದು ಕರೆಯುವುದಾದರೂ ಹೇಗೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಂಗಳವಾರ ಇಲ್ಲಿ ಪ್ರಶ್ನಿಸಿದರು.<br /> <br /> ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ನಡೆದ 7ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಎಲ್ಲರೂ ಸರಿ ಇಲ್ಲ ಎನ್ನಲಾಗುವುದಿಲ್ಲ. ಆದರೆ ರಾಜ್ಯದ ಶ್ರೇಷ್ಠ ವಿಶ್ವವಿದ್ಯಾಲಯವಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯನ್ನು ನೋಡಿದರೆ ಉನ್ನತ ಶಿಕ್ಷಣ ಸಚಿವನಾಗಿ ನನಗೆ ನಾಚಿಕೆಯಾಗುತ್ತದೆ. ಅಲ್ಲಿನ ಆಡಳಿತ ವರ್ಗ ಭ್ರಷ್ಟವಾಗಿದೆ. ಮೈಸೂರು ವಿಶ್ವವಿದ್ಯಾಲಯವಾದರೂ ಏನಾಗಿದೆ’ ಎಂದು ಮಾರ್ಮಿಕವಾಗಿ ಕೇಳಿದರು.<br /> <br /> ‘ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟ, ಮೌಲ್ಯ ಕುಸಿದಿವೆ. ಅಲ್ಲಿನ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಹೋರಾಟ ಮಾಡಬೇಕು. ಇನ್ನಾದರೂ ಹೊಸ ಜನಾಂಗಕ್ಕೆ ಮಾದರಿಯಾದ, ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು’ ಎಂದರು.<br /> <br /> ಪ್ರತ್ಯೇಕ ವಿಶ್ವವಿದ್ಯಾಲಯ: ಬೆಂಗಳೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಗೃಹ ವಿಜ್ಞಾನ ಕಾಲೇಜು ಸೇರಿ ಒಂದು ಪ್ರತ್ಯೇಕ ವಿ.ವಿ ಹಾಗೂ ಮಂಡ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮತ್ತೊಂದು ಪ್ರತ್ಯೇಕ ವಿ.ವಿ ಎಂದು ಘೋಷಿಸಲಾಗುವುದು ಎಂದರು.<br /> <br /> * ಬೆಂಗಳೂರಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರದಬ್ಬಲು ಸೂಚಿಸಲಾಗಿದೆ. ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ<br /> <strong>-ಬಸವರಾಜ ರಾಯರಡ್ಡಿ, </strong>ಉನ್ನತ ಶಿಕ್ಷಣ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಡಕಾಯಿತರಿಗಿಂತ ಕಡೆಯಾಗಿದ್ದಾರೆ. ಅವರನ್ನು ಕುಲಪತಿಗಳು ಎಂದು ಕರೆಯುವುದಾದರೂ ಹೇಗೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಂಗಳವಾರ ಇಲ್ಲಿ ಪ್ರಶ್ನಿಸಿದರು.<br /> <br /> ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ನಡೆದ 7ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ಎಲ್ಲರೂ ಸರಿ ಇಲ್ಲ ಎನ್ನಲಾಗುವುದಿಲ್ಲ. ಆದರೆ ರಾಜ್ಯದ ಶ್ರೇಷ್ಠ ವಿಶ್ವವಿದ್ಯಾಲಯವಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯನ್ನು ನೋಡಿದರೆ ಉನ್ನತ ಶಿಕ್ಷಣ ಸಚಿವನಾಗಿ ನನಗೆ ನಾಚಿಕೆಯಾಗುತ್ತದೆ. ಅಲ್ಲಿನ ಆಡಳಿತ ವರ್ಗ ಭ್ರಷ್ಟವಾಗಿದೆ. ಮೈಸೂರು ವಿಶ್ವವಿದ್ಯಾಲಯವಾದರೂ ಏನಾಗಿದೆ’ ಎಂದು ಮಾರ್ಮಿಕವಾಗಿ ಕೇಳಿದರು.<br /> <br /> ‘ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟ, ಮೌಲ್ಯ ಕುಸಿದಿವೆ. ಅಲ್ಲಿನ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಹೋರಾಟ ಮಾಡಬೇಕು. ಇನ್ನಾದರೂ ಹೊಸ ಜನಾಂಗಕ್ಕೆ ಮಾದರಿಯಾದ, ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು’ ಎಂದರು.<br /> <br /> ಪ್ರತ್ಯೇಕ ವಿಶ್ವವಿದ್ಯಾಲಯ: ಬೆಂಗಳೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಗೃಹ ವಿಜ್ಞಾನ ಕಾಲೇಜು ಸೇರಿ ಒಂದು ಪ್ರತ್ಯೇಕ ವಿ.ವಿ ಹಾಗೂ ಮಂಡ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮತ್ತೊಂದು ಪ್ರತ್ಯೇಕ ವಿ.ವಿ ಎಂದು ಘೋಷಿಸಲಾಗುವುದು ಎಂದರು.<br /> <br /> * ಬೆಂಗಳೂರಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರದಬ್ಬಲು ಸೂಚಿಸಲಾಗಿದೆ. ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ<br /> <strong>-ಬಸವರಾಜ ರಾಯರಡ್ಡಿ, </strong>ಉನ್ನತ ಶಿಕ್ಷಣ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>