<p><strong>ಬೆಂಗಳೂರು</strong>: `ಒ- ಪಾಸಿಟಿವ್' ಗುಂಪಿನ ರಕ್ತದ ಬದಲು `ಬಿ-ಪಾಸಿಟಿವ್' ರಕ್ತ ನೀಡಿ ಯುವತಿಯ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿರುವ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರು, ಪ್ರಯೋಗಾಲಯದ ಸಿಬ್ಬಂದಿ, ನರ್ಸ್ ಸೇರಿದಂತೆ ನಾಲ್ವರನ್ನು ಕೂಡಲೇ ಅಮಾನತು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.<br /> <br /> ರಕ್ತ ಹೀನತೆಯಿಂದ ಬಳಲುತ್ತಿದ್ದ ಮೃತ ರಾಜೇಶ್ವರಿಯನ್ನು ತಪಾಸಣೆ ನಡೆಸಿದ ಡಾ.ಸುರೇಶ್, ರಕ್ತ ನಿಧಿ ಅಧಿಕಾರಿ ಡಾ. ರೇಣುಕಾ, ಪ್ರಯೋಗಾಲಯದ ತಂತ್ರಜ್ಞರಾದ ಭಾಗ್ಯಲಕ್ಷ್ಮಿ ಹಾಗೂ ನರ್ಸ್ ಲಲಿತಾ ಅವರನ್ನು ಅಮಾನತು ಮಾಡಲಾಗಿದೆ.<br /> <br /> ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್, `ಆಸ್ಪತ್ರೆಯ ಸಿಬ್ಬಂದಿಯ ದಿವ್ಯ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಪ್ರಕರಣದಿಂದ ಆರೋಗ್ಯ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಸಿಬ್ಬಂದಿಯಿಂದ ಲೋಪವಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದ್ದು, ಸಂಬಂಧಪಟ್ಟವರನ್ನು ಅಮಾನತು ಮಾಡಲಾಗಿದೆ' ಎಂದು ತಿಳಿಸಿದರು.<br /> <br /> `ನಾಗರಿಕರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಸದಾ ಬದ್ಧವಾಗಿರುತ್ತದೆ. ಆರೋಗ್ಯ ಸೇವೆಯೆಂಬುದು ಸದಾ ಜನಸ್ನೇಹಿಯಾಗಿರಬೇಕು. ಬೇಜವಾಬ್ದಾರಿಯಿಂದ ವರ್ತಿಸುವ ಸಿಬ್ಬಂದಿಗಳಿಗೆ ಈ ಪ್ರಕರಣ ತಕ್ಕ ಪಾಠವಾಗಬೇಕು'ಎಂದು ಹೇಳಿದರು.<br /> <br /> `ಈಗಾಗಲೇ ಯುವತಿಯ ಮನೆಗೆ ತೆರಳಿ ಸಂಬಂಧಿಕರಿಗೆ ಸಾಂತ್ವನ ಹೇಳಲಾಗಿದೆ. ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ಮೃತಪಟ್ಟ ಯುವತಿಯ ಕುಟುಂಬಕ್ಕೆ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ' ಎಂದರು.</p>.<p><strong>ಕಠಿಣ ಶಿಕ್ಷೆ ನೀಡಬೇಕು</strong><br /> `ಸಚಿವರು ಖುದ್ದು ಮನೆಗೆ ಬಂದು ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸತತ ನಾಲ್ಕು ದಿನಗಳ ನರಳಾಟದ ನಂತರ ನನ್ನ ತಂಗಿ ಕೊನೆಯುಸಿರೆಳೆದಿದ್ದಾಳೆ. ಹಾಗಾಗಿ ತಪ್ಪಿತಸ್ಥರಿಗೆ ಯಾವುದೇ ವಿನಾಯಿತಿ ನೀಡದೇ ಕಠಿಣ ಶಿಕ್ಷೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಯಾಗಬೇಕು'<br /> - ಜಯಲಕ್ಷ್ಮಿಮೃತಳ ಸಹೋದರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಒ- ಪಾಸಿಟಿವ್' ಗುಂಪಿನ ರಕ್ತದ ಬದಲು `ಬಿ-ಪಾಸಿಟಿವ್' ರಕ್ತ ನೀಡಿ ಯುವತಿಯ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿರುವ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರು, ಪ್ರಯೋಗಾಲಯದ ಸಿಬ್ಬಂದಿ, ನರ್ಸ್ ಸೇರಿದಂತೆ ನಾಲ್ವರನ್ನು ಕೂಡಲೇ ಅಮಾನತು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.<br /> <br /> ರಕ್ತ ಹೀನತೆಯಿಂದ ಬಳಲುತ್ತಿದ್ದ ಮೃತ ರಾಜೇಶ್ವರಿಯನ್ನು ತಪಾಸಣೆ ನಡೆಸಿದ ಡಾ.ಸುರೇಶ್, ರಕ್ತ ನಿಧಿ ಅಧಿಕಾರಿ ಡಾ. ರೇಣುಕಾ, ಪ್ರಯೋಗಾಲಯದ ತಂತ್ರಜ್ಞರಾದ ಭಾಗ್ಯಲಕ್ಷ್ಮಿ ಹಾಗೂ ನರ್ಸ್ ಲಲಿತಾ ಅವರನ್ನು ಅಮಾನತು ಮಾಡಲಾಗಿದೆ.<br /> <br /> ಈ ಬಗ್ಗೆ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್, `ಆಸ್ಪತ್ರೆಯ ಸಿಬ್ಬಂದಿಯ ದಿವ್ಯ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಪ್ರಕರಣದಿಂದ ಆರೋಗ್ಯ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಸಿಬ್ಬಂದಿಯಿಂದ ಲೋಪವಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದ್ದು, ಸಂಬಂಧಪಟ್ಟವರನ್ನು ಅಮಾನತು ಮಾಡಲಾಗಿದೆ' ಎಂದು ತಿಳಿಸಿದರು.<br /> <br /> `ನಾಗರಿಕರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಸದಾ ಬದ್ಧವಾಗಿರುತ್ತದೆ. ಆರೋಗ್ಯ ಸೇವೆಯೆಂಬುದು ಸದಾ ಜನಸ್ನೇಹಿಯಾಗಿರಬೇಕು. ಬೇಜವಾಬ್ದಾರಿಯಿಂದ ವರ್ತಿಸುವ ಸಿಬ್ಬಂದಿಗಳಿಗೆ ಈ ಪ್ರಕರಣ ತಕ್ಕ ಪಾಠವಾಗಬೇಕು'ಎಂದು ಹೇಳಿದರು.<br /> <br /> `ಈಗಾಗಲೇ ಯುವತಿಯ ಮನೆಗೆ ತೆರಳಿ ಸಂಬಂಧಿಕರಿಗೆ ಸಾಂತ್ವನ ಹೇಳಲಾಗಿದೆ. ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ಮೃತಪಟ್ಟ ಯುವತಿಯ ಕುಟುಂಬಕ್ಕೆ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ' ಎಂದರು.</p>.<p><strong>ಕಠಿಣ ಶಿಕ್ಷೆ ನೀಡಬೇಕು</strong><br /> `ಸಚಿವರು ಖುದ್ದು ಮನೆಗೆ ಬಂದು ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸತತ ನಾಲ್ಕು ದಿನಗಳ ನರಳಾಟದ ನಂತರ ನನ್ನ ತಂಗಿ ಕೊನೆಯುಸಿರೆಳೆದಿದ್ದಾಳೆ. ಹಾಗಾಗಿ ತಪ್ಪಿತಸ್ಥರಿಗೆ ಯಾವುದೇ ವಿನಾಯಿತಿ ನೀಡದೇ ಕಠಿಣ ಶಿಕ್ಷೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಯಾಗಬೇಕು'<br /> - ಜಯಲಕ್ಷ್ಮಿಮೃತಳ ಸಹೋದರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>