<p><strong>ಬೆಂಗಳೂರು: </strong>ಲೋಕೋಪಯೋಗಿ ಇಲಾಖೆಯ (ನೀರಾವರಿ ಮತ್ತು ವಿದ್ಯುತ್) ಆಯುಕ್ತರಾಗಿ ನಿವೃತ್ತರಾಗಿದ್ದ ಕೆ.ಸಿ.ರೆಡ್ಡಿ (86) ಗುರುವಾರ ಬೆಳಗಿನ ಜಾವ 2.15ಕ್ಕೆ ಅವರ ಸ್ವಗೃಹದಲ್ಲಿ ನಿಧನರಾದರು.<br /> <br /> ಜಯನಗರ 8ನೇ ಬ್ಲಾಕ್ನಲ್ಲಿ ವಾಸವಾಗಿದ್ದ ಅವರು, ವಯೋಸಹಜ ಕಾಯಿಲೆಗಳ ಜತೆಗೆ ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದರು. ಮೃತರು ಪತ್ನಿ ಕೆ.ನಾಗವೇಣಿ ಅವರನ್ನು ಅಗಲಿದ್ದಾರೆ.<br /> <br /> ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 1994ರಿಂದ 2004ರ ಅವಧಿಯಲ್ಲಿ ನೀರಾವರಿ ಯೋಜನೆಗಳ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರಾಗಿ, 2004ರಿಂದ 2007ರವರೆಗೆ ಮುಖ್ಯಮಂತ್ರಿ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.<br /> <br /> ಕೆ.ಸಿ.ರೆಡ್ಡಿ ಅವರಿಗೆ 1997ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿವೆ.<br /> <br /> ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ 4ಕ್ಕೆ ವಿಲ್ಸನ್ ಗಾರ್ಡನ್ನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೋಕೋಪಯೋಗಿ ಇಲಾಖೆಯ (ನೀರಾವರಿ ಮತ್ತು ವಿದ್ಯುತ್) ಆಯುಕ್ತರಾಗಿ ನಿವೃತ್ತರಾಗಿದ್ದ ಕೆ.ಸಿ.ರೆಡ್ಡಿ (86) ಗುರುವಾರ ಬೆಳಗಿನ ಜಾವ 2.15ಕ್ಕೆ ಅವರ ಸ್ವಗೃಹದಲ್ಲಿ ನಿಧನರಾದರು.<br /> <br /> ಜಯನಗರ 8ನೇ ಬ್ಲಾಕ್ನಲ್ಲಿ ವಾಸವಾಗಿದ್ದ ಅವರು, ವಯೋಸಹಜ ಕಾಯಿಲೆಗಳ ಜತೆಗೆ ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದರು. ಮೃತರು ಪತ್ನಿ ಕೆ.ನಾಗವೇಣಿ ಅವರನ್ನು ಅಗಲಿದ್ದಾರೆ.<br /> <br /> ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 1994ರಿಂದ 2004ರ ಅವಧಿಯಲ್ಲಿ ನೀರಾವರಿ ಯೋಜನೆಗಳ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರಾಗಿ, 2004ರಿಂದ 2007ರವರೆಗೆ ಮುಖ್ಯಮಂತ್ರಿ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.<br /> <br /> ಕೆ.ಸಿ.ರೆಡ್ಡಿ ಅವರಿಗೆ 1997ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿವೆ.<br /> <br /> ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ 4ಕ್ಕೆ ವಿಲ್ಸನ್ ಗಾರ್ಡನ್ನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>