<p><strong>ಬೆಂಗಳೂರು: </strong>ಅಂಗ ಪಕ್ಷಗಳನ್ನು ಓಲೈಸುವ ಪ್ರಯತ್ನದಿಂದಾಗಿ ಆರ್ಥಿಕ ಸುಧಾರಣೆಯಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಿದ್ದ ಕೇಂದ್ರದ 2012ರ ಬಜೆಟ್ ಹುಸಿಯಾಗಿದೆ ಎಂದು ಸುಪ್ರೀಂಕೋರ್ಟ್ನ ಹಿರಿಯ ವಕೀಲ ಎಸ್. ಗಣೇಶ್ ಪ್ರತಿಕ್ರಿಯಿಸಿದ್ದಾರೆ.<br /> <br /> ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಬೆಂಗಳೂರು ಘಟಕವು ನಗರದ ಸೆಂಟ್ರಲ್ ಕಾಲೇಜು ಕ್ಯಾಂಪಸ್ನ ಜ್ಞಾನಜ್ಯೋತಿ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಬಜೆಟ್ ಕುರಿತ ವಿಶ್ಲೇಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಿದ ಅವರು, `ಆರ್ಥಿಕ ಅಭಿವೃದ್ಧಿಗೆ ಇರುವಂತಹ ಸುವರ್ಣಾವಕಾಶವನ್ನು ದೇಶ ಕಳೆದುಕೊಂಡಂತಾಗಿದೆ~ ಎಂದರು.<br /> <br /> `ಆರ್ಥಿಕ ಸುಧಾರಣೆಗೆ ಇದೊಂದು ಉತ್ತಮ ಅವಕಾಶವಾಗಿತ್ತು. ಆದರೆ, ಕೇಂದ್ರವು ಸರ್ಕಾರವು ತನ್ನ ಉಳಿವಿಗಾಗಿ ಮಿತ್ರ ಪಕ್ಷಗಳನ್ನು ತೃಪ್ತಿ ಪಡಿಸುವ ರೀತಿಯಲ್ಲಿ ಬಜೆಟ್ ಮಂಡಿಸಿರುವುದು ದುರದೃಷ್ಟಕರ~ ಎಂದರು.<br /> <br /> ಕೇಂದ್ರ ಸರ್ಕಾರದ ಮಿತ್ರ ಪಕ್ಷಗಳು ತಮ್ಮ ತಮ್ಮ ರಾಜ್ಯಗಳ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಪ್ಯಾಕೇಜ್ಗೆ ಒತ್ತಾಯಿಸಿದ್ದರಿಂದ ಸರ್ಕಾರಕ್ಕೆ ರೂ 1.25 ಲಕ್ಷ ಕೋಟಿ ಹೊರೆಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಂಗ ಪಕ್ಷಗಳನ್ನು ಓಲೈಸುವ ಪ್ರಯತ್ನದಿಂದಾಗಿ ಆರ್ಥಿಕ ಸುಧಾರಣೆಯಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಿದ್ದ ಕೇಂದ್ರದ 2012ರ ಬಜೆಟ್ ಹುಸಿಯಾಗಿದೆ ಎಂದು ಸುಪ್ರೀಂಕೋರ್ಟ್ನ ಹಿರಿಯ ವಕೀಲ ಎಸ್. ಗಣೇಶ್ ಪ್ರತಿಕ್ರಿಯಿಸಿದ್ದಾರೆ.<br /> <br /> ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ಬೆಂಗಳೂರು ಘಟಕವು ನಗರದ ಸೆಂಟ್ರಲ್ ಕಾಲೇಜು ಕ್ಯಾಂಪಸ್ನ ಜ್ಞಾನಜ್ಯೋತಿ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಬಜೆಟ್ ಕುರಿತ ವಿಶ್ಲೇಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಿದ ಅವರು, `ಆರ್ಥಿಕ ಅಭಿವೃದ್ಧಿಗೆ ಇರುವಂತಹ ಸುವರ್ಣಾವಕಾಶವನ್ನು ದೇಶ ಕಳೆದುಕೊಂಡಂತಾಗಿದೆ~ ಎಂದರು.<br /> <br /> `ಆರ್ಥಿಕ ಸುಧಾರಣೆಗೆ ಇದೊಂದು ಉತ್ತಮ ಅವಕಾಶವಾಗಿತ್ತು. ಆದರೆ, ಕೇಂದ್ರವು ಸರ್ಕಾರವು ತನ್ನ ಉಳಿವಿಗಾಗಿ ಮಿತ್ರ ಪಕ್ಷಗಳನ್ನು ತೃಪ್ತಿ ಪಡಿಸುವ ರೀತಿಯಲ್ಲಿ ಬಜೆಟ್ ಮಂಡಿಸಿರುವುದು ದುರದೃಷ್ಟಕರ~ ಎಂದರು.<br /> <br /> ಕೇಂದ್ರ ಸರ್ಕಾರದ ಮಿತ್ರ ಪಕ್ಷಗಳು ತಮ್ಮ ತಮ್ಮ ರಾಜ್ಯಗಳ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಪ್ಯಾಕೇಜ್ಗೆ ಒತ್ತಾಯಿಸಿದ್ದರಿಂದ ಸರ್ಕಾರಕ್ಕೆ ರೂ 1.25 ಲಕ್ಷ ಕೋಟಿ ಹೊರೆಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>