<p><strong>ನವದೆಹಲಿ (ಪಿಟಿಐ): </strong>ವೈದ್ಯಕೀಯ ಕಾಲೇಜು ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ 1 ರ ಅವಧಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾಗಿದ್ದ ಅನ್ಬುಮಣಿ ರಾಮದಾಸ್ ಅವರ ವಿರುದ್ಧ ದೆಹಲಿ ನ್ಯಾಯಾಲಯವೊಂದು ಶನಿವಾರ ಜಾಮೀನು ಸಹಿತ ವಾರೆಂಟ್ ಹೊರಡಿಸಿದೆ.<br /> <br /> ವಿಚಾರಣೆಗೆ ಹಾಜರಾಗಲು ವಿಫಲರಾದ ರಾಮದಾಸ್ ಅವರು ವೈದ್ಯಕೀಯ ಚಿಕಿತ್ಸೆಗಾಗಿ ಚೆನ್ನೈನಿಂದ ಬೆಂಗಳೂರಿಗೆ ತೆರಳಿರುವುದರಿಂದ ಅವರಿಗೆ ಸಮನ್ಸ್ ನೀಡಲು ಸಾಧ್ಯವಾಗಲಿಲ್ಲ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.<br /> <br /> ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ವಿಶೇಷ ಸಿಬಿಐ ನ್ಯಾಯಾಧೀಶ ತಲವಂತ್ ಸಿಂಗ್ ಅವರು ವಿಚಾರಣೆ ಸಮಯದಲ್ಲಿ ರಾಮದಾಸ್ ಅವರು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ಹೇಳುತ್ತಾ ಜಾಮೀನು ಸಹಿತ ವಾರೆಂಟ್ನ್ನು ಹೊರಡಿಸಿದರು.<br /> <br /> ಅನ್ಬುಮಣಿ ರಾಮದಾಸ್ ಅವರು 2004 ರಿಂದ 2009ರ ಯುಪಿಎ 1 ರ ಆಡಳಿತಾವಧಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.<br /> <br /> ನಿಗದಿತ ಸಂಖ್ಯೆಯ ಬೋಧಕ ಸಿಬ್ಬಂದಿ ಹಾಗೂ ಚಿಕಿತ್ಸಾ ಪರಿಕರಗಳು ಇಲ್ಲದಿದ್ದರೂ ಇಂದೋರ್ನ ವೈದ್ಯಕೀಯ ಕಾಲೇಜೊಂದಕ್ಕೆ, ವಿದ್ಯಾರ್ಥಿಗಳ ದಾಖಲಾತಿಗೆ ಅನುಮತಿ ನೀಡಿದ್ದ ಪ್ರಕರಣದಲ್ಲಿ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ <a href="http://prajavani.net/include/story.php?news=75243&section=1&menuid=10">ಏಪ್ರಿಲ್</a> ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ವೈದ್ಯಕೀಯ ಕಾಲೇಜು ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ 1 ರ ಅವಧಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾಗಿದ್ದ ಅನ್ಬುಮಣಿ ರಾಮದಾಸ್ ಅವರ ವಿರುದ್ಧ ದೆಹಲಿ ನ್ಯಾಯಾಲಯವೊಂದು ಶನಿವಾರ ಜಾಮೀನು ಸಹಿತ ವಾರೆಂಟ್ ಹೊರಡಿಸಿದೆ.<br /> <br /> ವಿಚಾರಣೆಗೆ ಹಾಜರಾಗಲು ವಿಫಲರಾದ ರಾಮದಾಸ್ ಅವರು ವೈದ್ಯಕೀಯ ಚಿಕಿತ್ಸೆಗಾಗಿ ಚೆನ್ನೈನಿಂದ ಬೆಂಗಳೂರಿಗೆ ತೆರಳಿರುವುದರಿಂದ ಅವರಿಗೆ ಸಮನ್ಸ್ ನೀಡಲು ಸಾಧ್ಯವಾಗಲಿಲ್ಲ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.<br /> <br /> ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ವಿಶೇಷ ಸಿಬಿಐ ನ್ಯಾಯಾಧೀಶ ತಲವಂತ್ ಸಿಂಗ್ ಅವರು ವಿಚಾರಣೆ ಸಮಯದಲ್ಲಿ ರಾಮದಾಸ್ ಅವರು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ಹೇಳುತ್ತಾ ಜಾಮೀನು ಸಹಿತ ವಾರೆಂಟ್ನ್ನು ಹೊರಡಿಸಿದರು.<br /> <br /> ಅನ್ಬುಮಣಿ ರಾಮದಾಸ್ ಅವರು 2004 ರಿಂದ 2009ರ ಯುಪಿಎ 1 ರ ಆಡಳಿತಾವಧಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.<br /> <br /> ನಿಗದಿತ ಸಂಖ್ಯೆಯ ಬೋಧಕ ಸಿಬ್ಬಂದಿ ಹಾಗೂ ಚಿಕಿತ್ಸಾ ಪರಿಕರಗಳು ಇಲ್ಲದಿದ್ದರೂ ಇಂದೋರ್ನ ವೈದ್ಯಕೀಯ ಕಾಲೇಜೊಂದಕ್ಕೆ, ವಿದ್ಯಾರ್ಥಿಗಳ ದಾಖಲಾತಿಗೆ ಅನುಮತಿ ನೀಡಿದ್ದ ಪ್ರಕರಣದಲ್ಲಿ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ <a href="http://prajavani.net/include/story.php?news=75243&section=1&menuid=10">ಏಪ್ರಿಲ್</a> ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>