<p><strong>ನವದೆಹಲಿ(ಪಿಟಿಐ) :</strong> ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವೆ ಜಯಂತಿ ನಟರಾಜನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.</p>.<p>ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷಸಂಘಟನೆ ನಡೆಸುವ ಸಲುವಾಗಿ ಅವರು ರಾಜೀನಾಮೆ ನೀಡಿದ್ದು, ಇನ್ನೂ ಹಲವು ಸಚಿವರು ರಾಜೀನಾಮೆ ನೀಡುವ ಸಾಧ್ಯತೆಯನ್ನು ಮೂಲಗಳು ವ್ಯಕ್ತಪಡಿಸಿವೆ.</p>.<p>ತಮಿಳುನಾಡು ಮೂಲದ ಜಯಂತಿ ಅವರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 59 ವರ್ಷದ ಅವರು ರಾಜ್ಯಸಭೆಯ ಹಿರಿಯ ಸದಸ್ಯೆಯಾಗಿದ್ದರು.</p>.<p>ಮೂಲಗಳ ಪ್ರಕಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಲವು ಕಾರ್ಯದರ್ಶಿಗಳನ್ನು ಪಕ್ಷದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಅಲ್ಲದೆ ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪರಿಸರ ಖಾತೆಯ ಹೆಚ್ಚುವರಿ ಜವಾಬ್ದಾರಿ ನೀಡುವ ನಿರೀಕ್ಷೆ ಮಾಡಲಾಗಿದೆ.</p>.<p>ಮೂಲಗಳ ಪ್ರಕಾರ ರಾಜೀನಾಮೆ ನೀಡುವ ಸಚಿವರ ಪಟ್ಟಿಯಲ್ಲಿ ಜೈರಾಮ್ ರಮೇಶ್, ಸಚಿನ್ ಪೈಲೆಟ್ ಮತ್ತು ಜಿತೇಂದ್ರ ಸಿಂಗ್ ಭನ್ವಾರ್ ಅವರ ಹೆಸರುಗಳಿವೆ.</p>.<p>ಪ್ರಧಾನ ಮಂತ್ರಿ ಅಭ್ಯರ್ಥಿ ಘೋಷಣೆಗಾಗಿ ಜನವರಿ 17ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೂ ಮುನ್ನ ಪಕ್ಷದಲ್ಲಿ ಸಾಕಷ್ಟು ಬದಲಾವಣೆ ನಡೆಯುವ ನಿರೀಕ್ಷೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ) :</strong> ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವೆ ಜಯಂತಿ ನಟರಾಜನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.</p>.<p>ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷಸಂಘಟನೆ ನಡೆಸುವ ಸಲುವಾಗಿ ಅವರು ರಾಜೀನಾಮೆ ನೀಡಿದ್ದು, ಇನ್ನೂ ಹಲವು ಸಚಿವರು ರಾಜೀನಾಮೆ ನೀಡುವ ಸಾಧ್ಯತೆಯನ್ನು ಮೂಲಗಳು ವ್ಯಕ್ತಪಡಿಸಿವೆ.</p>.<p>ತಮಿಳುನಾಡು ಮೂಲದ ಜಯಂತಿ ಅವರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 59 ವರ್ಷದ ಅವರು ರಾಜ್ಯಸಭೆಯ ಹಿರಿಯ ಸದಸ್ಯೆಯಾಗಿದ್ದರು.</p>.<p>ಮೂಲಗಳ ಪ್ರಕಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಲವು ಕಾರ್ಯದರ್ಶಿಗಳನ್ನು ಪಕ್ಷದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಅಲ್ಲದೆ ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪರಿಸರ ಖಾತೆಯ ಹೆಚ್ಚುವರಿ ಜವಾಬ್ದಾರಿ ನೀಡುವ ನಿರೀಕ್ಷೆ ಮಾಡಲಾಗಿದೆ.</p>.<p>ಮೂಲಗಳ ಪ್ರಕಾರ ರಾಜೀನಾಮೆ ನೀಡುವ ಸಚಿವರ ಪಟ್ಟಿಯಲ್ಲಿ ಜೈರಾಮ್ ರಮೇಶ್, ಸಚಿನ್ ಪೈಲೆಟ್ ಮತ್ತು ಜಿತೇಂದ್ರ ಸಿಂಗ್ ಭನ್ವಾರ್ ಅವರ ಹೆಸರುಗಳಿವೆ.</p>.<p>ಪ್ರಧಾನ ಮಂತ್ರಿ ಅಭ್ಯರ್ಥಿ ಘೋಷಣೆಗಾಗಿ ಜನವರಿ 17ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೂ ಮುನ್ನ ಪಕ್ಷದಲ್ಲಿ ಸಾಕಷ್ಟು ಬದಲಾವಣೆ ನಡೆಯುವ ನಿರೀಕ್ಷೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>