<p>ನವದೆಹಲಿ (ಐಎಎನ್ಎಸ್): ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ ಕೇಜ್ರಿವಾಲ್ ಅವರು ತನ್ನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ 'ಅಪಾಯಕಾರಿ' ಎಂಬುದನ್ನು ಬಿಜೆಪಿ ಸೋಮವಾರ ತಳ್ಳಿ ಹಾಕಿದೆ. ಆದರೆ ವಾರಾಣಸಿಯಲ್ಲಿ ಬಲಾಬಲ ಪ್ರದರ್ಶನಕ್ಕೆ ತಾನು ಸಿದ್ಧ ಎಂದು ಎಎಪಿ ತೋಳೇರಿಸಿದೆ.<br /> <br /> 'ನಾವು ಕೇಜ್ರಿವಾಲ್ ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಇಡೀ ರಾಷ್ಟ್ರದಲ್ಲಿ ಮೋದಿ ಅಲೆ ಇದೆ' ಎಂದು ಭಾರತೀಯ ಜನತಾ ಪಕ್ಷದ ಮಾಧ್ಯಮ ಸಂಚಾಲಕ ಹರೀಶ್ ಖುರಾನಾ ಇಲ್ಲಿ ಐಎಎನ್ ಎಸ್ ಜೊತೆ ಮಾತನಾಡುತ್ತಾ ಹೇಳಿದರು.<br /> <br /> 'ಕೇಜ್ರಿವಾಲ್ ಅವರು ತಾನೊಬ್ಬ ಅರಾಜಕತಾವಾದಿ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಅವರ 49 ದಿನಗಳ ಆಡಳಿತ (ದೆಹಲಿಯಲ್ಲಿ) ಒಂದು 'ಗಂಡಾಂತರ'ವಾಗಿತ್ತು ಮತ್ತು ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ' ಎಂದು ಖುರಾನಾ ನುಡಿದರು.<br /> <br /> 'ಉತ್ತರ ಪ್ರದೇಶ ಬಿಟ್ಟು ಬಿಡಿ. ದೆಹಲಿಯಲ್ಲಿ ಕೂಡಾ ಒಂದೇ ಒಂದು ಸ್ಥಾನ ಗೆಲ್ಲಲೂ ಅವರಿಗೆ ಸಾಧ್ಯವಾಗುವುದಿಲ್ಲ' ಎಂದೂ ಬಿಜೆಪಿ ಮಾಧ್ಯಮ ಸಂಚಾಲಕ ವಾದಿಸಿದರು.<br /> <br /> ತನ್ನ ಪಕ್ಷವು ತಮ್ಮನ್ನು ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕೆ ಇಳಿಸಲು ಬಯಸಿರುವುದಾಗಿ ಕೇಜ್ರಿವಾಲ್ ಅವರು ಬೆಂಗಳೂರಿನಲ್ಲಿ ಪ್ರಕಟಿಸಿದ ಒಂದು ದಿನದ ಬಳಿಕ ಬಿಜೆಪಿಯ ಈ ಪ್ರತಿಕ್ರಿಯೆ ಬಂದಿದೆ. ಹಿಂದೂಗಳ ಪವಿತ್ರ ನಗರದಲ್ಲಿ ಮಾರ್ಚ್ 23 ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ತಾವು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಕೇಜ್ರಿವಾಲ್ ಹೇಳಿದ್ದರು.<br /> <br /> ಕೇಜ್ರಿವಾಲ್ ಅವರ ನಿರ್ಧಾರಕ್ಕೆ ಇನ್ನೂ ಒಂದು ವಾರ ಇದ್ದರೂ, ದೆಹಲಿಯಲ್ಲಿ ಕೇಜ್ರಿವಾಲ್ ಅವರು ಶೀಲಾ ದೀಕ್ಷಿತ್ ಅವರನ್ನು ಎದುರಿಸಿದ್ದಂತೆಯೇ ವಾರಾಣಸಿಯಲ್ಲಿ ಕೇಜ್ರಿವಾಲ್- ಮೋದಿ ಹೋರಾಟಕ್ಕೆ ಪಕ್ಷ ಈಗಾಗಲೇ ಸನ್ನದ್ಧವಾಗಿದೆ ಎಂದು ಹಿರಿಯ ಎಎಪಿ ನಾಯಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ ಕೇಜ್ರಿವಾಲ್ ಅವರು ತನ್ನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ 'ಅಪಾಯಕಾರಿ' ಎಂಬುದನ್ನು ಬಿಜೆಪಿ ಸೋಮವಾರ ತಳ್ಳಿ ಹಾಕಿದೆ. ಆದರೆ ವಾರಾಣಸಿಯಲ್ಲಿ ಬಲಾಬಲ ಪ್ರದರ್ಶನಕ್ಕೆ ತಾನು ಸಿದ್ಧ ಎಂದು ಎಎಪಿ ತೋಳೇರಿಸಿದೆ.<br /> <br /> 'ನಾವು ಕೇಜ್ರಿವಾಲ್ ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಇಡೀ ರಾಷ್ಟ್ರದಲ್ಲಿ ಮೋದಿ ಅಲೆ ಇದೆ' ಎಂದು ಭಾರತೀಯ ಜನತಾ ಪಕ್ಷದ ಮಾಧ್ಯಮ ಸಂಚಾಲಕ ಹರೀಶ್ ಖುರಾನಾ ಇಲ್ಲಿ ಐಎಎನ್ ಎಸ್ ಜೊತೆ ಮಾತನಾಡುತ್ತಾ ಹೇಳಿದರು.<br /> <br /> 'ಕೇಜ್ರಿವಾಲ್ ಅವರು ತಾನೊಬ್ಬ ಅರಾಜಕತಾವಾದಿ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಅವರ 49 ದಿನಗಳ ಆಡಳಿತ (ದೆಹಲಿಯಲ್ಲಿ) ಒಂದು 'ಗಂಡಾಂತರ'ವಾಗಿತ್ತು ಮತ್ತು ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ' ಎಂದು ಖುರಾನಾ ನುಡಿದರು.<br /> <br /> 'ಉತ್ತರ ಪ್ರದೇಶ ಬಿಟ್ಟು ಬಿಡಿ. ದೆಹಲಿಯಲ್ಲಿ ಕೂಡಾ ಒಂದೇ ಒಂದು ಸ್ಥಾನ ಗೆಲ್ಲಲೂ ಅವರಿಗೆ ಸಾಧ್ಯವಾಗುವುದಿಲ್ಲ' ಎಂದೂ ಬಿಜೆಪಿ ಮಾಧ್ಯಮ ಸಂಚಾಲಕ ವಾದಿಸಿದರು.<br /> <br /> ತನ್ನ ಪಕ್ಷವು ತಮ್ಮನ್ನು ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕೆ ಇಳಿಸಲು ಬಯಸಿರುವುದಾಗಿ ಕೇಜ್ರಿವಾಲ್ ಅವರು ಬೆಂಗಳೂರಿನಲ್ಲಿ ಪ್ರಕಟಿಸಿದ ಒಂದು ದಿನದ ಬಳಿಕ ಬಿಜೆಪಿಯ ಈ ಪ್ರತಿಕ್ರಿಯೆ ಬಂದಿದೆ. ಹಿಂದೂಗಳ ಪವಿತ್ರ ನಗರದಲ್ಲಿ ಮಾರ್ಚ್ 23 ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ತಾವು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಕೇಜ್ರಿವಾಲ್ ಹೇಳಿದ್ದರು.<br /> <br /> ಕೇಜ್ರಿವಾಲ್ ಅವರ ನಿರ್ಧಾರಕ್ಕೆ ಇನ್ನೂ ಒಂದು ವಾರ ಇದ್ದರೂ, ದೆಹಲಿಯಲ್ಲಿ ಕೇಜ್ರಿವಾಲ್ ಅವರು ಶೀಲಾ ದೀಕ್ಷಿತ್ ಅವರನ್ನು ಎದುರಿಸಿದ್ದಂತೆಯೇ ವಾರಾಣಸಿಯಲ್ಲಿ ಕೇಜ್ರಿವಾಲ್- ಮೋದಿ ಹೋರಾಟಕ್ಕೆ ಪಕ್ಷ ಈಗಾಗಲೇ ಸನ್ನದ್ಧವಾಗಿದೆ ಎಂದು ಹಿರಿಯ ಎಎಪಿ ನಾಯಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>