<p><strong>ಚಿಕ್ಕಬಳ್ಳಾಪುರ:</strong> ಅರವಿಂದ್ ಕೇಜ್ರಿವಾಲ್ ಅವರಂಥ ಹುಚ್ಚ ಮತ್ತು ಅಪ್ರಬುದ್ಧ ರಾಜಕಾರಣಿಯನ್ನು ಜೀವನದಲ್ಲಿಯೇ ಕಂಡಿಲ್ಲ. ಕೇವಲ ಅರಾಜಕತೆಯ ವಾತಾವರಣ ಸೃಷ್ಟಿಸುತ್ತಾರೆಯೇ ಹೊರತು ರಾಜಕೀಯ ಮಾಡಲು ಬರು ವುದಿಲ್ಲ ಎಂದು ಕೇಂದ್ರ ಇಂಧನ ಸಚಿವ ವೀರಪ್ಪ ಮೊಯಿಲಿ ವ್ಯಂಗ್ಯವಾಡಿದರು.<br /> <br /> ನಗರದಲ್ಲಿ ಶನಿವಾರ ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿ ಗಾರರ ಜತೆ ಮಾತನಾಡಿ, ತುಘಲಕ್ ಜೊತೆಗೂ ಕೇಜ್ರಿವಾಲ್ರನ್ನು ಹೋಲಿಕೆ ಮಾಡಲು ಆಗುವುದಿಲ್ಲ. ತುಘಲಕ್ ಕೊಂಚ ಬುದ್ಧಿವಂತನಾಗಿದ್ದ ಮತ್ತು ರಾಜಕಾರಣ ಗೊತ್ತಿತ್ತು ಎಂದರು.<br /> <br /> ಉತ್ತಮ ಆಡಳಿತ ನೀಡಲಿ ಎಂಬ ಉದ್ದೇಶದಿಂದ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಕೊಟ್ಟಿತ್ತು. ಆದರೆ ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲ ರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಯನ್ನೇ ಶಿಥಿಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಖಾರವಾಗಿ ಹೇಳಿದರು.<br /> <br /> ರಿಲಯನ್ಸ್ ಸಂಸ್ಥೆ ಉದ್ಯಮಿ ಮುಖೇಶ್ ಅಂಬಾನಿ ಕಾಂಗ್ರೆಸ್ಗೆ ನೆರವಾಗುತ್ತಿರುವ ಮತ್ತು ತಾವೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲವೂ ಕೇಜ್ರಿವಾಲ್ ಅವರನ್ನೇ ಕೇಳಬೇಕು. ಅವರಿಗೆ ಎಲ್ಲವೂ ಗೊತ್ತಿದ್ದಂತೆ ವರ್ತಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಅರವಿಂದ್ ಕೇಜ್ರಿವಾಲ್ ಅವರಂಥ ಹುಚ್ಚ ಮತ್ತು ಅಪ್ರಬುದ್ಧ ರಾಜಕಾರಣಿಯನ್ನು ಜೀವನದಲ್ಲಿಯೇ ಕಂಡಿಲ್ಲ. ಕೇವಲ ಅರಾಜಕತೆಯ ವಾತಾವರಣ ಸೃಷ್ಟಿಸುತ್ತಾರೆಯೇ ಹೊರತು ರಾಜಕೀಯ ಮಾಡಲು ಬರು ವುದಿಲ್ಲ ಎಂದು ಕೇಂದ್ರ ಇಂಧನ ಸಚಿವ ವೀರಪ್ಪ ಮೊಯಿಲಿ ವ್ಯಂಗ್ಯವಾಡಿದರು.<br /> <br /> ನಗರದಲ್ಲಿ ಶನಿವಾರ ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಂಡ ನಂತರ ಸುದ್ದಿ ಗಾರರ ಜತೆ ಮಾತನಾಡಿ, ತುಘಲಕ್ ಜೊತೆಗೂ ಕೇಜ್ರಿವಾಲ್ರನ್ನು ಹೋಲಿಕೆ ಮಾಡಲು ಆಗುವುದಿಲ್ಲ. ತುಘಲಕ್ ಕೊಂಚ ಬುದ್ಧಿವಂತನಾಗಿದ್ದ ಮತ್ತು ರಾಜಕಾರಣ ಗೊತ್ತಿತ್ತು ಎಂದರು.<br /> <br /> ಉತ್ತಮ ಆಡಳಿತ ನೀಡಲಿ ಎಂಬ ಉದ್ದೇಶದಿಂದ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಕೊಟ್ಟಿತ್ತು. ಆದರೆ ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲ ರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಯನ್ನೇ ಶಿಥಿಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಖಾರವಾಗಿ ಹೇಳಿದರು.<br /> <br /> ರಿಲಯನ್ಸ್ ಸಂಸ್ಥೆ ಉದ್ಯಮಿ ಮುಖೇಶ್ ಅಂಬಾನಿ ಕಾಂಗ್ರೆಸ್ಗೆ ನೆರವಾಗುತ್ತಿರುವ ಮತ್ತು ತಾವೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲವೂ ಕೇಜ್ರಿವಾಲ್ ಅವರನ್ನೇ ಕೇಳಬೇಕು. ಅವರಿಗೆ ಎಲ್ಲವೂ ಗೊತ್ತಿದ್ದಂತೆ ವರ್ತಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>