<p><strong>ತಿರುವನಂತಪುರ, ಕೇರಳ (ಪಿಟಿಐ):</strong>19 ವರ್ಷದ ಅಥೀಟ್ ಒಬ್ಬರು ಎಡಗೈ ನರವನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ಭಾರತ ಕ್ರೀಡಾ ಪ್ರಾಧಿಕಾರ ಕೇಂದ್ರದಲ್ಲಿ ಬುಧವಾರ ನಡೆದಿದೆ. ಆದರೆ, ಘಟನೆಗೆ ತಕ್ಷಣವೇ ನಿಖರ ಕಾರಣ ತಿಳಿದು ಬಂದಿಲ್ಲ.</p>.<p>ಇತ್ತೀಚೆಗೆ ಕೇರಳದ ಅಲೆಪ್ಪಿಯಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ (ಎಸ್ಎಐ) ತರಬೇತಿ ಕೇಂದ್ರದಲ್ಲಿ ಮಹಿಳಾ ಅಥ್ಲೀಟ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದೆ.</p>.<p>ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯು ಲಕ್ಷ್ಮಿಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಕಾಲೇಜಿಗೆ ಸೇರಿದವರು.</p>.<p>‘ಗಾಜಿನ ಚೂರಿನಿಂದ ತನ್ನ ಎಡಗೈಯನ್ನು ಕೊಯ್ದುಕೊಂಡು ಹಾನಿಗೊಳಿಸಿಕೊಳ್ಳಲು ಅಥ್ಲೀಟ್ ಯತ್ನಿಸಿದ್ದರು. ಅವರನ್ನು ತ್ರಿವೇಂದ್ರಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ’ ಎಂದು ಎಲ್ಎನ್ಸಿಪಿಇ ಪ್ರಾಂಶುಪಾಲ ಡಾ. ಜಿ.ಕಿಶೋರ್ ಅವರು ತಿಳಿಸಿದ್ದಾರೆ.</p>.<p>‘ತುಂಬಾ ಆಳದ ಗಾಯವೇನೂ ಆಗಿಲ್ಲ. ಅಥ್ಲೀಟ್ ಮಾನಸಿಕ ಉದ್ವಿಗ್ನತೆಯಲ್ಲಿದ್ದಂತೆ ಅನಿಸುತ್ತಿತ್ತು. ನಡೆದಿದ್ದೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅದಕ್ಕಾಗಿ ಭಾರತ ಕ್ರೀಡಾ ಪ್ರಾಧಿಕಾರದ ಒಬ್ಬರು ಹಿರಿಯ ಅಧಿಕಾರಿ ನೇತೃತ್ವದ ಮೂರು ಸದಸ್ಯರ ಸಮಿತಿ ನೇಮಿಸಲಾಗಿದೆ’ ಎಂದೂ ಡಾ. ಕಿಶೋರ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ, ಕೇರಳ (ಪಿಟಿಐ):</strong>19 ವರ್ಷದ ಅಥೀಟ್ ಒಬ್ಬರು ಎಡಗೈ ನರವನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ಭಾರತ ಕ್ರೀಡಾ ಪ್ರಾಧಿಕಾರ ಕೇಂದ್ರದಲ್ಲಿ ಬುಧವಾರ ನಡೆದಿದೆ. ಆದರೆ, ಘಟನೆಗೆ ತಕ್ಷಣವೇ ನಿಖರ ಕಾರಣ ತಿಳಿದು ಬಂದಿಲ್ಲ.</p>.<p>ಇತ್ತೀಚೆಗೆ ಕೇರಳದ ಅಲೆಪ್ಪಿಯಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ (ಎಸ್ಎಐ) ತರಬೇತಿ ಕೇಂದ್ರದಲ್ಲಿ ಮಹಿಳಾ ಅಥ್ಲೀಟ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದೆ.</p>.<p>ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯು ಲಕ್ಷ್ಮಿಬಾಯಿ ರಾಷ್ಟ್ರೀಯ ದೈಹಿಕ ಶಿಕ್ಷಣ ಕಾಲೇಜಿಗೆ ಸೇರಿದವರು.</p>.<p>‘ಗಾಜಿನ ಚೂರಿನಿಂದ ತನ್ನ ಎಡಗೈಯನ್ನು ಕೊಯ್ದುಕೊಂಡು ಹಾನಿಗೊಳಿಸಿಕೊಳ್ಳಲು ಅಥ್ಲೀಟ್ ಯತ್ನಿಸಿದ್ದರು. ಅವರನ್ನು ತ್ರಿವೇಂದ್ರಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ’ ಎಂದು ಎಲ್ಎನ್ಸಿಪಿಇ ಪ್ರಾಂಶುಪಾಲ ಡಾ. ಜಿ.ಕಿಶೋರ್ ಅವರು ತಿಳಿಸಿದ್ದಾರೆ.</p>.<p>‘ತುಂಬಾ ಆಳದ ಗಾಯವೇನೂ ಆಗಿಲ್ಲ. ಅಥ್ಲೀಟ್ ಮಾನಸಿಕ ಉದ್ವಿಗ್ನತೆಯಲ್ಲಿದ್ದಂತೆ ಅನಿಸುತ್ತಿತ್ತು. ನಡೆದಿದ್ದೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅದಕ್ಕಾಗಿ ಭಾರತ ಕ್ರೀಡಾ ಪ್ರಾಧಿಕಾರದ ಒಬ್ಬರು ಹಿರಿಯ ಅಧಿಕಾರಿ ನೇತೃತ್ವದ ಮೂರು ಸದಸ್ಯರ ಸಮಿತಿ ನೇಮಿಸಲಾಗಿದೆ’ ಎಂದೂ ಡಾ. ಕಿಶೋರ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>