<p><strong>ಹುಬ್ಬಳ್ಳಿ:</strong> ನಗರದ ಕೇಶ್ವಾಪುರ ಸರ್ವೋದಯ ವೃತ್ತದಿಂದ ಗೋಪನಕೊಪ್ಪ ರಸ್ತೆಯಲ್ಲಿ `ರಾಯಲ್ ಫಂಕ್ಷನ್ ಹಾಲ್~ ಮುಂಭಾಗದಲ್ಲಿದ್ದ ಏಳು ಅಂಗಡಿಗಳನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ಗುರುವಾರ ಬೆಳಿಗ್ಗೆ ತೆರವುಗೊಳಿಸಿತು.<br /> <br /> ಗಜಾನನ ಮಹಾಮಂಡಳದ ಡಿ. ಗೋವಿಂದ ರಾವ್ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ಬೆನ್ನಲ್ಲೆ ಅಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. <br /> <br /> ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ.ಪಾಟೀಲ, ವಲಯ 6ರ ಸಹಾಯಕ ಆಯುಕ್ತ ಗಣಾಚಾರಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ಆರು ಗಂಟೆಯಿಂದ ಒಂಬತ್ತು ಗಂಟೆವರೆಗೆ ತೆರವು ಕಾರ್ಯ ನಡೆಸಲಾಯಿತು. ಕಾರ್ಯಾಚರಣೆಗೆ ಎರಡು ಜೆಸಿಬಿ ಮತ್ತು ಪೌರ ಕಾರ್ಮಿಕರನ್ನು ಬಳಸಿಕೊಳ್ಳಲಾಯಿತು.<br /> <br /> ಈ ಸಂದರ್ಭದಲ್ಲಿ ಎಸಿಪಿ ಎ.ಆರ್.ಬಡಿಗೇರ ನೇತೃತ್ವದಲ್ಲಿ ಇಬ್ಬರು ಪಿಎಸ್ಐ, ನಾಲ್ವರು ಎಎಸ್ಐ ಮತ್ತು 20 ಮಂದಿ ಪೊಲೀಸ್ ಸಿಬ್ಬಂದಿಯ ಬಿಗಿ ಬಂದೋಬಸ್ತು ಏರ್ಪಡಿಸಲಾಗಿತ್ತು. ಆದರೆ ಅಂಗಡಿ ಹೊಂದಿದರ್ಯಾರೂ ಪ್ರತಿರೋಧ ವ್ತಕ್ಯಪಡಿಸದೇ ಇದ್ದುರಿಂದ ಅಂಗಡಿಗಳ ನೆಲಸಮ ಕಾರ್ಯ ಸುಗಮವಾಗಿ ನಡೆಯಿತು.<br /> <br /> <strong>ನಗದು ಕಳವು: ಮನೆಕೆಲಸದವಳು ಆರೋಪಿ</strong><br /> ಹುಬ್ಬಳ್ಳಿ: ಶಾಂತಿ ಕಾಲೊನಿಯಲ್ಲಿ ವೈದ್ಯರೊಬ್ಬರ ಮನೆಯೊಂದರಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯನ್ನು ಅಶೋಕ ನಗರ ಪೊಲೀಸರು ಗುರುವಾರ ಬಂಧಿಸಿದರು.<br /> <br /> ಮಾಧವ ನಗರದ ಜರೀನಾ ಸೌದಾಗರ ಬಂಧಿತ ಮಹಿಳೆ. ಶಾಂತಿ ಕಾಲೊನಿಯಲ್ಲಿ ಮಹಾಲಕ್ಷ್ಮಿ ಅಪಾರ್ಟ್ಮೆಂಟ್ನಲ್ಲಿರುವ ಡಾ.ವಿರೂಪಾಕ್ಷ ದೇಶಪಾಂಡೆ ಎಂಬವರ ಮನೆಯ ಕಪಾಟಿನಲ್ಲಿ ಇರಿಸಿದ್ದ ರೂ 50,000 ನಗದು ಕೆಲವು ದಿನಗಳ ಹಿಂದೆ ಕಳವು ಆಗಿತ್ತು. ಈ ಕುರಿತು ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ವೈದ್ಯರ ಮನೆಗೆ ಜರೀನಾ ನಿತ್ಯ ಕೆಲಸಕ್ಕೆ ಬರುತ್ತಿದ್ದಳು. ಆದರೆ ಆಕೆಯೇ ಈ ಕಳವು ನಡೆಸಿರಬಹುದೆಂಬ ಬಗ್ಗೆ ಮನೆಯವರಿಗೆ ಯಾವುದೇ ಸಂದೇಹ ಇರಲಿಲ್ಲ ಎನ್ನಲಾಗಿದೆ. ಆದರೆ ಪೊಲೀಸರು ಜರೀನಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆಕೆ ಹಣ ದೋಚಿದ ವಿಷಯ ಬೆಳಕಿಗೆ ಬಂದಿದೆ. <br /> <br /> <strong>ವಿಮಾನ ನಿಲ್ದಾಣಕ್ಕೆ ಭೂ ಸ್ವಾಧೀನ: ಸಿಐಡಿಯಿಂದ ದಾಖಲೆ ಪರಿಶೀಲನೆ </strong><br /> ಹುಬ್ಬಳ್ಳಿ: ವಿಮಾನ ನಿಲ್ದಾಣ ವಿಸ್ತರಣೆಗಾಗಿ ಕೆಐಎಡಿಬಿ ಭೂ ಸ್ವಾಧೀನ ವೇಳೆ ರೈತರಿಗೆ ಸಮರ್ಪಕವಾಗಿ ಪರಿಹಾರಧನ ನೀಡದೆ ವಂಚಿಸಲಾಗಿದೆ ಎಂದು ಲೋಕಾಯುಕ್ತಕ್ಕೆ ನೀಡಲಾದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಐಡಿ ಪೊಲೀಸರ ತಂಡ ಶುಕ್ರವಾರ ಮತ್ತು ಶನಿವಾರ ಮಹತ್ವದ ದಾಖಲೆಗಳನ್ನು ಸಂಗ್ರಹಿಸಲಿದೆ.<br /> <br /> ಭೂ ಸ್ವಾಧೀನದ ಬಳಿಕ ಪರಿಹಾರಧನ ಹಂಚಿಕೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ರೈತರ ಪರವಾಗಿ ಮುತ್ತಣ್ಣ ಶಿವಳ್ಳಿ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣದ ಕುರಿತು ವಿಚಾರಣೆಯನ್ನು ಸಿಐಡಿಗೆ ವಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೂನ್ 27ರಿಂದ ಐದು ದಿನಗಳವರೆಗೆ ನಗರದ ಸರ್ಕ್ಯೂಟ್ ಹೌಸ್ನಲ್ಲಿ ಬೀಡುಬಿಟ್ಟಿದ್ದ ಸಿಐಡಿ ಡಿವೈಎಸ್ಪಿ ಮೋಹನ್ ರಾವ್ ನೇತೃತ್ವದ ತಂಡ ವಂಚನೆಗೊಳಗಾದ ರೈತರನ್ನು ಮತ್ತು ಭೂ ಸ್ವಾಧೀನದ ವೇಳೆ ಇದ್ದ ಕೆಐಎಡಿಬಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.<br /> <br /> `ಪ್ರಕರಣದ ವಿಚಾರಣೆಯ ಮುಂದುವರಿದ ಭಾಗವಾಗಿ ಶುಕ್ರವಾರ ಮತ್ತು ಶನಿವಾರ ಹುಬ್ಬಳ್ಳಿ ತಾಲ್ಲೂಕು ಕಚೇರಿ ಮತ್ತು ನೋಂದಣಿ ಕಚೇರಿಯಿಂದ ಕೆಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗುವುದು~ ಎಂದು ಸಿಐಡಿ ಇನ್ಸ್ಪೆಕ್ಟರ್ ಶ್ರೀನಿವಾಸ ರಾಜು ಅವರು `ಪ್ರಜಾವಾಣಿ~ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದ ಕೇಶ್ವಾಪುರ ಸರ್ವೋದಯ ವೃತ್ತದಿಂದ ಗೋಪನಕೊಪ್ಪ ರಸ್ತೆಯಲ್ಲಿ `ರಾಯಲ್ ಫಂಕ್ಷನ್ ಹಾಲ್~ ಮುಂಭಾಗದಲ್ಲಿದ್ದ ಏಳು ಅಂಗಡಿಗಳನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ಗುರುವಾರ ಬೆಳಿಗ್ಗೆ ತೆರವುಗೊಳಿಸಿತು.<br /> <br /> ಗಜಾನನ ಮಹಾಮಂಡಳದ ಡಿ. ಗೋವಿಂದ ರಾವ್ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ಬೆನ್ನಲ್ಲೆ ಅಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. <br /> <br /> ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ.ಪಾಟೀಲ, ವಲಯ 6ರ ಸಹಾಯಕ ಆಯುಕ್ತ ಗಣಾಚಾರಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ ಆರು ಗಂಟೆಯಿಂದ ಒಂಬತ್ತು ಗಂಟೆವರೆಗೆ ತೆರವು ಕಾರ್ಯ ನಡೆಸಲಾಯಿತು. ಕಾರ್ಯಾಚರಣೆಗೆ ಎರಡು ಜೆಸಿಬಿ ಮತ್ತು ಪೌರ ಕಾರ್ಮಿಕರನ್ನು ಬಳಸಿಕೊಳ್ಳಲಾಯಿತು.<br /> <br /> ಈ ಸಂದರ್ಭದಲ್ಲಿ ಎಸಿಪಿ ಎ.ಆರ್.ಬಡಿಗೇರ ನೇತೃತ್ವದಲ್ಲಿ ಇಬ್ಬರು ಪಿಎಸ್ಐ, ನಾಲ್ವರು ಎಎಸ್ಐ ಮತ್ತು 20 ಮಂದಿ ಪೊಲೀಸ್ ಸಿಬ್ಬಂದಿಯ ಬಿಗಿ ಬಂದೋಬಸ್ತು ಏರ್ಪಡಿಸಲಾಗಿತ್ತು. ಆದರೆ ಅಂಗಡಿ ಹೊಂದಿದರ್ಯಾರೂ ಪ್ರತಿರೋಧ ವ್ತಕ್ಯಪಡಿಸದೇ ಇದ್ದುರಿಂದ ಅಂಗಡಿಗಳ ನೆಲಸಮ ಕಾರ್ಯ ಸುಗಮವಾಗಿ ನಡೆಯಿತು.<br /> <br /> <strong>ನಗದು ಕಳವು: ಮನೆಕೆಲಸದವಳು ಆರೋಪಿ</strong><br /> ಹುಬ್ಬಳ್ಳಿ: ಶಾಂತಿ ಕಾಲೊನಿಯಲ್ಲಿ ವೈದ್ಯರೊಬ್ಬರ ಮನೆಯೊಂದರಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯನ್ನು ಅಶೋಕ ನಗರ ಪೊಲೀಸರು ಗುರುವಾರ ಬಂಧಿಸಿದರು.<br /> <br /> ಮಾಧವ ನಗರದ ಜರೀನಾ ಸೌದಾಗರ ಬಂಧಿತ ಮಹಿಳೆ. ಶಾಂತಿ ಕಾಲೊನಿಯಲ್ಲಿ ಮಹಾಲಕ್ಷ್ಮಿ ಅಪಾರ್ಟ್ಮೆಂಟ್ನಲ್ಲಿರುವ ಡಾ.ವಿರೂಪಾಕ್ಷ ದೇಶಪಾಂಡೆ ಎಂಬವರ ಮನೆಯ ಕಪಾಟಿನಲ್ಲಿ ಇರಿಸಿದ್ದ ರೂ 50,000 ನಗದು ಕೆಲವು ದಿನಗಳ ಹಿಂದೆ ಕಳವು ಆಗಿತ್ತು. ಈ ಕುರಿತು ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ವೈದ್ಯರ ಮನೆಗೆ ಜರೀನಾ ನಿತ್ಯ ಕೆಲಸಕ್ಕೆ ಬರುತ್ತಿದ್ದಳು. ಆದರೆ ಆಕೆಯೇ ಈ ಕಳವು ನಡೆಸಿರಬಹುದೆಂಬ ಬಗ್ಗೆ ಮನೆಯವರಿಗೆ ಯಾವುದೇ ಸಂದೇಹ ಇರಲಿಲ್ಲ ಎನ್ನಲಾಗಿದೆ. ಆದರೆ ಪೊಲೀಸರು ಜರೀನಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆಕೆ ಹಣ ದೋಚಿದ ವಿಷಯ ಬೆಳಕಿಗೆ ಬಂದಿದೆ. <br /> <br /> <strong>ವಿಮಾನ ನಿಲ್ದಾಣಕ್ಕೆ ಭೂ ಸ್ವಾಧೀನ: ಸಿಐಡಿಯಿಂದ ದಾಖಲೆ ಪರಿಶೀಲನೆ </strong><br /> ಹುಬ್ಬಳ್ಳಿ: ವಿಮಾನ ನಿಲ್ದಾಣ ವಿಸ್ತರಣೆಗಾಗಿ ಕೆಐಎಡಿಬಿ ಭೂ ಸ್ವಾಧೀನ ವೇಳೆ ರೈತರಿಗೆ ಸಮರ್ಪಕವಾಗಿ ಪರಿಹಾರಧನ ನೀಡದೆ ವಂಚಿಸಲಾಗಿದೆ ಎಂದು ಲೋಕಾಯುಕ್ತಕ್ಕೆ ನೀಡಲಾದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಐಡಿ ಪೊಲೀಸರ ತಂಡ ಶುಕ್ರವಾರ ಮತ್ತು ಶನಿವಾರ ಮಹತ್ವದ ದಾಖಲೆಗಳನ್ನು ಸಂಗ್ರಹಿಸಲಿದೆ.<br /> <br /> ಭೂ ಸ್ವಾಧೀನದ ಬಳಿಕ ಪರಿಹಾರಧನ ಹಂಚಿಕೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ರೈತರ ಪರವಾಗಿ ಮುತ್ತಣ್ಣ ಶಿವಳ್ಳಿ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣದ ಕುರಿತು ವಿಚಾರಣೆಯನ್ನು ಸಿಐಡಿಗೆ ವಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೂನ್ 27ರಿಂದ ಐದು ದಿನಗಳವರೆಗೆ ನಗರದ ಸರ್ಕ್ಯೂಟ್ ಹೌಸ್ನಲ್ಲಿ ಬೀಡುಬಿಟ್ಟಿದ್ದ ಸಿಐಡಿ ಡಿವೈಎಸ್ಪಿ ಮೋಹನ್ ರಾವ್ ನೇತೃತ್ವದ ತಂಡ ವಂಚನೆಗೊಳಗಾದ ರೈತರನ್ನು ಮತ್ತು ಭೂ ಸ್ವಾಧೀನದ ವೇಳೆ ಇದ್ದ ಕೆಐಎಡಿಬಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.<br /> <br /> `ಪ್ರಕರಣದ ವಿಚಾರಣೆಯ ಮುಂದುವರಿದ ಭಾಗವಾಗಿ ಶುಕ್ರವಾರ ಮತ್ತು ಶನಿವಾರ ಹುಬ್ಬಳ್ಳಿ ತಾಲ್ಲೂಕು ಕಚೇರಿ ಮತ್ತು ನೋಂದಣಿ ಕಚೇರಿಯಿಂದ ಕೆಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗುವುದು~ ಎಂದು ಸಿಐಡಿ ಇನ್ಸ್ಪೆಕ್ಟರ್ ಶ್ರೀನಿವಾಸ ರಾಜು ಅವರು `ಪ್ರಜಾವಾಣಿ~ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>