<p>ಶಿವಮೊಗ್ಗ: `ಕೈಗಾರಿಕಾ ಕ್ಷೇತ್ರದಲ್ಲಿ ಒಬ್ಬರ ಪ್ರಗತಿ ಕಂಡು ಇನ್ನೊಬ್ಬರು ಸಹಿಸದ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರನ್ನು ಪ್ರೋತ್ಸಾಹಿಸಿ ಜಿಲ್ಲಾ ಕೈಗಾರಿಕಾ ಸಂಸ್ಕೃತಿಗೆ ಮುನ್ನುಡಿ ಬರೆದು, ಶಿವಮೊಗ್ಗದ ವಿಶ್ವೇಶ್ವರಯ್ಯ ಎಂದೇ ಹೆಸರಾದವರು ಟಿ.ವಿ. ನಾರಾಯಣ ಶಾಸ್ತ್ರಿಗಳು~ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀನಿವಾಸ್ ಅಭಿಪ್ರಾಯಪಟ್ಟರು.<br /> <br /> ನಗರದ ಆಟೋ ಕಾಂಪ್ಲೆಕ್ಸ್ ಸಂಕೀರ್ಣದಲ್ಲಿ ಶನಿವಾರ ಗ್ಯಾರೇಜ್ ಮತ್ತು ಎಂಜಿನಿಯರ್ ವರ್ಕ್ಶಾಪ್ ವತಿಯಿಂದ ಹಮ್ಮಿಕೊಂಡಿದ್ದ ಕೈಗಾರಿಕೋದ್ಯಮಿ ಟಿ.ವಿ. ನಾರಾಯಣ ಶಾಸ್ತ್ರಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. <br /> <br /> ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಕೆ.ಎಸ್. ಅನಂತರಾಮಯ್ಯ ಮಾತನಾಡಿ, ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಸರಾದ ಆಟೋ ಸಮುಚ್ಚಯ ನಿರ್ಮಿಸಲಾಯಿತು~ ಎಂದರು. ಟಿ.ವಿ. ನಾರಾಯಣಶಾಸ್ತ್ರಿ ಮಕ್ಕಳಾದ ಲಲಿತಾಂಬಾ, ನಳಿನಾ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅಶ್ವತ್ಥನಾರಾಯಣ ಶೆಟ್ಟಿ, ಪದಾಧಿಕಾರಿ ಉಮೇಶ್ ಆರಾಧ್ಯ, ಗ್ಯಾರೇಜ್ ಮತ್ತು ಎಂಜಿನಿಯರ್ ಸಂಘದ ಉಪಾಧ್ಯಕ್ಷ ಪಾಷಾ, ಪದಾಧಿಕಾರಿಗಳಾದ ಎಸ್.ಪಿ. ಸುಬ್ರಹ್ಮಣ್ಯ, ಧನಂಜಯ್, ಕುಪ್ಪಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: `ಕೈಗಾರಿಕಾ ಕ್ಷೇತ್ರದಲ್ಲಿ ಒಬ್ಬರ ಪ್ರಗತಿ ಕಂಡು ಇನ್ನೊಬ್ಬರು ಸಹಿಸದ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರನ್ನು ಪ್ರೋತ್ಸಾಹಿಸಿ ಜಿಲ್ಲಾ ಕೈಗಾರಿಕಾ ಸಂಸ್ಕೃತಿಗೆ ಮುನ್ನುಡಿ ಬರೆದು, ಶಿವಮೊಗ್ಗದ ವಿಶ್ವೇಶ್ವರಯ್ಯ ಎಂದೇ ಹೆಸರಾದವರು ಟಿ.ವಿ. ನಾರಾಯಣ ಶಾಸ್ತ್ರಿಗಳು~ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀನಿವಾಸ್ ಅಭಿಪ್ರಾಯಪಟ್ಟರು.<br /> <br /> ನಗರದ ಆಟೋ ಕಾಂಪ್ಲೆಕ್ಸ್ ಸಂಕೀರ್ಣದಲ್ಲಿ ಶನಿವಾರ ಗ್ಯಾರೇಜ್ ಮತ್ತು ಎಂಜಿನಿಯರ್ ವರ್ಕ್ಶಾಪ್ ವತಿಯಿಂದ ಹಮ್ಮಿಕೊಂಡಿದ್ದ ಕೈಗಾರಿಕೋದ್ಯಮಿ ಟಿ.ವಿ. ನಾರಾಯಣ ಶಾಸ್ತ್ರಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. <br /> <br /> ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಕೆ.ಎಸ್. ಅನಂತರಾಮಯ್ಯ ಮಾತನಾಡಿ, ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಸರಾದ ಆಟೋ ಸಮುಚ್ಚಯ ನಿರ್ಮಿಸಲಾಯಿತು~ ಎಂದರು. ಟಿ.ವಿ. ನಾರಾಯಣಶಾಸ್ತ್ರಿ ಮಕ್ಕಳಾದ ಲಲಿತಾಂಬಾ, ನಳಿನಾ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅಶ್ವತ್ಥನಾರಾಯಣ ಶೆಟ್ಟಿ, ಪದಾಧಿಕಾರಿ ಉಮೇಶ್ ಆರಾಧ್ಯ, ಗ್ಯಾರೇಜ್ ಮತ್ತು ಎಂಜಿನಿಯರ್ ಸಂಘದ ಉಪಾಧ್ಯಕ್ಷ ಪಾಷಾ, ಪದಾಧಿಕಾರಿಗಳಾದ ಎಸ್.ಪಿ. ಸುಬ್ರಹ್ಮಣ್ಯ, ಧನಂಜಯ್, ಕುಪ್ಪಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>