<p><strong>ಕಾರವಾರ:</strong> ಅಂಕೋಲಾ, ಸಿದ್ದಾಪುರ, ಹೊನ್ನಾವರಗಳಲ್ಲಿ ಕೈಗಾರಿಕೆ ಪ್ರದೇಶದಲ್ಲಿ ವಸಾಹತು ಸ್ಥಾಪನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.<br /> <br /> ಕೋಡಿಬಾಗ ಉಜ್ವಲ ಲಕ್ಷ್ಮಿ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ವಿಭಾಗೀಯ ಮಟ್ಟದ ಸಮ್ಮೇಳನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕುಮಟಾ, ಕಾರವಾರ ಹಾಗೂ ಶಿರಸಿ ಪ್ರದೇಶಗಳಲಿ ಸಣ್ಣ ಕೈಗಾರಿಕೆಗಳಿಗೆ ಉತ್ತಮ ಸೌಕರ್ಯ ಸೌಲಭ್ಯ ಒದಗಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.<br /> <br /> ಜಿಲ್ಲೆಯಲ್ಲಿ ಶೇ 80 ರಷ್ಟು ಅರಣ್ಯ ಪ್ರದೇಶವಿದೆ. ಇಲಿಯ್ಲ ಪ್ರಾಕೃತಿಕ ಭೌಗೋಳಿಕ ಪ್ರದೇಶಕ್ಕನುಗುಣವಾಗಿ ನೈಸರ್ಗಿಕ ಹಾಗೂ ಅರಣ್ಯ ಕಿರು ಉತ್ಪನ್ನ ಆಧಾರಿತ ಹಾಗೂ ಪ್ರವಾಸೋದ್ಯಮ ಸಂಬಂಧಿತ ಸಣ್ಣ ಕೈಗಾರಿಕೆಗಳಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.<br /> <br /> ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿರುವ ಯುವಕರಿಗೆ ಸರಕಾರದಿಂದ ಎಲ್ಲ ರೀತಿಯ ಸಹಕಾರ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುವುದು ಜಿಲ್ಲೆಯಲ್ಲಿ 9 ಸಾವಿರ ಸಣ್ಣ ಕೈಗಾರಿಕಾ ಘಟಕಗಳಿವೆ. ಇವುಗಳಿಂದಾಗಿ 48 ಸಾವಿರ ಜನರಿಗೆ ಉದ್ಯೋಗ ಲಭಿಸಿದೆ. ಜಿಲ್ಲೆಯಲ್ಲಿ ಮಾನವಸಂಪನ್ಮೂಲ, ಕಚ್ಚಾ ಸಾಮಗ್ರಿಗಳ ಕೊರತೆ ಇಲ್ಲ. ಪ್ರವಾಸೋದ್ಯಮದ ಮೂಲಕ ಆರಂಭಿಸಬಹುದಾದ ಕೈಗಾರಿಕೆಗಳ ಕುರಿತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಸಣ್ಣ ಕೈಗಾರಿಕೆಗಳ ಸಂಘ( ಕಾಸಿಯಾ) ಅಧ್ಯಕ್ಷ ಎಸ್.ಎಸ್. ಬಿರಾದಾರ, ನಗರಸಭೆ ಅಧ್ಯಕ್ಷ ಗಣಪತಿ ಉಳವೇಕರ, ಜಿಲಾಧ್ಲಿಕಾರಿ ಬಿ.ಎನ್. ಕೃಷ್ಣಯ್ಯ ಜಿ.ಪಂ. ಸಿಇಓ ವಿಜಯಮೋಹನರಾಜ್ , ಕಾಸಿಯಾ ಉಪಾಧ್ಯಕ್ಷ ಪ್ರಕಾಶ ರಾಯ್ಕರ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಂಕೋಲಾ, ಸಿದ್ದಾಪುರ, ಹೊನ್ನಾವರಗಳಲ್ಲಿ ಕೈಗಾರಿಕೆ ಪ್ರದೇಶದಲ್ಲಿ ವಸಾಹತು ಸ್ಥಾಪನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.<br /> <br /> ಕೋಡಿಬಾಗ ಉಜ್ವಲ ಲಕ್ಷ್ಮಿ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ವಿಭಾಗೀಯ ಮಟ್ಟದ ಸಮ್ಮೇಳನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕುಮಟಾ, ಕಾರವಾರ ಹಾಗೂ ಶಿರಸಿ ಪ್ರದೇಶಗಳಲಿ ಸಣ್ಣ ಕೈಗಾರಿಕೆಗಳಿಗೆ ಉತ್ತಮ ಸೌಕರ್ಯ ಸೌಲಭ್ಯ ಒದಗಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.<br /> <br /> ಜಿಲ್ಲೆಯಲ್ಲಿ ಶೇ 80 ರಷ್ಟು ಅರಣ್ಯ ಪ್ರದೇಶವಿದೆ. ಇಲಿಯ್ಲ ಪ್ರಾಕೃತಿಕ ಭೌಗೋಳಿಕ ಪ್ರದೇಶಕ್ಕನುಗುಣವಾಗಿ ನೈಸರ್ಗಿಕ ಹಾಗೂ ಅರಣ್ಯ ಕಿರು ಉತ್ಪನ್ನ ಆಧಾರಿತ ಹಾಗೂ ಪ್ರವಾಸೋದ್ಯಮ ಸಂಬಂಧಿತ ಸಣ್ಣ ಕೈಗಾರಿಕೆಗಳಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.<br /> <br /> ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿರುವ ಯುವಕರಿಗೆ ಸರಕಾರದಿಂದ ಎಲ್ಲ ರೀತಿಯ ಸಹಕಾರ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುವುದು ಜಿಲ್ಲೆಯಲ್ಲಿ 9 ಸಾವಿರ ಸಣ್ಣ ಕೈಗಾರಿಕಾ ಘಟಕಗಳಿವೆ. ಇವುಗಳಿಂದಾಗಿ 48 ಸಾವಿರ ಜನರಿಗೆ ಉದ್ಯೋಗ ಲಭಿಸಿದೆ. ಜಿಲ್ಲೆಯಲ್ಲಿ ಮಾನವಸಂಪನ್ಮೂಲ, ಕಚ್ಚಾ ಸಾಮಗ್ರಿಗಳ ಕೊರತೆ ಇಲ್ಲ. ಪ್ರವಾಸೋದ್ಯಮದ ಮೂಲಕ ಆರಂಭಿಸಬಹುದಾದ ಕೈಗಾರಿಕೆಗಳ ಕುರಿತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಸಣ್ಣ ಕೈಗಾರಿಕೆಗಳ ಸಂಘ( ಕಾಸಿಯಾ) ಅಧ್ಯಕ್ಷ ಎಸ್.ಎಸ್. ಬಿರಾದಾರ, ನಗರಸಭೆ ಅಧ್ಯಕ್ಷ ಗಣಪತಿ ಉಳವೇಕರ, ಜಿಲಾಧ್ಲಿಕಾರಿ ಬಿ.ಎನ್. ಕೃಷ್ಣಯ್ಯ ಜಿ.ಪಂ. ಸಿಇಓ ವಿಜಯಮೋಹನರಾಜ್ , ಕಾಸಿಯಾ ಉಪಾಧ್ಯಕ್ಷ ಪ್ರಕಾಶ ರಾಯ್ಕರ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>