<p><strong>ನವದೆಹಲಿ/ಮುಂಬೈ (ಪಿಟಿಐ):</strong> ತಂಡದೊಂದಿಗಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಒಪ್ಪಂದವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರದ್ದುಮಾಡಿರುವ ಕ್ರಮವನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದ ಕೊಚ್ಚಿ ಟಸ್ಕರ್ಸ್ ಕೇರಳ ತಂಡದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.<br /> <br /> ಬ್ಯಾಂಕ್ ಖಾತರಿ ಮೊತ್ತ ನೀಡಲು ತಂಡ ವಿಫಲವಾದ ಕಾರಣ ಬಿಸಿಸಿಐ ಕೊಚ್ಚಿ ಜೊತೆಗಿನ ಒಪ್ಪಂದವನ್ನು ಸೋಮವಾರ ನಡೆದ ವಾರ್ಷಿಕ ಸಭೆಯಲ್ಲಿ ತಿರಸ್ಕರಿಸಿತ್ತು.<br /> <br /> ಈ ಕುರಿತು ಕೊಚ್ಚಿ ಆಡಳಿತ ಮಂಡಳಿ ಬುಧವಾರ ಹೈಕೋರ್ಟ್ ಮೊರೆ ಹೋಗಿತ್ತು. ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಈ ಅರ್ಜಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ.<br /> <br /> ಮಂಡಳಿಯ ಜೊತೆಗಿನ ಒಪ್ಪಂದದ ಪ್ರಕಾರ ಫ್ರಾಂಚೈಸಿ ಪ್ರತಿ ವರ್ಷ 156 ಕೋಟಿ ರೂ. ಮೊತ್ತ ಬ್ಯಾಂಕ್ ಖಾತರಿ ರೂಪದಲ್ಲಿ ಪಾವತಿಸಬೇಕಿತ್ತು. ಆದರೆ ನಿಗದಿತ ದಿನಾಂಕದೊಳಗೆ ಇದನ್ನು ಪಾವತಿಸಲು ವಿಫಲವಾಗಿದೆ. <br /> <br /> ಕೊಚ್ಚಿ ತಂಡದೊಂದಿಗಿನ ಒಪ್ಪಂದ ರದ್ದು ಮಾಡಿರುವ ಮಂಡಳಿಯ ನಿರ್ಧಾರ ಕಾನೂನು ಬಾಹಿರ. ಈ ಕುರಿತು ಕಾನೂನು ಸಮರ ನಡೆಸುವುದಾಗಿ ತಂಡದ ನಿರ್ದೇಶಕ ಮುಖೇಶ್ ಪಾಟೀಲ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಮುಂಬೈ (ಪಿಟಿಐ):</strong> ತಂಡದೊಂದಿಗಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಒಪ್ಪಂದವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರದ್ದುಮಾಡಿರುವ ಕ್ರಮವನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದ ಕೊಚ್ಚಿ ಟಸ್ಕರ್ಸ್ ಕೇರಳ ತಂಡದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.<br /> <br /> ಬ್ಯಾಂಕ್ ಖಾತರಿ ಮೊತ್ತ ನೀಡಲು ತಂಡ ವಿಫಲವಾದ ಕಾರಣ ಬಿಸಿಸಿಐ ಕೊಚ್ಚಿ ಜೊತೆಗಿನ ಒಪ್ಪಂದವನ್ನು ಸೋಮವಾರ ನಡೆದ ವಾರ್ಷಿಕ ಸಭೆಯಲ್ಲಿ ತಿರಸ್ಕರಿಸಿತ್ತು.<br /> <br /> ಈ ಕುರಿತು ಕೊಚ್ಚಿ ಆಡಳಿತ ಮಂಡಳಿ ಬುಧವಾರ ಹೈಕೋರ್ಟ್ ಮೊರೆ ಹೋಗಿತ್ತು. ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಈ ಅರ್ಜಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ.<br /> <br /> ಮಂಡಳಿಯ ಜೊತೆಗಿನ ಒಪ್ಪಂದದ ಪ್ರಕಾರ ಫ್ರಾಂಚೈಸಿ ಪ್ರತಿ ವರ್ಷ 156 ಕೋಟಿ ರೂ. ಮೊತ್ತ ಬ್ಯಾಂಕ್ ಖಾತರಿ ರೂಪದಲ್ಲಿ ಪಾವತಿಸಬೇಕಿತ್ತು. ಆದರೆ ನಿಗದಿತ ದಿನಾಂಕದೊಳಗೆ ಇದನ್ನು ಪಾವತಿಸಲು ವಿಫಲವಾಗಿದೆ. <br /> <br /> ಕೊಚ್ಚಿ ತಂಡದೊಂದಿಗಿನ ಒಪ್ಪಂದ ರದ್ದು ಮಾಡಿರುವ ಮಂಡಳಿಯ ನಿರ್ಧಾರ ಕಾನೂನು ಬಾಹಿರ. ಈ ಕುರಿತು ಕಾನೂನು ಸಮರ ನಡೆಸುವುದಾಗಿ ತಂಡದ ನಿರ್ದೇಶಕ ಮುಖೇಶ್ ಪಾಟೀಲ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>