<p><strong>ತುರುವೇಕೆರೆ: </strong>ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡು ಎರಡು ವರ್ಷ ಕಳೆದರೂ; ಸಮರ್ಪಕ ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ.<br /> <br /> ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಾ, ವಾಣಿಜ್ಯ ವಿಭಾಗಗಳ ಜತೆ ಕಳೆದ ವರ್ಷದಿಂದ ವಿಜ್ಞಾನ ವಿಭಾಗವೂ ಆರಂಭವಾಗಿದೆ. ಸುಮಾರು 800 ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಬೋಧನೆಗೆ ಲಭ್ಯವಿರುವ ಕೊಠಡಿಗಳು ಕೇವಲ 6. ಮೂರೂ ವಿಭಾಗಗಳು, ಪ್ರಯೋಗಶಾಲೆಗಳನ್ನು ಸುಸೂತ್ರವಾಗಿ ನಡೆಸಲು ಕನಿಷ್ಠ 18 ಕೊಠಡಿಗಳ ಅಗತ್ಯವಿದೆ.<br /> <br /> ಕಳೆದ ವರ್ಷ ವಿದ್ಯಾರ್ಥಿಗಳು ಕೊಠಡಿ ನಿರ್ಮಿಸಿಕೊಡುವಂತೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ್ದ ಅಂದಿನ ಉನ್ನತ ಶಿಕ್ಷಣ ಇಲಾಖೆ ಆಯುಕ್ತ ತುಷಾರ್ ಗಿರಿನಾಥ್ ಕೂಡಲೇ ಐದು ಕೊಠಡಿ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಆದರೆ ಆ ಭರವಸೆ ಭರವಸೆಯಾಗಿಯೇ ಉಳಿದಿದೆ.<br /> <br /> ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಿಸುವುದಾಗಿ ಆಶ್ವಾಸನೆ ನೀಡಿದ್ದ ಜನಪ್ರತಿನಿಧಿಗಳೂ ಇತ್ತ ಗಮನ ಹರಿಸದೆ ಮೊದಲ ಅಂತಸ್ತಿನ ಕಟ್ಟಡ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ. <br /> <br /> ಈ ಮಧ್ಯೆ ತಾಲ್ಲೂಕು ಪಂಚಾಯಿತಿ ಕೋಟಿ ಯೋಜನೆಯಡಿ ಐದು ಕೊಠಡಿ ನಿರ್ಮಿಸಿಕೊಡುವ ಭರವಸೆ ನೀಡಿ ಕಳೆದ ವರ್ಷದ ಆರಂಭದಲ್ಲಿ ಕಾಮಗಾರಿ ಪ್ರಾರಂಭಿಸಿತು. ಈ ಪೈಕಿ ಎರಡು ಕೊಠಡಿಗಳು ಅರ್ಧಂಬರ್ಧ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಕೂಡಿದೆ.<br /> <br /> ಕೊಠಡಿ ಕೊರತೆ ಜತೆ ಉಪನ್ಯಾಸಕರ ಕೊರತೆ ಕಾರಣವೂ ಸೇರಿ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆಯಲು ಹಿಂದೆ ಮುಂದೆ ನೋಡುವಂತಾಗಿದೆ. <br /> <br /> ಕಾಯಂ ಶಿಕ್ಷಕರ ನೇಮಕಾತಿ ಮಾಡಿ ಎಂದು ಹಲವು ಬಾರಿ ಮನವಿ ಮಾಡಿದ್ದೇವೆ. ಧರಣಿ ನಡೆಸಿದ್ದೇವೆ. ಆದರೆ ಏನೂ ಪ್ರಯೋಜನವಾಗಿಲ್ಲ ಎಂದು ಎಬಿವಿಪಿ ಮುಖಂಡ ಬಸವೇಶ್ ಬೇಸರ ವ್ಯಕ್ತಪಡಿಸುತ್ತಾರೆ.<br /> <br /> ಬಿಎಸ್ಸಿ ವಿಭಾಗದಲ್ಲಿ ಕಳೆದ ವರ್ಷ ಕೇವಲ ಐದು ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದಾರೆ. ಕಾಯಂ ಶಿಕ್ಷಕರ ನೇಮಕಾತಿ, ಪ್ರಯೋಗಾಲಯ ಉಪಕರಣಗಳ ಸಮರ್ಪಕ ಬಳಕೆ, ವಿದ್ಯಾರ್ಥಿಗಳ ಮನವರಿಕೆ ಮೂಲಕ ವಿಜ್ಞಾನ ವಿಭಾಗ ಮುಚ್ಚಿ ಹೋಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.<br /> <br /> `ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಲವು ಬಾರಿ ಹೇಳಿದ್ದಾರೆ. ಆದರೆ ಶಿಕ್ಷಣ ಸಂಸ್ಥೆಗಳ ಕಾಯಕಲ್ಪಕ್ಕೆ ಮಾತ್ರ ಗಮನ ಹರಿಸುತ್ತಿಲ್ಲ~ ಎಂದು ಪೋಷಕರು ವಿಷಾದಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡು ಎರಡು ವರ್ಷ ಕಳೆದರೂ; ಸಮರ್ಪಕ ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ.<br /> <br /> ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಾ, ವಾಣಿಜ್ಯ ವಿಭಾಗಗಳ ಜತೆ ಕಳೆದ ವರ್ಷದಿಂದ ವಿಜ್ಞಾನ ವಿಭಾಗವೂ ಆರಂಭವಾಗಿದೆ. ಸುಮಾರು 800 ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಬೋಧನೆಗೆ ಲಭ್ಯವಿರುವ ಕೊಠಡಿಗಳು ಕೇವಲ 6. ಮೂರೂ ವಿಭಾಗಗಳು, ಪ್ರಯೋಗಶಾಲೆಗಳನ್ನು ಸುಸೂತ್ರವಾಗಿ ನಡೆಸಲು ಕನಿಷ್ಠ 18 ಕೊಠಡಿಗಳ ಅಗತ್ಯವಿದೆ.<br /> <br /> ಕಳೆದ ವರ್ಷ ವಿದ್ಯಾರ್ಥಿಗಳು ಕೊಠಡಿ ನಿರ್ಮಿಸಿಕೊಡುವಂತೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ್ದ ಅಂದಿನ ಉನ್ನತ ಶಿಕ್ಷಣ ಇಲಾಖೆ ಆಯುಕ್ತ ತುಷಾರ್ ಗಿರಿನಾಥ್ ಕೂಡಲೇ ಐದು ಕೊಠಡಿ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಆದರೆ ಆ ಭರವಸೆ ಭರವಸೆಯಾಗಿಯೇ ಉಳಿದಿದೆ.<br /> <br /> ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಿಸುವುದಾಗಿ ಆಶ್ವಾಸನೆ ನೀಡಿದ್ದ ಜನಪ್ರತಿನಿಧಿಗಳೂ ಇತ್ತ ಗಮನ ಹರಿಸದೆ ಮೊದಲ ಅಂತಸ್ತಿನ ಕಟ್ಟಡ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ. <br /> <br /> ಈ ಮಧ್ಯೆ ತಾಲ್ಲೂಕು ಪಂಚಾಯಿತಿ ಕೋಟಿ ಯೋಜನೆಯಡಿ ಐದು ಕೊಠಡಿ ನಿರ್ಮಿಸಿಕೊಡುವ ಭರವಸೆ ನೀಡಿ ಕಳೆದ ವರ್ಷದ ಆರಂಭದಲ್ಲಿ ಕಾಮಗಾರಿ ಪ್ರಾರಂಭಿಸಿತು. ಈ ಪೈಕಿ ಎರಡು ಕೊಠಡಿಗಳು ಅರ್ಧಂಬರ್ಧ ನಿರ್ಮಾಣವಾಗಿದ್ದು, ಕಳಪೆ ಕಾಮಗಾರಿಯಿಂದ ಕೂಡಿದೆ.<br /> <br /> ಕೊಠಡಿ ಕೊರತೆ ಜತೆ ಉಪನ್ಯಾಸಕರ ಕೊರತೆ ಕಾರಣವೂ ಸೇರಿ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆಯಲು ಹಿಂದೆ ಮುಂದೆ ನೋಡುವಂತಾಗಿದೆ. <br /> <br /> ಕಾಯಂ ಶಿಕ್ಷಕರ ನೇಮಕಾತಿ ಮಾಡಿ ಎಂದು ಹಲವು ಬಾರಿ ಮನವಿ ಮಾಡಿದ್ದೇವೆ. ಧರಣಿ ನಡೆಸಿದ್ದೇವೆ. ಆದರೆ ಏನೂ ಪ್ರಯೋಜನವಾಗಿಲ್ಲ ಎಂದು ಎಬಿವಿಪಿ ಮುಖಂಡ ಬಸವೇಶ್ ಬೇಸರ ವ್ಯಕ್ತಪಡಿಸುತ್ತಾರೆ.<br /> <br /> ಬಿಎಸ್ಸಿ ವಿಭಾಗದಲ್ಲಿ ಕಳೆದ ವರ್ಷ ಕೇವಲ ಐದು ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದಾರೆ. ಕಾಯಂ ಶಿಕ್ಷಕರ ನೇಮಕಾತಿ, ಪ್ರಯೋಗಾಲಯ ಉಪಕರಣಗಳ ಸಮರ್ಪಕ ಬಳಕೆ, ವಿದ್ಯಾರ್ಥಿಗಳ ಮನವರಿಕೆ ಮೂಲಕ ವಿಜ್ಞಾನ ವಿಭಾಗ ಮುಚ್ಚಿ ಹೋಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.<br /> <br /> `ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಲವು ಬಾರಿ ಹೇಳಿದ್ದಾರೆ. ಆದರೆ ಶಿಕ್ಷಣ ಸಂಸ್ಥೆಗಳ ಕಾಯಕಲ್ಪಕ್ಕೆ ಮಾತ್ರ ಗಮನ ಹರಿಸುತ್ತಿಲ್ಲ~ ಎಂದು ಪೋಷಕರು ವಿಷಾದಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>