<p>ಗೋಣಿಕೊಪ್ಪಲು: ಕನ್ನಡ ನೆಲ, ಜಲ ರಕ್ಷಣೆಯೊಂದಿಗೆ ಕೊಡಗು ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡಗು ಕನ್ನಡಿಗರ ಒಕ್ಕೂಟವು ಕನ್ನಡ ಭಾಷೆ ಮಾತನಾಡುವ ಕೊಡಗಿನ ಪ್ರಮುಖ ಜನಾಂಗಗಳನ್ನು ಒಕ್ಕೂಟದಿಂದ ದೂರವಿಟ್ಟಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.<br /> <br /> ಈ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ ಈ ರೀತಿಯ ಸಂಘಟನೆ ಅಸ್ತಿತ್ವಕ್ಕೆ ತರುವ ಮೂಲಕ ಇಲ್ಲಿನವರಲ್ಲಿ ಒಡಕು ಮೂಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಕ್ಕೂಟದ ಘೋಷಿತ ಅಧ್ಯಕ್ಷರಾದ ಎಸ್.ಪಿ ಮಹಾದೇವಪ್ಪನವರು ಈ ಹಿಂದೆ ಹಲವಾರು ವೇಷಗಳನ್ನು ತೊಟ್ಟಿದ್ದು, ಈಗ `ಕೊಡಗು ಕನ್ನಡಿಗರ ಒಕ್ಕೂಟ' ಎಂಬ ಹೆಸರಿನಲ್ಲಿ ಜಿಲ್ಲೆಯ ಸಾಮರಸ್ಯವನ್ನು ಕೆಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದರು. </p>.<p>ತಾಲ್ಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವದಲ್ಲಿದ್ದು, ಅದು ಕನ್ನಡ ಭಾಷೆಗೆ ಪೂರಕವಾದ ಕಾರ್ಯಗಳನ್ನು ನಡೆಸುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಕುಟ್ಟದಲ್ಲಿ ನಡೆಸಲಾದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸ್ಥಳೀಯರು, ಪರಿಷತ್ ಸದಸ್ಯರು ಹಾಗೂ ದಾನಿಗಳ ಸಹಾಯದಿಂದ ಯಶಸ್ವಿಗೊಂಡಿದೆ. ಈ ಸಂದರ್ಭದಲ್ಲಿ ಸಮ್ಮೇಳನದಲ್ಲಿ ಕಾಣಿಸಿಕೊಳ್ಳದೇ ಕನ್ನಡತನವನ್ನು ಮರೆತಿರುವುದು ತಾಲ್ಲೂಕಿನ ಜನತೆ ಗಮನಿಸಿದ್ದಾರೆ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಕನ್ನಡ ನೆಲ, ಜಲ ರಕ್ಷಣೆಯೊಂದಿಗೆ ಕೊಡಗು ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡಗು ಕನ್ನಡಿಗರ ಒಕ್ಕೂಟವು ಕನ್ನಡ ಭಾಷೆ ಮಾತನಾಡುವ ಕೊಡಗಿನ ಪ್ರಮುಖ ಜನಾಂಗಗಳನ್ನು ಒಕ್ಕೂಟದಿಂದ ದೂರವಿಟ್ಟಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.<br /> <br /> ಈ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ ಈ ರೀತಿಯ ಸಂಘಟನೆ ಅಸ್ತಿತ್ವಕ್ಕೆ ತರುವ ಮೂಲಕ ಇಲ್ಲಿನವರಲ್ಲಿ ಒಡಕು ಮೂಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಕ್ಕೂಟದ ಘೋಷಿತ ಅಧ್ಯಕ್ಷರಾದ ಎಸ್.ಪಿ ಮಹಾದೇವಪ್ಪನವರು ಈ ಹಿಂದೆ ಹಲವಾರು ವೇಷಗಳನ್ನು ತೊಟ್ಟಿದ್ದು, ಈಗ `ಕೊಡಗು ಕನ್ನಡಿಗರ ಒಕ್ಕೂಟ' ಎಂಬ ಹೆಸರಿನಲ್ಲಿ ಜಿಲ್ಲೆಯ ಸಾಮರಸ್ಯವನ್ನು ಕೆಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದರು. </p>.<p>ತಾಲ್ಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವದಲ್ಲಿದ್ದು, ಅದು ಕನ್ನಡ ಭಾಷೆಗೆ ಪೂರಕವಾದ ಕಾರ್ಯಗಳನ್ನು ನಡೆಸುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಕುಟ್ಟದಲ್ಲಿ ನಡೆಸಲಾದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸ್ಥಳೀಯರು, ಪರಿಷತ್ ಸದಸ್ಯರು ಹಾಗೂ ದಾನಿಗಳ ಸಹಾಯದಿಂದ ಯಶಸ್ವಿಗೊಂಡಿದೆ. ಈ ಸಂದರ್ಭದಲ್ಲಿ ಸಮ್ಮೇಳನದಲ್ಲಿ ಕಾಣಿಸಿಕೊಳ್ಳದೇ ಕನ್ನಡತನವನ್ನು ಮರೆತಿರುವುದು ತಾಲ್ಲೂಕಿನ ಜನತೆ ಗಮನಿಸಿದ್ದಾರೆ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>