<p>ಕೆಜಿಎಫ್: ರಾಬರ್ಟ್ಸನ್ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನಕ್ಕೆ ಖಾಸಗಿ ವ್ಯಕ್ತಿಗಳು ಕಲ್ಲು ಚಪ್ಪಡಿ ನೆಟ್ಟು ಒತ್ತುವರಿ ಮಾಡಿಕೊಂಡಿದ್ದನ್ನು ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು.<br /> <br /> ಕಾರ್ಯಾಚರಣೆಯ ಸುಳಿವನ್ನು ಯಾರಿಗೂ ಕೊಡದ ನಗರಸಭೆ ಬೆಳಿಗ್ಗೆ ತನ್ನ ಎಲ್ಲಾ ಸಿಬ್ಬಂದಿ ಹಾಗೂ ಜೆಸಿಬಿ ಯಂತ್ರದೊಂದಿಗೆ ತೆರಳಿ ಏಕಾಏಕಿ ಕಾರ್ಯಾಚರಣೆಯಲ್ಲಿ ತೊಡಗಿತು. <br /> <br /> ಈ ಮುನ್ನ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಮೀಷನರ್ ಪೆದ್ದಪ್ಪಯ್ಯ ಅವರು ನಗರಸಭೆ ಅಧ್ಯಕ್ಷ ಪಿ.ದಯಾನಂದ್, ಡಿವೈಎಸ್ಪಿ ಕೆ.ಶೇಷಾದ್ರಿ ಜತೆಗೆ ಮಾತುಕತೆ ನಡೆಸಿ ಕಾರ್ಯಾಚರಣೆಗೆ ಅಗತ್ಯ ಏರ್ಪಾಟುಗಳನ್ನು ಮಾಡಿದರು.<br /> <br /> ಪೊಲೀಸ್ ಬಂದೋಬಸ್ತ್ನಲ್ಲಿ ನಡೆದ ಕಾರ್ಯಾಚರಣೆಗೆ ಯಾವುದೇ ಪ್ರತಿರೋಧ ವ್ಯಕ್ತವಾಗಲಿಲ್ಲ. ಕಾರ್ಯಾಚರಣೆ ನೋಡಲು ಸಾವಿರಾರು ಜನ ಸ್ಥಳಕ್ಕೆ ಆಗಮಿಸಿದ್ದರು.<br /> <br /> ನಗರಸಭೆಯ ಸ್ವತ್ತನ್ನು ಕಂದಾಯ ಅಧಿಕಾರಿಗಳ ತಪ್ಪಿನಿಂದಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ. ನಗರಸಭೆ ಆಸ್ತಿಯನ್ನು ಕಬಳಿಸಲು ಭೂ ಮಾಫಿಯಾಗಳಿಗೆ ಎಂದಿಗೂ ಅವಕಾಶ ನೀಡುವುದಿಲ್ಲ. ಒತ್ತುವರಿ ಮಾಡಿದ ವ್ಯಕ್ತಿಯ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು.<br /> <br /> ಶಾಲೆ ಪ್ರಾರಂಭವಾದ ಏಳು ದಶಕಗಳಿಂದ ಶಾಲೆಯ ವಶದಲ್ಲೇ ಇದ್ದ ಮೈದಾನಕ್ಕೆ ಇತ್ತೀಚೆಗೆ ಖಾಸಗಿ ವ್ಯಕ್ತಿಗಳು ರಾತ್ರೋರಾತ್ರಿ ಕಲ್ಲುಚಪ್ಪಡಿ ಹಾಕಿ ಒತ್ತುವರಿ ಮಾಡಿಕೊಂಡಿದ್ದರು.<br /> <br /> ಒತ್ತುವರಿ ತೆರವುಗೊಳಿಸಬೇಕೆಂದು ಒತ್ತಾಯಿಸಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ರಾಬರ್ಟ್ಸನ್ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನಕ್ಕೆ ಖಾಸಗಿ ವ್ಯಕ್ತಿಗಳು ಕಲ್ಲು ಚಪ್ಪಡಿ ನೆಟ್ಟು ಒತ್ತುವರಿ ಮಾಡಿಕೊಂಡಿದ್ದನ್ನು ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು.<br /> <br /> ಕಾರ್ಯಾಚರಣೆಯ ಸುಳಿವನ್ನು ಯಾರಿಗೂ ಕೊಡದ ನಗರಸಭೆ ಬೆಳಿಗ್ಗೆ ತನ್ನ ಎಲ್ಲಾ ಸಿಬ್ಬಂದಿ ಹಾಗೂ ಜೆಸಿಬಿ ಯಂತ್ರದೊಂದಿಗೆ ತೆರಳಿ ಏಕಾಏಕಿ ಕಾರ್ಯಾಚರಣೆಯಲ್ಲಿ ತೊಡಗಿತು. <br /> <br /> ಈ ಮುನ್ನ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಮೀಷನರ್ ಪೆದ್ದಪ್ಪಯ್ಯ ಅವರು ನಗರಸಭೆ ಅಧ್ಯಕ್ಷ ಪಿ.ದಯಾನಂದ್, ಡಿವೈಎಸ್ಪಿ ಕೆ.ಶೇಷಾದ್ರಿ ಜತೆಗೆ ಮಾತುಕತೆ ನಡೆಸಿ ಕಾರ್ಯಾಚರಣೆಗೆ ಅಗತ್ಯ ಏರ್ಪಾಟುಗಳನ್ನು ಮಾಡಿದರು.<br /> <br /> ಪೊಲೀಸ್ ಬಂದೋಬಸ್ತ್ನಲ್ಲಿ ನಡೆದ ಕಾರ್ಯಾಚರಣೆಗೆ ಯಾವುದೇ ಪ್ರತಿರೋಧ ವ್ಯಕ್ತವಾಗಲಿಲ್ಲ. ಕಾರ್ಯಾಚರಣೆ ನೋಡಲು ಸಾವಿರಾರು ಜನ ಸ್ಥಳಕ್ಕೆ ಆಗಮಿಸಿದ್ದರು.<br /> <br /> ನಗರಸಭೆಯ ಸ್ವತ್ತನ್ನು ಕಂದಾಯ ಅಧಿಕಾರಿಗಳ ತಪ್ಪಿನಿಂದಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ. ನಗರಸಭೆ ಆಸ್ತಿಯನ್ನು ಕಬಳಿಸಲು ಭೂ ಮಾಫಿಯಾಗಳಿಗೆ ಎಂದಿಗೂ ಅವಕಾಶ ನೀಡುವುದಿಲ್ಲ. ಒತ್ತುವರಿ ಮಾಡಿದ ವ್ಯಕ್ತಿಯ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು.<br /> <br /> ಶಾಲೆ ಪ್ರಾರಂಭವಾದ ಏಳು ದಶಕಗಳಿಂದ ಶಾಲೆಯ ವಶದಲ್ಲೇ ಇದ್ದ ಮೈದಾನಕ್ಕೆ ಇತ್ತೀಚೆಗೆ ಖಾಸಗಿ ವ್ಯಕ್ತಿಗಳು ರಾತ್ರೋರಾತ್ರಿ ಕಲ್ಲುಚಪ್ಪಡಿ ಹಾಕಿ ಒತ್ತುವರಿ ಮಾಡಿಕೊಂಡಿದ್ದರು.<br /> <br /> ಒತ್ತುವರಿ ತೆರವುಗೊಳಿಸಬೇಕೆಂದು ಒತ್ತಾಯಿಸಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>