<p><strong>ಬೆಂಗಳೂರು: </strong>ಪತ್ನಿ ಕೊಲೆ ಯತ್ನ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಬುಧವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆದರೆ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯಿತು.<br /> <br /> ಪರಪ್ಪನ ಅಗ್ರಹಾರ ಕಾರಗೃಹದಲ್ಲಿ ಸದ್ಯಕ್ಕೆ ಅವರನ್ನು ಕಟ್ಟಾ ಜಗದೀಶ್ ಅವರ ಕೊಠಡಿಯಲ್ಲೆ ಇರಿಸಲು ವ್ಯವಸ್ಥೆ ಮಾಡಲಾಗಿದೆ.<br /> <br /> ಪತ್ನಿ ಕೊಲೆ ಯತ್ನ ಆರೋಪದ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ ದಿನದಿಂದಲೇ ಅನಾರೋಗ್ಯದ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಶಶಿಧರ್ ಬುಗ್ಗಿ ತಿಳಿಸಿದ್ದರು. <br /> <br /> ಕೊಲೆ ಯತ್ನ ಗಂಭೀರವಾದ ಪ್ರಕರಣ ಎಂದು ಅಭಿಪ್ರಾಯಪಟ್ಟ ಸೆಷನ್ಸ್ ನ್ಯಾಯಾಲಯ ಮಂಗಳವಾರ ನಟ ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.<br /> </p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪತ್ನಿ ಕೊಲೆ ಯತ್ನ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಬುಧವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆದರೆ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯಿತು.<br /> <br /> ಪರಪ್ಪನ ಅಗ್ರಹಾರ ಕಾರಗೃಹದಲ್ಲಿ ಸದ್ಯಕ್ಕೆ ಅವರನ್ನು ಕಟ್ಟಾ ಜಗದೀಶ್ ಅವರ ಕೊಠಡಿಯಲ್ಲೆ ಇರಿಸಲು ವ್ಯವಸ್ಥೆ ಮಾಡಲಾಗಿದೆ.<br /> <br /> ಪತ್ನಿ ಕೊಲೆ ಯತ್ನ ಆರೋಪದ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ ದಿನದಿಂದಲೇ ಅನಾರೋಗ್ಯದ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಶಶಿಧರ್ ಬುಗ್ಗಿ ತಿಳಿಸಿದ್ದರು. <br /> <br /> ಕೊಲೆ ಯತ್ನ ಗಂಭೀರವಾದ ಪ್ರಕರಣ ಎಂದು ಅಭಿಪ್ರಾಯಪಟ್ಟ ಸೆಷನ್ಸ್ ನ್ಯಾಯಾಲಯ ಮಂಗಳವಾರ ನಟ ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.<br /> </p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>