<p><strong>ಚಾಮರಾಜನಗರ:</strong> ಕೊನೆ ಗಳಿಗೆಯಲ್ಲಿ ಪ್ರವಾಸ ರದ್ದುಪಡಿಸಿದ ಪರಿಣಾಮ ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷೆ ಚುಕ್ಕಿ ನಂಜುಂಡಸ್ವಾಮಿ ಮಲೇಷ್ಯಾ ವಿಮಾನ ದುರಂತದಿಂದ ಪಾರಾದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.<br /> <br /> ಮಂಗೋಲಿಯಾದ ಉಬಾನ್ಬತ್ತಾರ್ನಲ್ಲಿ ಮಾರ್ಚ್ 10ರಿಂದ 14ರವರೆಗೆ ಏಷ್ಯಾ–ಫೆಸಿಫಿಕ್ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನವನ್ನು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ ಸಂಘಟಿಸಿದೆ. ಕೃಷಿ ಸಮಸ್ಯೆ ಕುರಿತು ವಿಚಾರ ಮಂಡಿಸಲು ರೈತ ಸಂಘದ ಪರವಾಗಿ ಚುಕ್ಕಿ ಅವರು ಈ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು.<br /> <br /> ನಾಪತ್ತೆಯಾಗಿರುವ ಮಲೇಷ್ಯಾ ವಿಮಾನದಲ್ಲಿಯೇ ತೆರಳಲು ಅವರು ಸಿದ್ಧತೆ ನಡೆಸಿದ್ದರು. ಆದರೆ, ಅಮೃತಭೂಮಿಯಲ್ಲಿ ಹಮ್ಮಿಕೊಂಡಿದ್ದ ರೈತ ಸಂಘದ ಕಾರ್ಯ ಚಟುವಟಿಕೆಗಳ ಸಭೆಯ ಹಿನ್ನೆಲೆಯಲ್ಲಿ ಮಾರ್ಚ್ 6ರಂದೇ ಅವರು ಪ್ರವಾಸ ರದ್ದುಪಡಿಸಿದ್ದರು. ಹೀಗಾಗಿ, ಅವರು ದುರಂತದಿಂದ ಪಾರಾಗಿದ್ದಾರೆ.<br /> <br /> ‘ಅಮೃತಭೂಮಿಯಲ್ಲಿ ರೈತ ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲು ವರಿಷ್ಠರೊಂದಿಗೆ ಸಭೆ ನಿಗದಿಯಾಗಿದ್ದರಿಂದ ಅಂತಿಮ ಕ್ಷಣದಲ್ಲಿ ಪ್ರವಾಸ ರದ್ದುಪಡಿಸಿದೆ. ಹೀಗಾಗಿ, ನಾನು ಬದುಕುಳಿದೆ’ ಎಂದು ಚುಕ್ಕಿ ನಂಜುಂಡಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೊನೆ ಗಳಿಗೆಯಲ್ಲಿ ಪ್ರವಾಸ ರದ್ದುಪಡಿಸಿದ ಪರಿಣಾಮ ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷೆ ಚುಕ್ಕಿ ನಂಜುಂಡಸ್ವಾಮಿ ಮಲೇಷ್ಯಾ ವಿಮಾನ ದುರಂತದಿಂದ ಪಾರಾದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.<br /> <br /> ಮಂಗೋಲಿಯಾದ ಉಬಾನ್ಬತ್ತಾರ್ನಲ್ಲಿ ಮಾರ್ಚ್ 10ರಿಂದ 14ರವರೆಗೆ ಏಷ್ಯಾ–ಫೆಸಿಫಿಕ್ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನವನ್ನು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ ಸಂಘಟಿಸಿದೆ. ಕೃಷಿ ಸಮಸ್ಯೆ ಕುರಿತು ವಿಚಾರ ಮಂಡಿಸಲು ರೈತ ಸಂಘದ ಪರವಾಗಿ ಚುಕ್ಕಿ ಅವರು ಈ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು.<br /> <br /> ನಾಪತ್ತೆಯಾಗಿರುವ ಮಲೇಷ್ಯಾ ವಿಮಾನದಲ್ಲಿಯೇ ತೆರಳಲು ಅವರು ಸಿದ್ಧತೆ ನಡೆಸಿದ್ದರು. ಆದರೆ, ಅಮೃತಭೂಮಿಯಲ್ಲಿ ಹಮ್ಮಿಕೊಂಡಿದ್ದ ರೈತ ಸಂಘದ ಕಾರ್ಯ ಚಟುವಟಿಕೆಗಳ ಸಭೆಯ ಹಿನ್ನೆಲೆಯಲ್ಲಿ ಮಾರ್ಚ್ 6ರಂದೇ ಅವರು ಪ್ರವಾಸ ರದ್ದುಪಡಿಸಿದ್ದರು. ಹೀಗಾಗಿ, ಅವರು ದುರಂತದಿಂದ ಪಾರಾಗಿದ್ದಾರೆ.<br /> <br /> ‘ಅಮೃತಭೂಮಿಯಲ್ಲಿ ರೈತ ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಲು ವರಿಷ್ಠರೊಂದಿಗೆ ಸಭೆ ನಿಗದಿಯಾಗಿದ್ದರಿಂದ ಅಂತಿಮ ಕ್ಷಣದಲ್ಲಿ ಪ್ರವಾಸ ರದ್ದುಪಡಿಸಿದೆ. ಹೀಗಾಗಿ, ನಾನು ಬದುಕುಳಿದೆ’ ಎಂದು ಚುಕ್ಕಿ ನಂಜುಂಡಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>