<p><strong>ಕೊಪ್ಪಳ</strong>: ನಗರದಲ್ಲಿ ಸೆ. 23ರಂದು ಅಲ್ಪಸಂಖ್ಯಾತರ ಸಮಾವೇಶ ಆಯೋಜನೆ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ವೀಕ್ಷಕರು ಶನಿವಾರ ವರದಿ ಸಲ್ಲಿಸಿದ್ದಾರೆ.<br /> <br /> ಸಮಾವೇಶ ಆಯೋಜಿಸಿದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ನಿಗಾ ತಂಡ ಮಾಡಿರುವ ವಿಡಿಯೋ ಚಿತ್ರೀಕರಣ ಹಾಗೂ ಪತ್ರಿಕಾ ವರದಿಗಳು ಸೇರಿದಂತೆ ಪೂರಕ ದಾಖಲೆಗಳ ಸಮೇತ ವರದಿ ಸಲ್ಲಿಸಲಾಗಿದೆ.<br /> <br /> ಚುನಾವಣಾ ವೀಕ್ಷಕರು ಆಯೋಗಕ್ಕೆ ಈ ಸಂಬಂಧ ವರದಿ ಸಲ್ಲಿಸಿರುವುದನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಖಚಿತಪಡಿಸಿದ್ದಾರೆ.<br /> <br /> ಇದಲ್ಲದೆ ಸೆ. 23ರಂದು ನಗರದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಮಾವೇಶ ಕುರಿತಂತೆ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ.<br /> <br /> ಮೊದಲು ಪ್ರಚುರಪಡಿಸಿದಂತೆ, ಸದರಿ ಸ್ಥಳದಲ್ಲಿ ಭೋವಿ ಸಮಾಜದ ವತಿಯಿಂದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.<br /> <br /> ಆದರೆ, ನಗರಕ್ಕೆ ಭೇಟಿ ನೀಡಿದ್ದ ರಾಜ್ಯ ಚುನಾವಣಾ ಆಯೋಗದ ಮುಖ್ಯಾಧಿಕಾರಿ ಸಿ.ಎಸ್.ಸುರಂಜನ್ ಸದರಿ ಸನ್ಮಾನ ಸಮಾರಂಭವನ್ನು ರದ್ದುಗೊಳಿಸುವಂತೆ ಸೂಚಿಸಿದ್ದರು. ಬಳಿಕ ಅದೇ ಸ್ಥಳದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸುವುದಾಗಿ ಬಿಜೆಪಿ ಪರವಾನಗಿ ತೆಗೆದುಕೊಂಡು ಕಾರ್ಯಕ್ರಮವನ್ನೂ ಆಯೋಜನೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕುರಿತಂತೆ ಸಮಗ್ರ ದಾಖಲೆಗಳ ಸಮೇತ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ.<br /> <br /> <strong>ಎಚ್ಡಿಕೆ ವಿರುದ್ಧ ದೂರು ದಾಖಲು</strong><br /> ಕೊಪ್ಪಳ: ಮತ ಯಾಚನೆ ವೇಳೆ ಆರತಿ ತಟ್ಟೆಯಲ್ಲಿ 500 ರೂಪಾಯಿ ನೋಟು ಹಾಕಿದ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ.<br /> <br /> ತಾಲ್ಲೂಕಿನ ಮುನಿರಾಬಾದ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 171(ಬಿ) (ಎಚ್) ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123 (1)ರಡಿ ಪ್ರಕರಣ ದಾಖಲಾಗಿದೆ.<br /> <br /> ಪಕ್ಷದ ಅಭ್ಯರ್ಥಿ ಪರ ಮತ ಯಾಚನೆಗೆ ತಾಲ್ಲೂಕಿನ ಕನಕಾಪುರ ತಾಂಡಾಕ್ಕೆ ತೆರಳಿದ್ದ ಕುಮಾರಸ್ವಾಮಿ, ಆರತಿ ಮಾಡುವಾಗ ತಟ್ಟೆಯಲ್ಲಿ 500 ರೂಪಾಯಿ ನೋಟ್ ಹಾಕಿದ್ದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎಂ.ಶರಣಬಸಪ್ಪ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ನಗರದಲ್ಲಿ ಸೆ. 23ರಂದು ಅಲ್ಪಸಂಖ್ಯಾತರ ಸಮಾವೇಶ ಆಯೋಜನೆ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ವೀಕ್ಷಕರು ಶನಿವಾರ ವರದಿ ಸಲ್ಲಿಸಿದ್ದಾರೆ.<br /> <br /> ಸಮಾವೇಶ ಆಯೋಜಿಸಿದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ನಿಗಾ ತಂಡ ಮಾಡಿರುವ ವಿಡಿಯೋ ಚಿತ್ರೀಕರಣ ಹಾಗೂ ಪತ್ರಿಕಾ ವರದಿಗಳು ಸೇರಿದಂತೆ ಪೂರಕ ದಾಖಲೆಗಳ ಸಮೇತ ವರದಿ ಸಲ್ಲಿಸಲಾಗಿದೆ.<br /> <br /> ಚುನಾವಣಾ ವೀಕ್ಷಕರು ಆಯೋಗಕ್ಕೆ ಈ ಸಂಬಂಧ ವರದಿ ಸಲ್ಲಿಸಿರುವುದನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಖಚಿತಪಡಿಸಿದ್ದಾರೆ.<br /> <br /> ಇದಲ್ಲದೆ ಸೆ. 23ರಂದು ನಗರದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಮಾವೇಶ ಕುರಿತಂತೆ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ.<br /> <br /> ಮೊದಲು ಪ್ರಚುರಪಡಿಸಿದಂತೆ, ಸದರಿ ಸ್ಥಳದಲ್ಲಿ ಭೋವಿ ಸಮಾಜದ ವತಿಯಿಂದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.<br /> <br /> ಆದರೆ, ನಗರಕ್ಕೆ ಭೇಟಿ ನೀಡಿದ್ದ ರಾಜ್ಯ ಚುನಾವಣಾ ಆಯೋಗದ ಮುಖ್ಯಾಧಿಕಾರಿ ಸಿ.ಎಸ್.ಸುರಂಜನ್ ಸದರಿ ಸನ್ಮಾನ ಸಮಾರಂಭವನ್ನು ರದ್ದುಗೊಳಿಸುವಂತೆ ಸೂಚಿಸಿದ್ದರು. ಬಳಿಕ ಅದೇ ಸ್ಥಳದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸುವುದಾಗಿ ಬಿಜೆಪಿ ಪರವಾನಗಿ ತೆಗೆದುಕೊಂಡು ಕಾರ್ಯಕ್ರಮವನ್ನೂ ಆಯೋಜನೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕುರಿತಂತೆ ಸಮಗ್ರ ದಾಖಲೆಗಳ ಸಮೇತ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ.<br /> <br /> <strong>ಎಚ್ಡಿಕೆ ವಿರುದ್ಧ ದೂರು ದಾಖಲು</strong><br /> ಕೊಪ್ಪಳ: ಮತ ಯಾಚನೆ ವೇಳೆ ಆರತಿ ತಟ್ಟೆಯಲ್ಲಿ 500 ರೂಪಾಯಿ ನೋಟು ಹಾಕಿದ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ.<br /> <br /> ತಾಲ್ಲೂಕಿನ ಮುನಿರಾಬಾದ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 171(ಬಿ) (ಎಚ್) ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123 (1)ರಡಿ ಪ್ರಕರಣ ದಾಖಲಾಗಿದೆ.<br /> <br /> ಪಕ್ಷದ ಅಭ್ಯರ್ಥಿ ಪರ ಮತ ಯಾಚನೆಗೆ ತಾಲ್ಲೂಕಿನ ಕನಕಾಪುರ ತಾಂಡಾಕ್ಕೆ ತೆರಳಿದ್ದ ಕುಮಾರಸ್ವಾಮಿ, ಆರತಿ ಮಾಡುವಾಗ ತಟ್ಟೆಯಲ್ಲಿ 500 ರೂಪಾಯಿ ನೋಟ್ ಹಾಕಿದ್ದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಚುನಾವಣಾಧಿಕಾರಿ ಎಂ.ಶರಣಬಸಪ್ಪ ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>