<p><strong>ಕೊಪ್ಪ: </strong>ತಾಲ್ಲೂಕಿನ ಮಾವಿನಕಟ್ಟೆ-ಕಮ್ಮರಡಿ ಎಂಟು ಕಿಲೋಮೀಟರ್ ರಸ್ತೆ ತೀವ್ರ ಹದಗೆಟ್ಟಿದ್ದು ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ರೈತ ಸಂಘ , ಹಸಿರುಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾನುವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.<br /> <br /> ಶೃಂಗೇರಿ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಗಡಿಭಾಗದಲ್ಲಿರುವ ಈ ರಸ್ತೆಯ ಅಭಿವೃದ್ಧಿಗೆ ಎರಡೂ ಕ್ಷೇತ್ರಗಳ ಶಾಸಕರು ಆಸಕ್ತಿ ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.<br /> <br /> ಮಳಲೂರು, ಕಂಚಿನಕೆರೆ, ಅಗಲಿ, ಹೊನಗಾರು, ಶಂಕರಪುರ, ಕೊಡೂರು, ಹೆಗ್ಗದ್ದೆ, ಶಾನುವಳ್ಳಿ ಮೊದಲಾದ ಗ್ರಾಮಗಳ ಪ್ರಮುಖ ಸಂಪರ್ಕ ರಸ್ತೆಯ ದುರವಸ್ಥೆ ಗಮನಿಸುವವರೇ ಇಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.<br /> <br /> ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ನೂರಾರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಸ್ತೆಯ ಗುಂಡಿಗಳಿಗೆ ಗಿಡ ನೆಟ್ಟು ಎರಡು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ಮಾಡಿದರು.<br /> <br /> ರೈತ ಸಂಘದ ಕರುವಾನೆ ನವೀನ್, ಬೆಳಗುಳ ಚಿಂತನ್, ಕುಪ್ಪಳಿ ಸುಧಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶೋಭಿಂತ್, ಗ್ರಾಮಸ್ಥರಾದ ಅಗಲಿ ನಾಗೇಶ್ ರಾವ್, ನಾಗರಾಜ್, ರಾಮಚಂದ್ರ, ಎಂ.ಕೆ.ಸತೀಶ್, ನವೀನ್, ಕೀರ್ತನ್, ಗ್ರಾ.ಪಂ. ಸದಸ್ಯೆ ಸರಸ್ವತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜಯಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ: </strong>ತಾಲ್ಲೂಕಿನ ಮಾವಿನಕಟ್ಟೆ-ಕಮ್ಮರಡಿ ಎಂಟು ಕಿಲೋಮೀಟರ್ ರಸ್ತೆ ತೀವ್ರ ಹದಗೆಟ್ಟಿದ್ದು ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ರೈತ ಸಂಘ , ಹಸಿರುಸೇನೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾನುವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.<br /> <br /> ಶೃಂಗೇರಿ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಗಡಿಭಾಗದಲ್ಲಿರುವ ಈ ರಸ್ತೆಯ ಅಭಿವೃದ್ಧಿಗೆ ಎರಡೂ ಕ್ಷೇತ್ರಗಳ ಶಾಸಕರು ಆಸಕ್ತಿ ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.<br /> <br /> ಮಳಲೂರು, ಕಂಚಿನಕೆರೆ, ಅಗಲಿ, ಹೊನಗಾರು, ಶಂಕರಪುರ, ಕೊಡೂರು, ಹೆಗ್ಗದ್ದೆ, ಶಾನುವಳ್ಳಿ ಮೊದಲಾದ ಗ್ರಾಮಗಳ ಪ್ರಮುಖ ಸಂಪರ್ಕ ರಸ್ತೆಯ ದುರವಸ್ಥೆ ಗಮನಿಸುವವರೇ ಇಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.<br /> <br /> ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ನೂರಾರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಸ್ತೆಯ ಗುಂಡಿಗಳಿಗೆ ಗಿಡ ನೆಟ್ಟು ಎರಡು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ಮಾಡಿದರು.<br /> <br /> ರೈತ ಸಂಘದ ಕರುವಾನೆ ನವೀನ್, ಬೆಳಗುಳ ಚಿಂತನ್, ಕುಪ್ಪಳಿ ಸುಧಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶೋಭಿಂತ್, ಗ್ರಾಮಸ್ಥರಾದ ಅಗಲಿ ನಾಗೇಶ್ ರಾವ್, ನಾಗರಾಜ್, ರಾಮಚಂದ್ರ, ಎಂ.ಕೆ.ಸತೀಶ್, ನವೀನ್, ಕೀರ್ತನ್, ಗ್ರಾ.ಪಂ. ಸದಸ್ಯೆ ಸರಸ್ವತಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜಯಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>