<p><strong>ಧಾರವಾಡ: </strong>ಇಲ್ಲಿನ ಕೊಳಗೇರಿ ಪ್ರದೇಶ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕೊಳಗೇರಿ ನಿವಾಸಿಗಳ ಹಿತಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸೇವಾ ಸಂಘದ ಸದಸ್ಯರು ಹಾಗೂ ಮಹಿಳಾ ಸ್ತ್ರೀ ಶಕ್ತಿ ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಕೊಳಚೆ ಪ್ರದೇಶಗಳಿಗೆ ಒಳಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ, ಅಂಗನ ವಾಡಿ ಕಟ್ಟಡಗಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ ಸೌಲಭ್ಯಗಳ ಕೊರತೆಯಿಂದ ಇಲ್ಲಿನ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ.<br /> <br /> ಮುಖ್ಯವಾಗಿ ಇಲ್ಲಿನ ಲಕ್ಷ್ಮೀ ಸಿಂಗನ ಕೇರಿಯಲ್ಲಿ ಮಧ್ಯಭಾಗದಲ್ಲಿ ಕೆರೆಯ ಹತ್ತಿರವಿರುವ ಮನೆಗಳಿಗೆ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲ. ಇದರಿಂದಾಗಿ ಮಳೆಗಾಲದಲ್ಲಿ ಮನೆಯ ಒಳಗಡೆ ನೀರು ಹರಿದು ಬರುತ್ತಿವೆ. ಮತ್ತು ಹೊಸ ಯಲ್ಲಾಪುರದಲ್ಲಿ ಸಾರ್ವಜನಿಕ ಶೌಚಾ ಲಯವಿದ್ದು ಅದಕ್ಕೆ ಬಳಸಲು ನೀರಿನ ಸೌಲಭ್ಯವಿಲ್ಲ. <br /> <br /> ಮತ್ತು ಸಾರಸ್ವತಪುರ ದಲ್ಲಿ ಅಂಗನವಾಡಿ ಮಕ್ಕಳ ಸಂಖ್ಯೆ ಹೆಚ್ಚಿದ್ದು, ಮಕ್ಕಳಿಗೆ ಸರಿಯಾದ ಅಂಗನವಾಡಿ ಕಟ್ಟಡದ ವ್ಯವಸ್ಥೆ ಇಲ್ಲ. ಈ ನಿಟ್ಟಿನಲ್ಲಿ ಕೊಳಚೆ ನಿವಾಸಿಗಳ ಸಮಸ್ಯೆ ಗಳತ್ತ ಸರ್ಕಾರ ಗಮನಹರಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.<br /> <br /> ಆಂಜನೇಯ ನಗರ, ನೆಹರೂ ನಗರ, ಸರಸ್ವತಿಪೂರ, ಅತ್ತಿಕೊಳ್ಳ, ಹಾವೇರ ಪೇಟ್, ಹೊಸಯಲ್ಲಾಪೂರ, ನಗರಕರ ಕಾಲೋನಿ, ಲಕ್ಷ್ಮೀ ಸಿಂಗನಕೇರಿ ಮತ್ತು ಜನ್ನತನಗರದ ನಿವಾಸಿಗಳು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಇಲ್ಲಿನ ಕೊಳಗೇರಿ ಪ್ರದೇಶ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕೊಳಗೇರಿ ನಿವಾಸಿಗಳ ಹಿತಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸೇವಾ ಸಂಘದ ಸದಸ್ಯರು ಹಾಗೂ ಮಹಿಳಾ ಸ್ತ್ರೀ ಶಕ್ತಿ ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.<br /> <br /> ಕೊಳಚೆ ಪ್ರದೇಶಗಳಿಗೆ ಒಳಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ, ಅಂಗನ ವಾಡಿ ಕಟ್ಟಡಗಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ ಸೌಲಭ್ಯಗಳ ಕೊರತೆಯಿಂದ ಇಲ್ಲಿನ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ.<br /> <br /> ಮುಖ್ಯವಾಗಿ ಇಲ್ಲಿನ ಲಕ್ಷ್ಮೀ ಸಿಂಗನ ಕೇರಿಯಲ್ಲಿ ಮಧ್ಯಭಾಗದಲ್ಲಿ ಕೆರೆಯ ಹತ್ತಿರವಿರುವ ಮನೆಗಳಿಗೆ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲ. ಇದರಿಂದಾಗಿ ಮಳೆಗಾಲದಲ್ಲಿ ಮನೆಯ ಒಳಗಡೆ ನೀರು ಹರಿದು ಬರುತ್ತಿವೆ. ಮತ್ತು ಹೊಸ ಯಲ್ಲಾಪುರದಲ್ಲಿ ಸಾರ್ವಜನಿಕ ಶೌಚಾ ಲಯವಿದ್ದು ಅದಕ್ಕೆ ಬಳಸಲು ನೀರಿನ ಸೌಲಭ್ಯವಿಲ್ಲ. <br /> <br /> ಮತ್ತು ಸಾರಸ್ವತಪುರ ದಲ್ಲಿ ಅಂಗನವಾಡಿ ಮಕ್ಕಳ ಸಂಖ್ಯೆ ಹೆಚ್ಚಿದ್ದು, ಮಕ್ಕಳಿಗೆ ಸರಿಯಾದ ಅಂಗನವಾಡಿ ಕಟ್ಟಡದ ವ್ಯವಸ್ಥೆ ಇಲ್ಲ. ಈ ನಿಟ್ಟಿನಲ್ಲಿ ಕೊಳಚೆ ನಿವಾಸಿಗಳ ಸಮಸ್ಯೆ ಗಳತ್ತ ಸರ್ಕಾರ ಗಮನಹರಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.<br /> <br /> ಆಂಜನೇಯ ನಗರ, ನೆಹರೂ ನಗರ, ಸರಸ್ವತಿಪೂರ, ಅತ್ತಿಕೊಳ್ಳ, ಹಾವೇರ ಪೇಟ್, ಹೊಸಯಲ್ಲಾಪೂರ, ನಗರಕರ ಕಾಲೋನಿ, ಲಕ್ಷ್ಮೀ ಸಿಂಗನಕೇರಿ ಮತ್ತು ಜನ್ನತನಗರದ ನಿವಾಸಿಗಳು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>