<p><strong>ಬೆಳಗಾವಿ: </strong>ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ನಗರದ ಏಳು ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಮನೆ ನಿರ್ಮಿಸಿಕೊಡುವ ರಾಜೀವ್ ಆವಾಸ್ ಯೋಜನೆಯ ಅನುಷ್ಠಾನವು ಭರದಿಂದ ಸಾಗಿದೆ.<br /> <br /> ಇಲ್ಲಿನ ಶ್ರೀನಗರ ಜೋಪಡಿ, ಗ್ಯಾಂಗವಾಡಿ, ಕಣಬರ್ಗಿ, ರಾಮನಗರ ವಡ್ಡರವಾಡಿ, ವಂಟಮುರಿ, ಅನಗೋಳದ ಹರಿಜನ ಕೇರಿ ಹಾಗೂ ಭಜಂತ್ರಿ ಓಣಿ ಪ್ರದೇಶವನ್ನು ಈ ಯೋಜನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.<br /> <br /> ಕೊಳಚೆ ನಿವಾಸಿಗಳಿಗೆ ಮನೆ ನಿರ್ಮಿಸಿಕೊಡಲು ರಾಜೀವ್ ಆವಾಸ್ ಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರವು ಶೇ 50ರಷ್ಟು, ರಾಜ್ಯ ಸರ್ಕಾರವು ಶೇ 40ರಷ್ಟು ಹಾಗೂ ಇನ್ನುಳಿದ ಹಣವನ್ನು ಫಲಾನುಭವಿಗಳು ಭರಿಸಬೇಕಾಗಿದೆ. ಯೋಜನೆಗೆ ಒಟ್ಟು ₹ 45 ಕೋಟಿ ಅನುದಾನ ಮಂಜೂರಾಗಿದೆ. ಅಂದಾಜು ₹ 4.5 ಲಕ್ಷದಲ್ಲಿ ಒಂದೊಂದು ಮನೆ ನಿರ್ಮಾಣಗೊಳ್ಳಲಿದೆ.<br /> <br /> ಶ್ರೀನಗರ ಜೋಪಡಿದಲ್ಲಿ 3+1 ಮಾದರಿಯ ಮನೆಗಳನ್ನು ನಿರ್ಮಿಸಿಕೊಡುವ ಕಾಮಗಾರಿ ಭರದಿಂದ ನಡೆದಿದೆ. ಇನ್ನುಳಿದ ಕಡೆಗಳಲ್ಲೂ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಜನರ ನಿರೀಕ್ಷೆಯಂತೆ ಮನೆ ನಿರ್ಮಿಸಲಾಗುವುದು ಎಂದು ಕೊಳಚೆ ನಿರ್ಮೂಲನಾ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಶಂಭುಲಿಂಗಪ್ಪ ಹೇಳಿದರು.<br /> <br /> ಇವೆಲ್ಲ ಪ್ರದೇಶಗಳಲ್ಲಿ ರಸ್ತೆ, ವಿದ್ಯುತ್ ಹಾಗೂ ನೀರಿನ ಸಂಪರ್ಕ ಸೇರಿದಂತೆ ಎಲ್ಲ ಮೂಲಸೌಕರ್ಯಗಳಿವೆ. ಈಗ ಅಲ್ಲಿ ವಾಸಯೋಗ್ಯ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಮುಂದಿನ ವರ್ಷದ ಮಾರ್ಚ್ ಒಳಗೆ ಯೋಜನೆ ಪೂರ್ಣಗೊಳಿಸಬೇಕಾಗಿದೆ. ಅದಕ್ಕಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.<br /> <br /> ಕೊಳಚೆ ಪ್ರದೇಶಗಳಲ್ಲೂ ಒತ್ತುವರಿ: ಕೊಳಚೆ ಪ್ರದೇಶ ಸೇರಿದಂತೆ ಹಲವು ಕಡೆ ಒತ್ತುವರಿಯಾಗಿದೆ. ಈಗಾಗಲೇ ಸರ್ವೇ ಕಾರ್ಯ ನಡೆಸಲಾಗಿದ್ದು, ಸುಮಾರು 80 ಕಡೆ ಒತ್ತುವರಿ ಪ್ರಕರಣಗಳು ಕಂಡುಬಂದಿವೆ. ಇವುಗಳಲ್ಲಿ 57 ಪ್ರಕರಣಗಳು ಕೊಳಚೆ ಪ್ರದೇಶಗಳಲ್ಲಿ ಒಳಪಡುತ್ತಿವೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಪ್ರಭು ತಿಳಿಸಿದರು.<br /> <br /> ಇಬ್ಬರು ಕಾರ್ಯ ನಿರ್ವಾಹಕ ನೇತೃತ್ವದಲ್ಲಿ ಸರ್ವೇ ತಂಡಗಳನ್ನು ರಚಿಸಲಾಗಿದೆ. ಒತ್ತುವರಿಯಾಗಿರುವ ನಾಲಾಗಳ ಬಗ್ಗೆ ಸರ್ವೇ ನಡೆಸುತ್ತಿದ್ದಾರೆ. ಇವರ ಸಂಪೂರ್ಣ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.<br /> <br /> ಕೊಳಚೆ ನಿರ್ಮೂಲನಾ ಮಂಡಳಿ ಜೊತೆಗೂಡಿ ರಾಜೀವ್ ಆವಾಸ್ ಯೋಜನೆಯಡಿ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಮನೆ ಕಟ್ಟಿಕೊಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ನಗರದ ಏಳು ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಮನೆ ನಿರ್ಮಿಸಿಕೊಡುವ ರಾಜೀವ್ ಆವಾಸ್ ಯೋಜನೆಯ ಅನುಷ್ಠಾನವು ಭರದಿಂದ ಸಾಗಿದೆ.<br /> <br /> ಇಲ್ಲಿನ ಶ್ರೀನಗರ ಜೋಪಡಿ, ಗ್ಯಾಂಗವಾಡಿ, ಕಣಬರ್ಗಿ, ರಾಮನಗರ ವಡ್ಡರವಾಡಿ, ವಂಟಮುರಿ, ಅನಗೋಳದ ಹರಿಜನ ಕೇರಿ ಹಾಗೂ ಭಜಂತ್ರಿ ಓಣಿ ಪ್ರದೇಶವನ್ನು ಈ ಯೋಜನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.<br /> <br /> ಕೊಳಚೆ ನಿವಾಸಿಗಳಿಗೆ ಮನೆ ನಿರ್ಮಿಸಿಕೊಡಲು ರಾಜೀವ್ ಆವಾಸ್ ಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರವು ಶೇ 50ರಷ್ಟು, ರಾಜ್ಯ ಸರ್ಕಾರವು ಶೇ 40ರಷ್ಟು ಹಾಗೂ ಇನ್ನುಳಿದ ಹಣವನ್ನು ಫಲಾನುಭವಿಗಳು ಭರಿಸಬೇಕಾಗಿದೆ. ಯೋಜನೆಗೆ ಒಟ್ಟು ₹ 45 ಕೋಟಿ ಅನುದಾನ ಮಂಜೂರಾಗಿದೆ. ಅಂದಾಜು ₹ 4.5 ಲಕ್ಷದಲ್ಲಿ ಒಂದೊಂದು ಮನೆ ನಿರ್ಮಾಣಗೊಳ್ಳಲಿದೆ.<br /> <br /> ಶ್ರೀನಗರ ಜೋಪಡಿದಲ್ಲಿ 3+1 ಮಾದರಿಯ ಮನೆಗಳನ್ನು ನಿರ್ಮಿಸಿಕೊಡುವ ಕಾಮಗಾರಿ ಭರದಿಂದ ನಡೆದಿದೆ. ಇನ್ನುಳಿದ ಕಡೆಗಳಲ್ಲೂ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಜನರ ನಿರೀಕ್ಷೆಯಂತೆ ಮನೆ ನಿರ್ಮಿಸಲಾಗುವುದು ಎಂದು ಕೊಳಚೆ ನಿರ್ಮೂಲನಾ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಶಂಭುಲಿಂಗಪ್ಪ ಹೇಳಿದರು.<br /> <br /> ಇವೆಲ್ಲ ಪ್ರದೇಶಗಳಲ್ಲಿ ರಸ್ತೆ, ವಿದ್ಯುತ್ ಹಾಗೂ ನೀರಿನ ಸಂಪರ್ಕ ಸೇರಿದಂತೆ ಎಲ್ಲ ಮೂಲಸೌಕರ್ಯಗಳಿವೆ. ಈಗ ಅಲ್ಲಿ ವಾಸಯೋಗ್ಯ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಮುಂದಿನ ವರ್ಷದ ಮಾರ್ಚ್ ಒಳಗೆ ಯೋಜನೆ ಪೂರ್ಣಗೊಳಿಸಬೇಕಾಗಿದೆ. ಅದಕ್ಕಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.<br /> <br /> ಕೊಳಚೆ ಪ್ರದೇಶಗಳಲ್ಲೂ ಒತ್ತುವರಿ: ಕೊಳಚೆ ಪ್ರದೇಶ ಸೇರಿದಂತೆ ಹಲವು ಕಡೆ ಒತ್ತುವರಿಯಾಗಿದೆ. ಈಗಾಗಲೇ ಸರ್ವೇ ಕಾರ್ಯ ನಡೆಸಲಾಗಿದ್ದು, ಸುಮಾರು 80 ಕಡೆ ಒತ್ತುವರಿ ಪ್ರಕರಣಗಳು ಕಂಡುಬಂದಿವೆ. ಇವುಗಳಲ್ಲಿ 57 ಪ್ರಕರಣಗಳು ಕೊಳಚೆ ಪ್ರದೇಶಗಳಲ್ಲಿ ಒಳಪಡುತ್ತಿವೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಪ್ರಭು ತಿಳಿಸಿದರು.<br /> <br /> ಇಬ್ಬರು ಕಾರ್ಯ ನಿರ್ವಾಹಕ ನೇತೃತ್ವದಲ್ಲಿ ಸರ್ವೇ ತಂಡಗಳನ್ನು ರಚಿಸಲಾಗಿದೆ. ಒತ್ತುವರಿಯಾಗಿರುವ ನಾಲಾಗಳ ಬಗ್ಗೆ ಸರ್ವೇ ನಡೆಸುತ್ತಿದ್ದಾರೆ. ಇವರ ಸಂಪೂರ್ಣ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.<br /> <br /> ಕೊಳಚೆ ನಿರ್ಮೂಲನಾ ಮಂಡಳಿ ಜೊತೆಗೂಡಿ ರಾಜೀವ್ ಆವಾಸ್ ಯೋಜನೆಯಡಿ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಮನೆ ಕಟ್ಟಿಕೊಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>