<p><strong>ಬೆಂಗಳೂರು:</strong> ಕೊಳೆಗೇರಿ ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಕೊಳೆಗೇರಿ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗಿ ಹೊಸ ನೀತಿ ಜಾರಿ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಬುಧವಾರ ಇಲ್ಲಿ ತಿಳಿಸಿದರು.<br /> <br /> ರಾಜ್ಯದಲ್ಲಿ ಒಟ್ಟು 2,723 ಕೊಳೆಗೇರಿಗಳು ಇವೆ. ಇವುಗಳಲ್ಲಿ ಬೆಂಗಳೂರು ನಗರದಲ್ಲೇ 500 ಕೊಳೆಗೇರಿ ಪ್ರದೇಶಗಳು ಇದ್ದು, ಅವುಗಳ ಅಭಿವೃದ್ಧಿಗೆ ಹೊಸ ನೀತಿ ಅನುಕೂಲಕರವಾಗಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> ನೀತಿಯ ಕರಡು ಸಿದ್ಧ ಆಗಿದ್ದು, ಎರಡು ತಿಂಗಳಲ್ಲಿ ಅದನ್ನು ಜಾರಿ ಮಾಡಲಾಗುವುದು. ಕೊಳೆಗೇರಿಗಳಲ್ಲಿ ನೆಲೆಸಿರುವ ಮತ್ತು ಮೂಲಸೌಲಭ್ಯಗಳಿಂದ ವಂಚಿತರಾದ ಎಲ್ಲರಿಗೂ ಮನೆ ನಿರ್ಮಿಸಿ ಕೊಡುವುದು ಇದರ ಉದ್ದೇಶ ಎಂದು ಹೇಳಿದರು.<br /> <br /> ಅಂದಾಜಿನ ಪ್ರಕಾರ 40 ಲಕ್ಷ ಜನರು ಈ ರೀತಿ ನೆಲೆಸಿದ್ದಾರೆ. ಸರ್ಕಾರಿ ಜಾಗದಲ್ಲಿ 496 ಕೊಳೆಗೇರಿಗಳು, ಖಾಸಗಿ ವ್ಯಕ್ತಿಗಳ ಜಾಗಗಳಲ್ಲಿ 606 ಮತ್ತು ಮಹಾನಗರ ಪಾಲಿಕೆ ಮತ್ತು ಪುರಸಭೆಗಳಿಗೆ ಸೇರಿದ ಜಾಗಗಳಲ್ಲಿ 1,084 ಕೊಳೆಗೇರಿಗಳು ಇವೆ ಎಂದು ಅವರು ವಿವರಿಸಿದರು.<br /> <br /> ಕನಿಷ್ಠ 300 ಚ.ಅಡಿ ಜಾಗದಲ್ಲಿ ಗುಡಿಸಲು ಹೊಂದಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಅದಕ್ಕಿಂತ ಕಡಿಮೆ ಜಾಗ ಇರುವವರಿಗೆ ಅಪಾರ್ಟ್ಮೆಂಟ್ ಮಾದರಿಯಲ್ಲಿ ಕಟ್ಟಡ ನಿರ್ಮಿಸಿ, ಮನೆಗಳನ್ನು ಹಂಚಲಾಗುವುದು. ಇದಕ್ಕೆ ಫಲಾನುಭವಿಗಳು ಕೂಡ ಸ್ವಲ್ಪ ಹಣ ನೀಡಬೇಕಾಗುತ್ತದೆ. ಉಳಿದ ಹಣವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.<br /> <br /> ಹೊಸ ಮನೆಗಳ ಖಾತೆಗಳನ್ನು ಮಹಿಳೆಯರ ಹೆಸರಿನಲ್ಲಿ ನೀಡಲು ಕೆಲ ತಿದ್ದುಪಡಿಗಳನ್ನು ಮಾಡಲಾಗುತ್ತದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊಳೆಗೇರಿ ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಕೊಳೆಗೇರಿ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗಿ ಹೊಸ ನೀತಿ ಜಾರಿ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಬುಧವಾರ ಇಲ್ಲಿ ತಿಳಿಸಿದರು.<br /> <br /> ರಾಜ್ಯದಲ್ಲಿ ಒಟ್ಟು 2,723 ಕೊಳೆಗೇರಿಗಳು ಇವೆ. ಇವುಗಳಲ್ಲಿ ಬೆಂಗಳೂರು ನಗರದಲ್ಲೇ 500 ಕೊಳೆಗೇರಿ ಪ್ರದೇಶಗಳು ಇದ್ದು, ಅವುಗಳ ಅಭಿವೃದ್ಧಿಗೆ ಹೊಸ ನೀತಿ ಅನುಕೂಲಕರವಾಗಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> ನೀತಿಯ ಕರಡು ಸಿದ್ಧ ಆಗಿದ್ದು, ಎರಡು ತಿಂಗಳಲ್ಲಿ ಅದನ್ನು ಜಾರಿ ಮಾಡಲಾಗುವುದು. ಕೊಳೆಗೇರಿಗಳಲ್ಲಿ ನೆಲೆಸಿರುವ ಮತ್ತು ಮೂಲಸೌಲಭ್ಯಗಳಿಂದ ವಂಚಿತರಾದ ಎಲ್ಲರಿಗೂ ಮನೆ ನಿರ್ಮಿಸಿ ಕೊಡುವುದು ಇದರ ಉದ್ದೇಶ ಎಂದು ಹೇಳಿದರು.<br /> <br /> ಅಂದಾಜಿನ ಪ್ರಕಾರ 40 ಲಕ್ಷ ಜನರು ಈ ರೀತಿ ನೆಲೆಸಿದ್ದಾರೆ. ಸರ್ಕಾರಿ ಜಾಗದಲ್ಲಿ 496 ಕೊಳೆಗೇರಿಗಳು, ಖಾಸಗಿ ವ್ಯಕ್ತಿಗಳ ಜಾಗಗಳಲ್ಲಿ 606 ಮತ್ತು ಮಹಾನಗರ ಪಾಲಿಕೆ ಮತ್ತು ಪುರಸಭೆಗಳಿಗೆ ಸೇರಿದ ಜಾಗಗಳಲ್ಲಿ 1,084 ಕೊಳೆಗೇರಿಗಳು ಇವೆ ಎಂದು ಅವರು ವಿವರಿಸಿದರು.<br /> <br /> ಕನಿಷ್ಠ 300 ಚ.ಅಡಿ ಜಾಗದಲ್ಲಿ ಗುಡಿಸಲು ಹೊಂದಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಅದಕ್ಕಿಂತ ಕಡಿಮೆ ಜಾಗ ಇರುವವರಿಗೆ ಅಪಾರ್ಟ್ಮೆಂಟ್ ಮಾದರಿಯಲ್ಲಿ ಕಟ್ಟಡ ನಿರ್ಮಿಸಿ, ಮನೆಗಳನ್ನು ಹಂಚಲಾಗುವುದು. ಇದಕ್ಕೆ ಫಲಾನುಭವಿಗಳು ಕೂಡ ಸ್ವಲ್ಪ ಹಣ ನೀಡಬೇಕಾಗುತ್ತದೆ. ಉಳಿದ ಹಣವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.<br /> <br /> ಹೊಸ ಮನೆಗಳ ಖಾತೆಗಳನ್ನು ಮಹಿಳೆಯರ ಹೆಸರಿನಲ್ಲಿ ನೀಡಲು ಕೆಲ ತಿದ್ದುಪಡಿಗಳನ್ನು ಮಾಡಲಾಗುತ್ತದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>